ಅನಾಮಿಕ ಅಧಿಕಾರಿಗಳ ವಿರುದ್ಧ ದೂರು ನೀಡಿಲ್ಲ ಎಂದ ಕೇಂದ್ರ
Team Udayavani, May 10, 2019, 6:00 AM IST
ಹೊಸದಿಲ್ಲಿ: ರಫೇಲ್ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಅನ್ನು ತಪ್ಪುದಾರಿಗೆಳೆದ ಕಾರಣಕ್ಕೆ ಅನಾಮಿಕ ಅಧಿಕಾರಿಗಳ ವಿರುದ್ಧ ಕೇಂದ್ರ ಸರಕಾರ ದೂರು ದಾಖಲಿಸಿದೆ ಎಂಬ ಆರೋಪ ನಿರಾಧಾರ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರಕಾರ ಹೇಳಿದೆ. ಈ ಸಂಬಂಧ ಅಫಿಡವಿಟ್ ಅನ್ನು ಕೋರ್ಟ್ಗೆ ಸಲ್ಲಿಸಲಾ ಗಿದ್ದು, ನಾವು ದಾಖಲೆಗಳ ಆಧಾರದಲ್ಲಿ ವಾದ ಮಂಡಿಸುತ್ತಿದ್ದೇವೆ. ಆದರೆ ದೂರು ದಾರರು ಮಾಧ್ಯಮದಲ್ಲಿ ಪ್ರಕಟವಾದ ಆಯ್ದ ಕದ್ದ ಕಡತಗಳನ್ನು ಆಧರಿಸಿ ವಾದಿಸುತ್ತಿದ್ದಾರೆ. ಇದು ರಕ್ಷಣಾ ವಹಿವಾಟಿನ ಅಪೂರ್ಣ ಚಿತ್ರಣವನ್ನು ನೀಡುತ್ತಿದೆ ಎಂದು ಸರಕಾರದ ಪರ ವಕೀಲರು ವಾದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ವಿಚಾರಣೆ ನಡೆಸಲು ಮುಖ್ಯ ನ್ಯಾ| ರಂಜನ್ ಗೊಗೋಯ್ ನೇತೃತ್ವದ ಪೀಠ ನಿರ್ಧರಿಸಿದೆ.
ಇನ್ನೊಂದೆಡೆ, ಹೆಚ್ಚುವರಿ ಅಫಿಡವಿಟ್ ಸಲ್ಲಿಸಿರುವ ದೂರುದಾರರಾದ ಯಶವಂತ ಸಿನ್ಹಾ, ಅರುಣ್ ಶೌರಿ ಹಾಗೂ ವಕೀಲ ಪ್ರಶಾಂತ್ ಭೂಷಣ್, ಸುಪ್ರೀಂಕೋರ್ಟ್ ನಿಂದ ತಮಗೆ ಬೇಕಾದ ತೀರ್ಪನ್ನು ಪಡೆ ಯಲು ಕೋರ್ಟನ್ನು ಕೇಂದ್ರ ಸರಕಾರವು ತಪ್ಪುದಾರಿಗೆ ಎಳೆದಿದೆ ಹಾಗೂ ಮೋಸ ಮಾಡಿದೆ. ಈಗಲೂ ಕೋರ್ಟ್ಗೆ ಡೀಲ್ನ ಸಮಗ್ರ ಮಾಹಿತಿಯನ್ನು ಕೇಂದ್ರ ಬಹಿರಂಗಗೊಳಿಸುತ್ತಿಲ್ಲ ಎಂದು ವಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ