ಪಾಕ್ನಿಂದ ಕದನ ವಿರಾಮ ಉಲ್ಲಂಘನೆ: ಯೋಧ ಹುತಾತ್ಮ
Team Udayavani, May 16, 2018, 6:15 AM IST
ಜಮ್ಮು: ಪಾಕಿಸ್ತಾನ ಸೇನಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಸಾಂಬಾ ವಲಯದಲ್ಲಿ ಕದನ ವಿರಾಮ ನಿಯಮ
ಉಲ್ಲಂಘಿಸಿ ಗುಂಡು ಹಾರಿಸಿವೆ. ಹೀಗಾಗಿ 28 ವರ್ಷದ ಬಿಎಸ್ಎಫ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು
ಅರೆ ಸೇನಾಪಡೆಯ ಮುಖ್ಯಸ್ಥ ಕೆ.ಕೆ.ಶರ್ಮಾ ಹೇಳಿದ್ದಾರೆ.
ಸಾಂಬಾ ವಲಯದ ಮಂಗೂಚರಕ್ ಎಂಬಲ್ಲಿರುವ ಗಡಿ ಹೊರಠಾಣೆ ಸಮೀಪ ಪಾಕ್ ಸೈನಿಕರು ಒಳ ನುಸುಳಲು
ಮುಂದಾಗಿದ್ದರು. ಅದಕ್ಕಾಗಿ ಅವರು ಗುಂಡು ಹಾರಿಸುತ್ತಾ ಒಳ ಪ್ರವೇಶಿಸಿದರು. ಈ ಸಂದರ್ಭದಲ್ಲಿ ಯೋಧರು ಸೂಕ್ತ
ಪ್ರತ್ಯುತ್ತರ ನೀಡಿ ಗುಂಡು ಹಾರಿಸಿ ಅವರ ಪ್ರಯತ್ನ ಹಿಮ್ಮೆಟ್ಟಿಸಿದರು. ಈ ಸಂದರ್ಭದಲ್ಲಿ ಒಬ್ಬ ಯೋಧ
ಹುತಾತ್ಮರಾದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಕಣಿವೆ ರಾಜ್ಯಕ್ಕೆ ಮೇ 19ರಂದು ಭೇಟಿ ನೀಡಲಿರುವಂತೆಯೇ ಉಗ್ರರು ಎಲ್
ಒಸಿ ಮೂಲಕ ಒಳ ನುಸುಳಲು ಮಾಡಿದ ಎರಡು ಪ್ರಯತ್ನಗಳನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ. ಇದರ
ಹೊರತಾಗಿಯೂ ಐವರು ಸದಸ್ಯರ ಉಗ್ರರ ತಂಡ ಒಳನುಸುಳುವಲ್ಲಿ ಯಶಸ್ವಿಯಾಗಿದೆ. ಅವರ ಪತ್ತೆಗಾಗಿ ಸೇನೆ
ಹೆಲಿಕಾಪ್ಟರ್ಗಳನ್ನು ಬಳಸುತ್ತಿದೆ. ಜನವರಿ ಮತ್ತು ಫೆಬ್ರವರಿಯಲ್ಲಿ ಸತತವಾಗಿ ಕದನ ವಿರಾಮ ಉಲ್ಲಂಘನೆಯ
ಪ್ರಕರಣಗಳು ವರದಿಯಾದ ಬಳಿಕ ಇತ್ತೀಚಿನ ತಿಂಗಳುಗಳಲ್ಲಿ ಎಲ್ಒಸಿ ವ್ಯಾಪ್ತಿಯಲ್ಲಿ ಗುಂಡಿನ ಸದ್ದಿನ ಪ್ರಮಾಣ
ಗಣನೀಯವಾಗಿ ತಗ್ಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ