ಲೋಕಪಾಲ ನೇಮಕ; ತೀರ್ಪು ಶೀಘ್ರ
Team Udayavani, Mar 29, 2017, 3:45 AM IST
ನವದೆಹಲಿ: ದೇಶದಲ್ಲಿ ಲೋಕಪಾಲರನ್ನು ನೇಮಕ ಮಾಡುವ ಕುರಿತ ಅರ್ಜಿಗಳ ವಿಚಾರಣೆ ಪೂರ್ಣಗೊಂಡಿದ್ದು, ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.
“ಎಲ್ಲರ ವಾದ-ಪ್ರತಿವಾದಗಳನ್ನು ನ್ಯಾಯಾಲಯ ಆಲಿಸಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ’ ಎಂದು ನ್ಯಾ. ರಂಜನ್ ಗೊಗೋಯ್ ನೇತೃತ್ವದ ಪೀಠ ಮಂಗಳವಾರ ಹೇಳಿದೆ. ವಿಚಾರಣೆ ವೇಳೆ ಲೋಕಪಾಲರ ನೇಮಕಕ್ಕೆ ವಿರೋಧ ವ್ಯಕ್ತಪಡಿಸಿದ ಅಟಾರ್ನಿ ಜನರಲ್ ಮುಕುಲ್ ರೋಹಟಗಿ, “ಲೋಕಪಾಲ ಕಾಯ್ದೆಯಲ್ಲಿ ಪ್ರತಿಪಕ್ಷ ನಾಯಕ ಎಂಬ ಪದದ ವ್ಯಾಖ್ಯಾನಕ್ಕೆ ಸಂಬಂಧಿಸಿದ ತಿದ್ದುಪಡಿ ವಿಚಾರ ಇನ್ನೂ ಸಂಸತ್ನಲ್ಲಿದೆ. ಇಂತಹ ಸಂದರ್ಭದಲ್ಲಿ ಲೋಕಪಾಲರ ನೇಮಕ ಸಾಧ್ಯವಿಲ್ಲ,’ ಎಂದರು.
ಲೋಕಪಾಲ ಮತ್ತು ಲೋಕಾಯುಕ್ತ ಕಾಯ್ದೆ 2013ರ ಪ್ರಕಾರ, ಲೋಕಸಭೆಯ ಪ್ರತಿಪಕ್ಷ ನಾಯಕನೇ ಲೋಕಪಾಲ ಆಯ್ಕೆ ಸಮಿತಿಯ ಭಾಗವಾಗಿರುತ್ತಾನೆ. ಆದರೆ, ಸದ್ಯ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕನೇ ಇಲ್ಲ. ಸಂಖ್ಯಾಬಲದ ಕೊರತೆಯಿಂದಾಗಿ ಕಾಂಗ್ರೆಸ್ಗೂ ಪ್ರತಿಪಕ್ಷ ನಾಯಕನ ಸ್ಥಾನ ನೀಡಲಾಗಿಲ್ಲ. ಪ್ರತಿಪಕ್ಷಗಳ ಪೈಕಿ ಅತಿದೊಡ್ಡ ಪಕ್ಷಕ್ಕೆ ಪ್ರತಿಪಕ್ಷ ನಾಯಕನ ಸ್ಥಾನ ನೀಡಬಹುದು ಎಂಬ ಪ್ರಸ್ತಾಪಕ್ಕೆ ಸಂಸತ್ನಲ್ಲಿ ಒಪ್ಪಿಗೆ ಸಿಗುವವರೆಗೂ ಲೋಕಪಾಲರ ನೇಮಕ ಸಾಧ್ಯವಿಲ್ಲ ಎಂದು ರೋಹಟಗಿ ವಾದಿಸಿದರು.
ಇದೇ ವೇಳೆ, ಎನ್ಜಿಒ ಕಾಮನ್ ಕಾಸ್ ಪರ ವಾದಿಸಿದ ಹಿರಿಯ ನ್ಯಾಯವಾದಿ ಶಾಂತಿ ಭೂಷಣ್, “ಸರ್ಕಾರವು ಉದ್ದೇ ಶಪೂರ್ವಕವಾಗಿ ಲೋಕಪಾಲರನ್ನು ನೇಮಕ ಮಾಡುತ್ತಿಲ್ಲ. ಲೋಕಪಾಲರನ್ನು ತ್ವರಿತವಾಗಿ ನೇಮಕ ಮಾಡಬೇಕೆಂದು ಸ್ವತಃ ಲೋಕಪಾಲ ಕಾಯ್ದೆಯೇ ಹೇಳುತ್ತದೆ,’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?