ಮಕ್ಕಳನ್ನು ಗುಂಡು ಹಾರಿಸಿ ಕೊಂದು ಬಾವಿಗೆ ಎಸೆದರು
Team Udayavani, May 26, 2019, 6:00 AM IST
ಸಾಂದರ್ಭಿಕ ಚಿತ್ರ.
ಲಕ್ನೋ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ, ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಶುಕ್ರವಾರ ಸಂಜೆ ಏಕಾಏಕಿ ನಾಪತ್ತೆಯಾಗಿದ್ದ ಮೂವರು ಮಕ್ಕಳ ಮೃತದೇಹಗಳು ಶನಿವಾರ ಬೆಳಗ್ಗೆ ಕೊಳವೆಬಾವಿಯೊಂದರಲ್ಲಿ ಪತ್ತೆಯಾಗಿವೆ.
ಮಕ್ಕಳ ದೇಹದಲ್ಲಿ ಗುಂಡಿನ ಗಾಯಗಳು ಪತ್ತೆಯಾಗಿವೆ. ಮೃತರನ್ನು ಆಸ್ಮಾ (8), ಅಲಿಬಾ (7) ಹಾಗೂ ಅಬ್ದುಲ್ಲಾ (8) ಎಂದು ಗುರುತಿಸಲಾಗಿದ್ದು, ದುಷ್ಕರ್ಮಿಗಳು ಇವರನ್ನು ಅಪಹರಿಸಿ, ಅನಂತರ ಗುಂಡು ಹಾರಿಸಿ ಕೊಂದು, ಕೊಳವೆಬಾವಿಯಲ್ಲಿ ಎಸೆದು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಏಕಾಏಕಿ ನಾಪತ್ತೆಯಾಗಿದ್ದ ಮಕ್ಕಳಿಗಾಗಿ ಶುಕ್ರವಾರವೇ ಹುಡುಕಾಟ ನಡೆಸಿದ್ದ ಪೋಷಕರು, ಅನಂತರ ಪೊಲೀಸರಿಗೆ ಲಿಖೀತ ದೂರು ಸಲ್ಲಿಸಿದ್ದರೂ, ಪೊಲೀಸರು ಎಫ್ಐಆರ್ ದಾಖಲಿಸಿರಲಿಲ್ಲ ಎಂದು ಪೋಷಕರು ದೂರಿದ್ದಾರೆ. ಕರ್ತವ್ಯ ಲೋಪದಡಿ ಸಂಬಂಧಪಟ್ಟ ಪೊಲೀಸ್ ಸಿಬಂದಿಯನ್ನು ಅಮಾನತುಗೊಳಿಸಿದ್ದು, ದುಷ್ಕರ್ಮಿಗಳ ಪತ್ತೆಗೆ ನಾಲ್ಕು ತಂಡಗಳನ್ನು ರಚಿಸಿರುವುದಾಗಿ ಬುಲಂದರ್ಶಹರ್ ಪೊಲೀಸ್ ವರಿಷ್ಠಾಧಿಕಾರಿ ಎನ್. ಕೊಲಾಂಚಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ