ಕಟ್ಟುವವರ ಬದುಕು ಕೆಡವಿ ಹೋದರೂ ಕೇಳುವವರಿಲ್ಲ!


Team Udayavani, Aug 8, 2017, 8:55 AM IST

kattada.jpg

ಹೊಸದಿಲ್ಲಿ: ಕೃಷಿಯ ಬಳಿಕ ದೇಶದ ಆರ್ಥಿಕ ಚಟುವಟಿಕೆಗೆ ಅತಿ ಹೆಚ್ಚು ಕೊಡುಗೆ ನೀಡುತ್ತಿರುವುದು ಮತ್ತು ಅತಿ ಹೆಚ್ಚು ಉದ್ಯೋಗ ಕಲ್ಪಿಸಿರುವ ಕ್ಷೇತ್ರವೆಂದರೆ, ಅದು ಕಟ್ಟಡ ನಿರ್ಮಾಣ ಉದ್ಯಮ. ಸರಕಾರವೇ ಹೇಳುವ ಪ್ರಕಾರ, ರಿಯಲ್‌ ಎಸ್ಟೇಟ್‌ ಉದ್ದಿಮೆಯು ಕಳೆದ 4 ವರ್ಷಗಳಲ್ಲಿ ಶೇ.80ರಷ್ಟು ಪ್ರಗತಿ ಕಂಡಿದೆ. ಆದರೆ, ದೀಪದ ಬುಡದಲ್ಲಿ ಕತ್ತಲು ಎನ್ನುವಂತೆ ಈ ಸ್ಫೋಟಕ ಬೆಳವಣಿಗೆಯ ಹಿಂದಿನ ಕರಾಳ ಮುಖ ಮಾತ್ರ ಹೆಚ್ಚಿನವರಿಗೆ ತಿಳಿದಿರಲಿಕ್ಕಿಲ್ಲ.

ಹೌದು, ಕಟ್ಟಡ ನಿರ್ಮಾಣ ಕಾರ್ಮಿಕರ ಪೈಕಿ ನೂರಾರು ಮಂದಿ ಪ್ರತಿ ವರ್ಷ ಕೆಲಸದ ವೇಳೆಯೇ ಒಂದಿಲ್ಲೊಂದು ಕಾರಣಗಳಿಂದ ಸಾವಿಗೀಡಾಗುತ್ತಿದ್ದಾರೆ. ಕಟ್ಟಡದ ಮೇಲಿಂದ ಬಿದ್ದು, ವಿದ್ಯುತ್‌ ಆಘಾತಕ್ಕೀಡಾಗಿ ಅಥವಾ ಕಟ್ಟಡದ ಅವಶೇಷಗಳಡಿ ಸಿಲುಕಿ ಮೃತಪಡುವ ಕಾರ್ಮಿಕರ ಸಂಖ್ಯೆಗೆ ಲೆಕ್ಕವೇ ಇಲ್ಲ. ಇನ್ನು ಇಂತಹ ಘಟನೆಗಳಿಂದ ಗಾಯಗೊಂಡು, ನರಕದ ಜೀವನ ಅನುಭವಿಸುತ್ತಿರುವವರೂ ಇದ್ದಾರೆ. ಆದರೆ, ಈ ಕಾರ್ಮಿಕರ ಸುರಕ್ಷತೆ ಬಗ್ಗೆ ಸರಕಾರದ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ನಿರ್ಮಾಣ ಕಾಮಗಾರಿ ವೇಳೆ ಮೃತಪಟ್ಟ ಕಾರ್ಮಿಕರ ಬಗ್ಗೆ ಅಧಿಕೃತ ಮಾಹಿತಿಯೇ ಸರಕಾರದ ಬಳಿಯಿಲ್ಲ ಎನ್ನುತ್ತದೆ ಎನ್‌ಡಿಟಿವಿ ವರದಿ.

ಸತ್ತವರೆಷ್ಟೋ?: ಕಟ್ಟಡ ನಿರ್ಮಾಣ ಕಾರ್ಮಿಕರ ಸಾವಿಗೆ ಸಂಬಂಧಿಸಿ ಹೊರಬಿದ್ದ ಏಕೈಕ ಮಾಹಿತಿಯೆಂದರೆ 2015ರ ಮಾ.16ರಂದು ಲೋಕಸಭೆಯಲ್ಲಿ ಸರಕಾರ ನೀಡಿದ ಲಿಖೀತ ಉತ್ತರ. ಅದರಲ್ಲಿ 2012ರಿಂದ 2015ರವರೆಗೆ ದೇಶಾದ್ಯಂತ 77 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಆರ್‌ಟಿಐ ಅನ್ವಯ ಮಾಹಿತಿ ಕೋರಿ 17 ರಾಜ್ಯಗಳಿಗೆ ಪತ್ರ ಬರೆದಾಗ, ಸಿಕ್ಕ ಉತ್ತರವೇನೆಂದರೆ, 2013ರಿಂದ 2016ರ ಅವಧಿಯಲ್ಲಿ 452 ಕಟ್ಟಡ ಕಾರ್ಮಿಕರು ಮೃತಪಟ್ಟರೆ, 212 ಮಂದಿ ಗಾಯಗೊಂಡಿದ್ದಾರೆ ಎಂದು. ಅಂದರೆ, ಸರಕಾರ ನೀಡಿರುವ ಅಂಕಿ ಸಂಖ್ಯೆಗಿಂತ 6 ಪಟ್ಟು ಅಧಿಕ.

ಇನ್ನೂ ಅಚ್ಚರಿಯ ವಿಚಾರವೆಂದರೆ, ಇಂಥ ಕಾರ್ಮಿಕರ ಸಾವಿನ ಸಂಖ್ಯೆಯನ್ನು ಸಂಗ್ರಹಿಸುತ್ತಿ ರುವ ಎನ್‌ಜಿಒವೊಂದು ನೀಡಿರುವ ಮಾಹಿತಿ ಪ್ರಕಾರ, 2013-2016ರ ಅವಧಿಯಲ್ಲಿ ಮೃತ ಪಟ್ಟ ಕಾರ್ಮಿಕರ ಸಂಖ್ಯೆ 1,092. ಗಾಯ 
ಗೊಂಡವರು 377. ವಿವರವಾಗಿ ಈ ಕುರಿತು ಮಾಹಿತಿ ಸಂಗ್ರಹಿಸಲು ಹೋದರೆ, ಈ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯೇ ಅಧಿಕ ಎಂದು ಅಹಮದಾಬಾದ್‌ ಮೂಲದ ಸಾಮಾಜಿಕ ಹೋರಾಟಗಾರ ವಿಪುಲ್‌ ಪಾಂಡ್ಯ ಹೇಳುತ್ತಾರೆ. ಇದಕ್ಕೆ ಕಾರ್ಮಿಕರ ಸುರಕ್ಷತೆಗಾಗಿ ಯಾವುದೇ ಕ್ರಮ ಕೈಗೊಳ್ಳದೇ ಇರುವುದು, ಇಂಥ ಕಾರ್ಮಿಕರ ಬಗ್ಗೆ ಸರಕಾರ ದೂರದೃಷ್ಟಿ ಹೊಂದಿರದೇ ಇರುವುದು ಕಾರಣ ಎಂದೂ ಅವರು ಹೇಳುತ್ತಾರೆ.

ಇವರ ನೋವು ಕೇಳ್ಳೋರ್ಯಾರು?
– ಕಟ್ಟಡ ಕಾರ್ಮಿಕರ ಸಾವಿಗೆ ಹೆಚ್ಚಾಗಿ ಎತ್ತರದಿಂದ ಬೀಳುವುದು, ಗೋಡೆ ಕುಸಿತ ಕಾರಣ
– ಶೇ.15ರಷ್ಟು ಮಂದಿ ವಿದ್ಯುತ್‌ ಆಘಾತದಿಂದ ಸಾವು
– ಮೃತರಲ್ಲಿ ಹೆಚ್ಚಿನವರು ವಲಸೆ ಕಾರ್ಮಿಕರು
– ಹೆಚ್ಚು ಸಾವು ನೋವು ಸಂಭವಿಸಿದ್ದು ವಿದ್ಯುತ್‌ ಸ್ಥಾವರ, ಏರ್‌ಪೋರ್ಟ್‌, ರಾಷ್ಟ್ರೀಯ ಹೆದ್ದಾರಿ, ರಸ್ತೆ ನಿರ್ಮಾಣ ಕಾಮಗಾರಿಗಳ ಸಂದರ್ಭದಲ್ಲಿ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.