ಸಾಲಗಾರ ರೈತರನ್ನು ಜೈಲಿಗಟ್ಟಲ್ಲ: ರಾಹುಲ್ ಗಾಂಧಿ
Team Udayavani, Apr 19, 2019, 6:00 AM IST
ನವದೆಹಲಿ: ಈ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ, ಸಾಲ ಮಾಡಿರುವ ರೈತರನ್ನು ಯಾವುದೇ ಕಾರಣಕ್ಕೂ ಜೈಲಿಗಟ್ಟಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ಧಾನ ಮಾಡಿದ್ದಾರೆ.
ಉತ್ತರಪ್ರದೇಶದ ಬದೌನ್ ಹಾಗೂ ಗುಜರಾತ್ನ ವಂಥಿಲ್ನಲ್ಲಿ ಗುರುವಾರ ಅವರು ಚುನಾವಣಾ ಪ್ರಚಾರ ರ್ಯಾಲಿ ನಡೆಸಿ ಮಾತನಾಡಿದ್ದಾರೆ. ಸಾವಿರಾರು ಕೋಟಿ ರೂ. ಸಾಲ ಮಾಡಿರುವ ದೊಡ್ಡ ದೊಡ್ಡ ಉದ್ಯಮಿಗಳನ್ನು ಜೈಲಿಗಟ್ಟುವ ಬದಲು, ಅವರಿಗೆ ವಿದೇಶಕ್ಕೆ ಪರಾರಿಯಾಗಲು ಅವಕಾಶ ಕಲ್ಪಿಸಲಾ ಗುತ್ತಿದೆ. ಆದರೆ, ಕೇವಸ 20 ಸಾವಿರ ರೂ. ಸಾಲ ಮಾಡಿ ಮರುಪಾವತಿ ಮಾಡಲು ಸಾಧ್ಯವಾಗದೇ ಇರುವ ರೈತರನ್ನು ಜೈಲಿಗಟ್ಟಲಾಗುತ್ತಿದೆ. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹೀಗಾಗುವುದಿಲ್ಲ. ದೊಡ್ಡ ದೊಡ್ಡ ಸುಸ್ತಿದಾರರನ್ನು ಜೈಲಿಗೆ ಕಳುಹಿಸು ವವರೆಗೆ ಯಾವೊಬ್ಬ ರೈತರನ್ನೂ ಕಂಬಿ ಎಣಿಸುವಂತೆ ಮಾಡುವುದಿಲ್ಲ ಎಂದಿದ್ದಾರೆ ರಾಹುಲ್.
ಇದೇ ವೇಳೆ, ಎಸ್ಪಿ -ಬಿಎಸ್ಪಿ ವಿರುದ್ಧವೂ ವಾಗ್ಧಾಳಿ ನಡೆಸಿದ ಅವರು, ಎರಡೂ ಪಕ್ಷಗಳು ಯಾವತ್ತಾದರೂ ಚೌಕಿದಾರ್ ಚೋರ್ ಹೆ ಎಂದು ಹೇಳಿದ್ದಿದೆಯೇ? ಅವರು ಹೇಳುವುದಿಲ್ಲ. ಏಕೆಂದರೆ, ಈ ಎರಡೂ ಪಕ್ಷಗಳು ಬಿಜೆಪಿ ಜತೆ ಕೈಜೋಡಿಸಿವೆ ಎಂದು ಆರೋಪಿಸಿದ್ದಾರೆ.
ನಮ್ಮ ಸರ್ಕಾರ ಅಧಿ ಕಾರಕ್ಕೆ ಬಂದರೆ, ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸುತ್ತೇವೆ ಮತ್ತು ಕನಿಷ್ಠ ಬೆಂಬಲ ಬೆಲೆ ಘೋಷಿಸುತ್ತೇವೆ ಎಂದೂ ಆಶ್ವಾಸನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?