ಆನೆಗಳ ವಂಶಾವಳಿ ದತ್ತಾಂಶ ರಚನೆಗೆ ಕೇಂದ್ರ ಸರಕಾರ ಸಜ್ಜು
Team Udayavani, Sep 20, 2022, 6:20 AM IST
ಹೊಸದಿಲ್ಲಿ: ಮನುಷ್ಯರ ವಶದಲ್ಲಿರುವ ಆನೆಗಳ ಅಕ್ರಮ ಮಾರಾಟ ತಪ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಹೆಜ್ಜೆ ಇಟ್ಟಿದ್ದು, ಅವುಗಳ ವಂಶಾವಳಿ ದತ್ತಾಂಶ ರಚನೆಗೆ ಮುಂದಾಗಿದೆ. ಈ ಬಗ್ಗೆ ಶೀಘ್ರವೇ ರಾಜ್ಯ ಸರಕಾರಗಳಿಗೆ ಸೂಚನೆ ನೀಡುವ ಸಾಧ್ಯತೆಯಿದೆ.
ದೇಶದಲ್ಲಿ ಸದ್ಯ 2,675 ವಶದಲ್ಲಿರುವ ಆನೆಗಳಿವೆ. ಖಾಸಗಿ ವ್ಯಕ್ತಿಗಳು ಹಾಗೂ ಸಂಘ, ಸಂಸ್ಥೆಗಳು, ಧಾರ್ಮಿಕ ಕ್ಷೇತ್ರಗಳು ಹಾಗೂ ಇನ್ನಿತರರು ಈ ಆನೆಗಳನ್ನು ಸಾಕುವುದಕ್ಕೆ ಪರವಾನಿಗೆ ಪಡೆದಿದ್ದಾರೆ. ಒಟ್ಟು 1,251 ಆನೆ ಮಾಲಕತ್ವ ಪರವಾನಿಗೆ ನೀಡಲಾಗಿದೆ.
ಈಗ ಎಲ್ಲ ಆನೆ ಹಾಗೂ ಅದರ ಮಾಲಕರ ವಿವರವನ್ನು ಪಟ್ಟಿ ಮಾಡಲಾಗುವುದು. ಹಾಗೆಯೇ ಅವುಗಳ ಡಿಎನ್ಎ ವರದಿಯನ್ನೂ ಸಂಗ್ರಹಿಸಿಟ್ಟುಕೊಳ್ಳಲಾಗುವುದು. ಇದರಿಂದ ಆನೆಗಳ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಬಹುದು ಎಂದು ಕೇಂದ್ರ ಪರಿಸರ ಇಲಾಖೆ ತಿಳಿಸಿದೆ.
ಯಾವುದೇ ಆನೆ ವಿಷ ಸೇವನೆ ಹೊರೆತು ಬೇರಾವುದೇ ಕಾರಣಕ್ಕೆ ಸಾವನ್ನಪ್ಪಿದರೆ ಅದನ್ನು ಅಂತ್ಯಸಂಸ್ಕಾರ ಮಾಡದೆ, ಬೇರೆ ಪ್ರಾಣಿಗಳ ಆಹಾರಕ್ಕೆ ಬಳಸಿಕೊಳ್ಳಬಹುದು ಎಂದು ಕೇಂದ್ರವು ರಾಜ್ಯ ಸರಕಾರಗಳಿಗೆ ನಿರ್ದೇಶಿಸಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!