ಸಂಶೋಧನಾರ್ಥಿಗಳ ಸಹಾಯಧನ ಶೇ.20 ಏರಿಕೆ
Team Udayavani, Jan 31, 2019, 12:30 AM IST
ಹೊಸದಿಲ್ಲಿ: ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿರುವ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಸಂಶೋಧನಾರ್ಥಿಗಳ ಬೇಡಿಕೆಗೆ ಮಣಿದಿರುವ ಕೇಂದ್ರ ಸರಕಾರ, ಜೂನಿಯರ್ ರಿಸರ್ಚ್ ಫೆಲೋಶಿಪ್ ಮಾಡುತ್ತಿರುವವರ ಸಹಾಯಧನವನ್ನು ಶೇ.20 ಏರಿಕೆ ಮಾಡಿದೆ. ಈ ಮೂಲಕ ಇದುವರೆಗೆ ಮಾಸಿಕ 25 ಸಾವಿರ ರೂ. ಸಹಾಯಧನ ಪಡೆಯುತ್ತಿದ್ದವರು ಇನ್ನು ಮುಂದೆ 31 ಸಾವಿರ ರೂ. ಪಡೆಯಲಿದ್ದಾರೆ. ಸೀನಿಯರ್ ರಿಸರ್ಚ್ ಫೆಲೋಶಿಪ್ ಮಾಡುತ್ತಿರುವವರಿಗೆ 35 ಸಾವಿರ ರೂ. ಸಿಗಲಿದೆ. ವಿಚಿತ್ರವೆಂದರೆ 2010ರ ನಂತರ ಸಂಶೋಧನಾರ್ಥಿಗಳ ಸಹಾಯಧನ ಏರಿಕೆ ಮಾಡೇ ಇರಲಿಲ್ಲ. ಆದರೆ, ಕೇಂದ್ರ ಸರಕಾರದ ಈ ನಿರ್ಧಾರವನ್ನು ತಿರಸ್ಕರಿಸಿರುವ ಸಂಶೋಧ ನಾರ್ಥಿಗಳು, ಈ ಏರಿಕೆ ಯಾವುದಕ್ಕೂ ಸಾಲುವುದಿಲ್ಲ ಎಂದಿ¨ªಾರೆ. ತಾವು ಬೇಡಿಕೆ ಇಟ್ಟಿದ್ದು ಜೆಆರ್ಎಫ್ಗೆ 50 ಸಾವಿರ, ಸಿಆರ್ಎಫ್ಗೆ 56 ಸಾವಿರ ರೂ. ನೀಡಬೇಕು ಎಂದು. ಆದರೆ, ಸರಕಾರ ನಮ್ಮ ಬೇಡಿಕೆಯನ್ನು ಪೂರ್ಣವಾಗಿ ಈಡೇರಿಸಿಲ್ಲ. ಹೀಗಾಗಿ ಪ್ರತಿಭಟನೆ ಕೈಬಿಡುವುದಿಲ್ಲ ಎಂದಿದ್ದಾರೆ.
ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಳ
ದೇಶದ ಎಲ್ಲಾ ವಿವಿಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳಕ್ಕೆ ಯುಜಿಸಿ ಒಪ್ಪಿಗೆ ನೀಡಿದ್ದು, ಪ್ರತಿ ಉಪನ್ಯಾಸಕ್ಕೆ 1500 ರೂ. ನಿಗದಿ ಮಾಡಿದ್ದು, ಮಾಸಿಕ 50 ಸಾವಿರ ರೂ. ಮೀರದಂತೆ ವೇತನ ನೀಡಬಹುದು ಎಂದಿದೆ. ಈ ಸಂಬಂಧ ಎಲ್ಲ ವಿಶ್ವವಿದ್ಯಾಲಯಗಳಿಗೆ ಮಾರ್ಗಸೂಚಿಗಳನ್ನು ಕಳುಹಿಸಿದ್ದು, ಜ.28 ರಿಂದಲೇ ಅನ್ವಯವಾಗುವಂತೆ ಈ ನಿಯಮ ಜಾರಿ ಮಾಡಬೇಕೆಂದು ಸೂಚನೆ ನೀಡಲಾಗಿದೆ. ಅಲ್ಲದೆ ಆಯ್ಕೆ ವಿಧಾನಗಳ ಬಗ್ಗೆಯೂ ಹೊಸ ಮಾರ್ಗ ಸೂಚಿಗಳನ್ನು ನೀಡಲಾಗಿದೆ. ಕೇವಲ ಅಂಗೀಕಾರವಾದ ಹುದ್ದೆಗಳಿಗೆ ಮಾತ್ರ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳಬೇಕು, ಒಂದು ವೇಳೆ ಹೆಚ್ಚು ಕೆಲಸವಿದ್ದರೆ ಅಂಗೀಕಾರವಾದ ಹುದ್ದೆಗಳ ಶೇ.20 ರಷ್ಟು ಹೆಚ್ಚುವರಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬಹುದು ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ