ದಾರಿ ತಪ್ಪಿದ 3 ಮಂದಿ, 13 ಯಾಕ್ಸ್‌ ಮತ್ತು 4 ಕರುಗಳನ್ನು ಚೀನಕ್ಕೆ ಹಸ್ತಾಂತರಿಸಿದ ಸೇನೆ


Team Udayavani, Sep 8, 2020, 6:51 PM IST

India-China-Lates

ಮಣಿಪಾಲ: ಲಡಾಖ್‌ ಗಡಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಹೊರತಾಗಿಯೂ, ಭಾರತೀಯ ಸೇನೆಯು ಸಂದರ್ಭ ಬಂದಾಗ ಚೀನಕ್ಕೆ ಮಾನವೀಯ ನೆಲೆಯಲ್ಲಿ ಸಹಾಯ ಮಾಡುತ್ತಿದೆ. ಈ ಮೂಲಕ ಭಾರತೀಯ ಸೇನೆ ಜಗತ್ತಿಗೆ ತನ್ನ ಹಿರಿಮೆಯನ್ನು ಎತ್ತಿ ತೋರಿಸಿದೆ.

ಚೀನ-ಭಾರತ ಗಡಿಯಲ್ಲಿ ಮೇಯುತ್ತಿದ್ದ ಚೀನೀ ಯಾಕ್ಸ್‌ ಮತ್ತು ಅದರ ಕರುಗಳನ್ನು ಸೋಮವಾರ ಲೈನ್‌ ಆಫ್ ಆಕ್ಚುವಲ್‌ ಕಂಟ್ರೋಲ್‌ (ಎಲ್‌ಎಸಿ) ಬಳಿ ಪತ್ತೆಯಾಗಿತ್ತು. ಇದನ್ನು ನೋಡಿದ ಭಾರತೀಯ ಸೈನಿಕರು ಅದನ್ನು ಚೀನಕ್ಕೆ ಹಸ್ತಾಂತರಿಸಿದೆ. ಸೇನೆಯ ಪೂರ್ವ ಕಮಾಂಡ್‌ ಈ ಬಗ್ಗೆ ಮಾಹಿತಿ ನೀಡಿದ್ದು, ಭಾರತೀಯ ಸೈನಿಕರ ಈ ಕಾರ್ಯಕ್ಕೆ ಚೀನದ ಅಧಿಕಾರಿಗಳೂ ಧನ್ಯವಾದಗಳನ್ನು ಅರ್ಪಿಸಿದ್ದಾಗಿ ತಿಳಿದುಬಂದಿದೆ.

ಈ ಕುರಿತಂತೆ ಚೀನದ ಸೇನೆ ಟ್ವೀಟ್‌ ಮಾಡಿದ್ದು, ಮಾನವೀಯತೆಯ ದೃಷ್ಟಿಯಿಂದ ಭಾರತೀಯ ಸೈನ್ಯವು ಸೆಪ್ಟೆಂಬರ್‌ 7ರಂದು 13 ಯಾಕ್‌ ಮತ್ತು ನಾಲ್ಕು ಕರುಗಳನ್ನು ಚೀನದ ಸೈನ್ಯಕ್ಕೆ ಹಸ್ತಾಂತರಿಸಿದೆ. ಈ ಯಾಕ್‌ಗಳು ಆಗಸ್ಟ್‌ 31ರಂದು ಎಲ್‌ಎಸಿ ದಾಟಿ ಅರುಣಾಚಲ ಪ್ರದೇಶದ ಪೂರ್ವಕ್ಕೆ ಬಂದಿದ್ದವು. ಸೈನಿಕರಿಗೆ ನಾವು ಕೃತಜ್ಞತೆ ಅರ್ಪಿಸುವುದಾಗಿ ಅವರು ಹೇಳಿದ್ದಾರೆ.

ಚೀನದ 3 ನಾಗರಿಕರಿಗೆ ಸಹಾಯ ಮಾಡಿದ ಭಾರತ
ಮತ್ತೂಂದು ಉದಾಹರಣೆಯಲ್ಲಿ ಹಾದಿ ತಪ್ಪಿದ 3 ಚೀನೀ ನಾಗರಿಕರಿಗೆ ಭಾರತೀಯ ಸೇನೆಯು ಸಹಾಯ ಮಾಡಿದೆ. ಈ ಘಟನೆ ಸೆಪ್ಟೆಂಬರ್‌ 3 ರಂದು ನಡೆದಿತ್ತು. ಚೀನದ ನಾಗರಿಕರು ಸಿಕ್ಕಿಂನ ಉತ್ತರ ಭಾಗದಲ್ಲಿ ದಾರಿ ತಪ್ಪಿದ್ದರು. ಪರಿಣಾಮವಾಗಿ ಅವರು 17,500 ಅಡಿ ಎತ್ತರದಲ್ಲಿರುವ ಪ್ರದೇಶದತ್ತ ತೆರಳಬೇಕಾಯಿತು. ಇದು ಅತೀ ಎತ್ತರದಲ್ಲಿರುವ ಪ್ರದೇಶವಾಗಿದೆ. ಇಲ್ಲಿ ಉಸಿರಾಡಲು ಆಮ್ಲಜನಕದ ಕೊರತೆ ಕಂಡುಬರುತ್ತದೆ. ಚೀನದ ನಾಗರಿಕರ ಜೀವಕ್ಕೆ ಅಪಾಯವಿದೆ ಎಂಬುದನ್ನು ಅರಿತ ಭಾರತೀಯ ಸೇನೆಯು ತತ್‌ಕ್ಷಣ ಅಲ್ಲಿಗೆ ತೆರಳಿ ಆಮ್ಲಜನಕ ಮತ್ತು ಇತರ ವೈದ್ಯಕೀಯ ನೆರವುಗಳನ್ನು ನೀಡಿದೆ. ಪರಿಸ್ಥಿತಿಯ ತೀವ್ರತೆಗಾಗಿ ಅವರಿಗೆ ಆಹಾರ ಮತ್ತು ಬೆಚ್ಚಗಿನ ಬಟ್ಟೆಗಳನ್ನು ಸಹ ನೀಡಲಾಯಿತು.

ಐದು ಹುಡುಗರನ್ನು ಅಪಹರಿಸಿದ ಆರೋಪದಲ್ಲಿ ಚೀನ
ಸೆಪ್ಟೆಂಬರ್‌ 5ರಂದು ಅರುಣಾಚಲ ಪ್ರದೇಶದ ಐದು ಹುಡುಗರನ್ನು ಚೀನ ಅಪಹರಿಸಿದೆ ಎಂದು ಸ್ಥಳಿಯ ಕಾಂಗ್ರೆಸ್‌ ಶಾಸಕ ನಿನೊಂಗ್‌ ಎರಿಂಗ್‌ ಟ್ವಿಟ್ಟರ್‌ನಲ್ಲಿ ಹೇಳಿಕೊಂಡಿದ್ದಾರೆ. ಅಪಹರಣಕ್ಕೆ ಒಳಗಾಗಿದ್ದಾರೆ ಎಂದು ಹೇಳಲಾಗುವ 5 ಹುಡುಗರ ಹೆಸರನ್ನೂ ಬಹಿರಂಗಪಡಿಸಲಾಗಿದೆ. ಐವರು ಬಾಲಕರನ್ನು ಸುರಕ್ಷಿತವಾಗಿ ಹಿಂದಿರುಗಿಸಬೇಕು ಎಂದು ಅವರು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಮನವಿ ಮಾಡಿದ್ದಾರೆ. ಈ ಪ್ರಕರಣದಲ್ಲಿ ಅರುಣಾಚಲ ಪೊಲೀಸರು ಸಹ ತನಿಖೆ ಆರಂಭಿಸಿದ್ದಾರೆ.

 

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.