ರಾಜೀವ್ ಕುಮಾರ್ ಬಂಧನಕ್ಕೆ ಸುಪ್ರೀಂ ಅನುಮತಿ ಕೇಳಿದ ಸಿಬಿಐ
Team Udayavani, Apr 8, 2019, 6:30 AM IST
ಹೊಸದಿಲ್ಲಿ: ಶಾರದಾ ಚಿಟ್ ಫಂಡ್ ಹಾಗೂ ರೋಸ್ ವ್ಯಾಲಿ ಹಗರಣದಲ್ಲಿ ಕೋಲ್ಕತ್ತಾ ಪೊಲೀಸ್ ಕಮೀಷನರ್ ರಾಜೀವ್ ಕುಮಾರ್ರನ್ನು ಬಂಧಿಸಲು ಅನುಮತಿ ನೀಡುವಂತೆ ಸುಪ್ರೀಂಕೋರ್ಟ್ಗೆ ಸಿಬಿಐ ಮೊರೆ ಹೋಗಿದೆ.
ಈಗಾಗಲೇ ಸುಪ್ರೀಂಕೋರ್ಟ್ ಬಂಧನಕ್ಕೆ ಮಧ್ಯಂತರ ತಡೆ ನೀಡಿದ್ದು, ಇದನ್ನು ತೆರವುಗೊಳಿಸಬೇಕು ಮತ್ತು ಮೋಸದ ಸ್ಕೀಮ್ಗಳಲ್ಲಿ ದೊಡ್ಡ ಮಟ್ಟದ ಜಾಲವಿದ್ದು, ಇದನ್ನು ಬೇಧಿಸಲು ಅವರನ್ನು ಬಂಧಿಸುವುದು ಅನಿವಾರ್ಯವಾಗಿದೆ ಎಂದು ಸಿಬಿಐ ಹೇಳಿದೆ.
ಅಷ್ಟೇ ಅಲ್ಲ, ಈ ಹಿಂದೆ ರಾಜೀವ್ ಕುಮಾರ್ರನ್ನು ವಿಚಾರಣೆ ನಡೆಸಲು ಸಿಬಿಐ ಕೋಲ್ಕತ್ತಾಗೆ ಹೋದಾಗ ಸಿಎಂ ಮಮತಾ ಬ್ಯಾನರ್ಜಿ ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದರಿಂದ ಇಂತಹ ಸನ್ನಿವೇಶ ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕು ಎಂದು ಆದೇಶವನ್ನೂ ನೀಡುವಂತೆ ಕೋರಿದೆ. ಮೋಸದ ಸ್ಕೀಮ್ನಲ್ಲಿ ಭಾಗಿಯಾಗಿರುವ ಬಗ್ಗೆ ಕುಮಾರ್ ಮತ್ತು ಇತರ ಹಲವು ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ. ಈಗಾಗಲೇ ನಡೆಸಿದ ವಿಚಾರಣೆ ವೇಳೆ ಕೋಲ್ಕತ್ತಾ ಪೊಲೀಸರು ಹಾಗೂ ಎಸ್ಐಟಿ ಸೂಕ್ತ ಸಹಕಾರ ನೀಡುತ್ತಿಲ್ಲ ಎಂದೂ ಸಿಬಿಐ ಹೇಳಿದೆ. ಸಿಬಿಐ ವಾದ ಕುರಿತು ಸೋಮವಾರ ಮುಖ್ಯ ನ್ಯಾಯ ಮೂರ್ತಿ ರಂಜನ್ ಗೊಗೋಯ್ ವಿಚಾರಣೆ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ