ಬಾಂಧವ್ಯ ದೃಢವಾಗಿಯೇ ಇದೆ: ಎಐಎಡಿಎಂಕೆ-ಬಿಜೆಪಿ ಸಂಬಂಧ ಕುರಿತು ಸಿ.ಟಿ. ರವಿ
Team Udayavani, Dec 31, 2020, 2:45 AM IST
ಚೆನ್ನೈ: ತಮಿಳುನಾಡಿನ ಆಡಳಿತಾರೂಡ ಎಐಎಡಿಎಂಕೆ ಮತ್ತು ಬಿಜೆಪಿ ನಡುವೆ ಬಾಂಧವ್ಯ ದೃಢವಾಗಿಯೇ ಇದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಚೆನ್ನೈಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಣ್ಣಾಡಿಎಂಕೆಯೇ ದೊಡ್ಡ ಪಕ್ಷ. ಹೀಗಾಗಿ, ಅದರ ನಾಯಕರೇ ಮುಖ್ಯಮಂತ್ರಿಯಾಗಬೇಕು ಎಂದರು. ಒತ್ತಡ ಹೇರುವ ರಾಷ್ಟ್ರೀಯ ಪಕ್ಷಗಳ ಮೈತ್ರಿ ಬೇಡ ಮತ್ತು ಚುನಾವಣೆಯಲ್ಲಿ ಗೆದ್ದರೆ ಅಧಿಕಾರ ಹಂಚಿಕೆ ಇಲ್ಲ ಎಂಬ ಅಣ್ಣಾಡಿಎಂಕೆ ನಾಯಕರ ಹೇಳಿಕೆ ನಡುವೆಯೇ ರವಿಯವರ ಹೇಳಿಕೆ ಮಹತ್ವ ಪಡೆದಿದೆ.
ಚುನಾವಣ ಆಯೋಗ ವಿಧಾನಸಭೆ ಚುನಾ ವಣೆ ದಿನಾಂಕ ಘೋಷಣೆ ಮಾಡುತ್ತಲೇ, ಮುಖ್ಯಮಂತ್ರಿ ಹುದ್ದೆಗೆ ಯಾರು ಸೂಕ್ತ ವ್ಯಕ್ತಿ ಎಂಬ ಬಗ್ಗೆ ಎನ್ಡಿಎ ನಾಯಕರು ಸಭೆ ಸೇರಿ ನಿರ್ಧರಿಸುತ್ತಾರೆ ಎಂದರು ರವಿ. ರಾಜಕೀಯ ಪ್ರವೇಶ ಮಾಡುವು ದಿಲ್ಲ ಎಂಬ ಸೂಪರ್ಸ್ಟಾರ್ ರಜನಿ ಕಾಂತ್ ನಿರ್ಧಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆಯಲ್ಲಿ ಅವರ ಬೆಂಬಲ ಯಾಚಿಸುತ್ತೇವೆ. ತಮಿಳುನಾಡಿನ ಹಿತ ಕಾಯುವ ಸಂದರ್ಭದಲ್ಲಿ ಅವರು ಮುಕ್ತ ವಾಗಿ ಮಾತನಾಡಿದ್ದಾರೆ. ಅವರೊಬ್ಬ ದೊಡ್ಡ ನಾಯಕ ಎಂದರು. ಇದೇ ಸಂದರ್ಭದಲ್ಲಿ ಕ್ರಿಕೆಟ್ ವೀಕ್ಷಕ ವಿವರಣೆಗಾರ ಲಕ್ಷ್ಮಣ್ ಶಿವರಾಮಕೃಷ್ಣನ್ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
MUST WATCH
ಹೊಸ ಸೇರ್ಪಡೆ
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ