ಆಗ್ರಾ ಬಾರ್ ಕೌನ್ಸಿಲ್ ಅಧ್ಯಕ್ಷೆ ಹತ್ಯೆ
Team Udayavani, Jun 13, 2019, 5:48 AM IST
ಆಗ್ರಾ: ಉತ್ತರ ಪ್ರದೇಶದ ಬಾರ್ ಕೌನ್ಸಿಲ್ನ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಎರಡು ದಿನಗಳ ಹಿಂದಷ್ಟೇ ಆಯ್ಕೆಯಾಗಿದ್ದ ದರ್ವೇಶ್ ಯಾದವ್ (38) ಎಂಬ ವಕೀಲರನ್ನು ಅವರ ಸಹೋದ್ಯೋಗಿ ಹಾಗೂ ವಕೀಲ ಮನೀಶ್ ಶರ್ಮಾ ಎಂಬಾತ ಗುಂಡಿಕ್ಕಿ ಹತ್ಯೆಗೈದಿದ್ದಾನೆ.
ಆಗ್ರಾ ನ್ಯಾಯಾಲಯದ ಆವರಣದಲ್ಲಿ ನಡೆದ ಸಮಾರಂಭವೊಂದಕ್ಕೆ ದರ್ವೇಶ್ ಆಗಮಿಸಿದ್ದಾಗ ಮನೀಶ್ ಶರ್ಮಾ ಹತ್ತಿರದಿಂದ ಅವರ ಮೇಲೆ ಮೂರು ಸುತ್ತು ಗುಂಡು ಹಾರಿಸಿ, ಆನಂತರ ತನಗೆ ತಾನೇ ಗುಂಡು ಹಾರಿಸಿಕೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಗ್ರಾ ನ್ಯಾಯಾಲಯದಲ್ಲಿ ದರ್ವೇಶ್ ಅವರ ಕೊಠಡಿಯಲ್ಲೇ ಕಾರ್ಯ ನಿರ್ವಹಿಸುತ್ತಿದ್ದ ಮನೀಶ್, ದರ್ವೇಶ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ. ಬಾರ್ ಕೌನ್ಸಿಲ್ ಚುನಾವಣೆಯಲ್ಲಿ ದರ್ವೇಶ್ ಪರ ಪ್ರಚಾರವನ್ನೂ ಕೈಗೊಂಡಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್