ಕೆರೆಗಳ ಡಿನೋಟಿಫೈಗೆ ಕೇಂದ್ರ ಸರಕಾರ ವಿರೋಧ
Team Udayavani, Aug 11, 2017, 6:00 AM IST
ಹೊಸದಿಲ್ಲಿ: ದೇಶದ ಯಾವುದೇ ಕೆರೆಗಳ ಡಿನೋಟಿಫೈಗೆ ಒಪ್ಪಿಗೆ ನೀಡುವುದಿಲ್ಲ ಎಂದು ಕೇಂದ್ರ ಸರಕಾರ ಹೇಳಿದೆ. ಇದು ಒಪ್ಪತಕ್ಕ ಕ್ರಮವೂ ಅಲ್ಲ ಎಂದು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಹೇಳಿದ್ದಾರೆ.
ಲೋಕಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕರ್ನಾಟಕ 1,600 ಕೆರೆಗಳ ಡಿನೋಟಿಫೈ ಬಗ್ಗೆ ಚಿಂತನೆ ನಡೆಸಿದೆ ಎಂಬ ಬಗ್ಗೆ ಕೇಂದ್ರ ಸರಕಾರಕ್ಕೆ ಯಾವುದೇ ರೀತಿಯ ಮಾಹಿತಿ ಬಂದಿಲ್ಲ ಎಂದರು.
ಕರ್ನಾಟಕ ಈ ಬಗ್ಗೆ ಪ್ರಸ್ತಾವನೆಯನ್ನೂ ಸಲ್ಲಿಸಿಲ್ಲ ಎಂದ ಅವರು, ಒಂದು ವೇಳೆ ಇಂಥ ಪ್ರಸ್ತಾವನೆ ಬಂದರೆ ರಾಜ್ಯ ಸರಕಾರದಿಂದ ವರದಿ ಕೇಳುವುದಾಗಿ ಹೇಳಿದರು. ಅಲ್ಲದೆ ಕೆರೆಗಳ ಡಿನೋಟಿಫೈಗೆ ಕೇಂದ್ರ ಸರಕಾರದ ವಿರೋಧವಿದೆ. ಇದು ಉತ್ತಮ ಕೆಲಸವಲ್ಲ ಎಂದು ಅವರು ತಿಳಿಸಿದರು.
ಈ ಮಧ್ಯೆ, ದೇಶದಲ್ಲಿ ಮಳೆ ಪರಿಸ್ಥಿತಿ ಅತಂತ್ರವಾ ಗಿದ್ದು, ಕೆಲವು ಕಡೆಗಳಲ್ಲಿ ಬಂದರೆ, ಇನ್ನು ಕೆಲವು ಕಡೆ ಗಳಲ್ಲಿ ಬರುವುದೇ ಇಲ್ಲ. ಹೀಗಾಗಿ ನೀರಿನ ಸಂಗ್ರಹಕ್ಕೆ ಹೆಚ್ಚೆಚ್ಚು ಯೋಜನೆಗಳನ್ನು ಕೈಗೊಳ್ಳಲು ಚಿಂತನೆ ನಡೆಸಿರುವುದಾಗಿ ಅವರು ಲೋಕಸಭೆಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ