ಪಡಿತರ ವಿತರಣೆಗೂ ಇನ್ನು ಆಧಾರ್ ಕಾರ್ಡ್ ಕಡ್ಡಾಯ
Team Udayavani, Feb 10, 2017, 3:45 AM IST
ನವದೆಹಲಿ: ಎಲ್ಪಿಜಿ, ಮೊಬೈಲ್ ಸಿಮ್ ಆಯ್ತು. ಇದೀಗ ಪಡಿತರ ಆಹಾರ ಧಾನ್ಯ ವಿತರಣೆಗೂ ಆಧಾರ್ ಕಡ್ಡಾಯವಾಗಿದೆ. ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯ ಗುರುವಾರ ಈ ಬಗ್ಗೆ ಅಧಿಸೂಚನೆ ಹೊರಡಿಸಿದೆ.
ಕೇಂದ್ರ ಆಹಾರ ಭದ್ರತಾ ಕಾಯ್ದೆಯಡಿಗೆ ದೇಶದ ಎಲ್ಲ ಬಡವರಿಗೂ ಪಡಿತರ ಧಾನ್ಯ ವಿತರಿಸಲಾಗುತ್ತಿದ್ದು, ರಿಯಾಯಿತಿ ದರದ ಆಹಾರ ಧಾನ್ಯ ಪಡೆಯಬೇಕಾದರೆ ಆಧಾರ್ ಬೇಕಾಗಿದೆ. ಒಂದು ವೇಳೆ ಆಧಾರ್ ಹೊಂದಿಲ್ಲವಾದರೆ, ಜೂ.30ರೊಳಗೆ ಮಾಡಿಸಿಕೊಂಡು, ಪಡಿತರ ಪಟ್ಟಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಕಳೆದ ನವೆಂಬರ್ನಲ್ಲಷ್ಟೇ ದೇಶಾದ್ಯಂತ ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಈ ಮೂಲಕ ಪ್ರತಿಯೊಬ್ಬ ವ್ಯಕ್ತಿಗೆ 5 ಕೆಜಿ ಆಹಾರ ಧಾನ್ಯವನ್ನು 1ರಿಂದ 3 ರೂಪಾಯಿಗೆ ನೀಡಲಾಗುತ್ತಿದೆ. ಇದು 80 ಕೋಟಿ ಮಂದಿಗೆ ತಲುಪಿದೆ. ಈ ಅಧಿಸೂಚನೆಯು ಫೆ.8 ರಿಂದಲೇ ದೇಶಾದ್ಯಂತ ಜಾರಿಗೆ ಬಂದಿದ್ದು, ಎಲ್ಲರೂ ಕಡ್ಡಾಯವಾಗಿ ಆಧಾರ್ನಲ್ಲಿ ನೋಂದಣಿ ಮಾಡಿಸಿಕೊಳ್ಳಲೇಬೇಕಿದೆ. ಆದರೆ ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ, ಮೇಘಾಲಯಗಳಲ್ಲಿ ಸದ್ಯಕ್ಕೆ ಇದು ಜಾರಿಗೆ ಬರಲ್ಲ.
ಇದುವರೆಗೆ ಆಧಾರ್ ನೋಂದಣಿ ಮಾಡಿಸಿಕೊಳ್ಳದೇ ಇರುವವರು ಜೂ.30ರೊಳಗೆ ಸೇರಿಕೊಳ್ಳಬೇಕು. ಇಲ್ಲದಿದ್ದರೆ ರಿಯಾಯಿತಿ ದರದಲ್ಲಿ ಪಡಿತರ ಸಿಗುವುದು ಅಸಾಧ್ಯ ಎಂದು ಕೇಂದ್ರ ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ