ವರ್ಷಾಂತ್ಯಕ್ಕೆ ದೇಶದ ಮೊದಲ ಲಸಿಕೆ?
ಕೊವ್ಯಾಕ್ಸಿನ್ ಕುರಿತು ಸಚಿವ ಹರ್ಷವರ್ಧನ್ ಮಾಹಿತಿ
Team Udayavani, Aug 22, 2020, 6:15 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಜಾಗತಿಕವಾಗಿ ಕೋವಿಡ್ ಲಸಿಕೆ ಪ್ರಯೋಗ ಪ್ರಕ್ರಿಯೆಗಳು ತ್ವರಿತವಾಗಿ ಸಾಗುತ್ತಿದ್ದು, ಭಾರತದ ಮೊದಲ ಕೋವಿಡ್ ಲಸಿಕೆ ಕೊವ್ಯಾಕ್ಸಿನ್ ಪ್ರಸಕ್ತ ವರ್ಷಾಂತ್ಯವೇ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಹೇಳಿದ್ದಾರೆ.
ಶುಕ್ರವಾರ ಮಾತನಾಡಿದ ಅವರು, ಹೈದರಾಬಾದ್ ಮೂಲದ ಭಾರತ್ ಬಯೋ ಟೆಕ್ ಅಭಿವೃದ್ಧಿಪಡಿಸಿರುವ ಕೊವ್ಯಾ ಕ್ಸಿನ್ ಲಸಿಕೆಯ ಮಾನವನ ಮೇಲಿನ ಪ್ರಯೋಗ ಆರಂಭವಾಗಿ 2 ವಾರಗಳು ಕಳೆದಿವೆ. ವರ್ಷಾಂತ್ಯದಲ್ಲಿ ಇದು ಬಳಕೆಗೆ ಸಿಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಕೂಡ ತನ್ನ ಲಸಿಕೆಯನ್ನು ಈ ತಿಂಗಳಿಂದಲೇ ಮಾನವನ ಮೇಲೆ ಪ್ರಯೋಗಿಸಲಿದೆ. ಈ ಸಂಸ್ಥೆ ಕೂಡ 2020ರ ಅಂತ್ಯದೊಳಗೆ ಲಸಿಕೆ ಹೊರತರಲು ಶ್ರಮಿಸುತ್ತಿದೆ ಎಂದೂ ಹರ್ಷವರ್ಧನ್ ಹೇಳಿದ್ದಾರೆ.
ಭಾರತ್ ಬಯೋಟೆಕ್ ಸಂಸ್ಥೆಯು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಹಭಾಗಿತ್ವದಲ್ಲೇ ಲಸಿಕೆಯ ಪ್ರಯೋಗ ನಡೆಸಿದ್ದು, ಅದು ಯಶಸ್ವಿಯಾದರೆ ಸರಕಾರಕ್ಕೆ ಅಗ್ಗದ ಮತ್ತು ಸಬ್ಸಿಡಿ ದರದಲ್ಲಿ ಲಸಿಕೆಯನ್ನು ಒದಗಿಸಲಿದೆ. ಇದೇ ರೀತಿ, ಬೇರೆ ಸಂಸ್ಥೆಗಳೊಂದಿಗೆ ಸರಕಾರ ಒಪ್ಪಂದ ಮಾಡಿಕೊಳ್ಳಲು ಮುಂದಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಹೊಸ ಮಾದರಿ ಪರೀಕ್ಷೆಗೆ ಅನುಮತಿ
ಹೊಸದಿಲ್ಲಿ: ಕೊರೊನಾ ಸೋಂಕು ತಪಾಸಣೆಗೆ ಇದುವರೆಗೆ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಸಂಗ್ರ ಹಿಸಲಾಗುತ್ತಿತ್ತು. ಆದರೆ, ಇನ್ನು ಮುಂದೆ ಬಾಯಿ ಮುಕ್ಕಳಿಸಿದ ನೀರನ್ನು ಪರೀಕ್ಷೆಗೆ ಬಳಸಿಕೊಳ್ಳಲು ಭಾರತೀಯ ವೈದ್ಯಕೀಯ ಸಂಶೋ ಧನಾ ಮಂಡಳಿ (ಐಸಿಎಂಆರ್) ನಿರ್ಧರಿಸಿದೆ.
ಹೊಸದಿಲ್ಲಿಯ ಏಮ್ಸ್ ಆಸ್ಪತ್ರೆ ಯಲ್ಲಿ 50 ಕೊರೊನಾ ಶಂಕಿತರ ಗಂಟಲು ದ್ರವವನ್ನು ಪರೀಕ್ಷೆಗೆ ಸಂಗ್ರಹಿ ಸ ಲಾಗಿತ್ತು. ಈ ಪ್ರಕ್ರಿಯೆ ಯಿಂದ ಹಲವರಲ್ಲಿ ಕೆಮ್ಮು, ಗಂಟಲು ಬೇನೆ ತೀವ್ರಗೊಂಡಿತ್ತು. ಅಲ್ಲದೆ, ದ್ರವಸಂಗ್ರ ಹಿಸಿದ ಸಿಬ್ಬಂದಿ ಯಲ್ಲೂ ಸೋಂಕು ಕಾಣಿಸಿ ಕೊಂಡಿತ್ತು. ಈ ಹಿನ್ನೆಲೆಯಲ್ಲಿ ಐಸಿಎಂಆರ್, ಬಾಯಿ ಮುಕ್ಕಳಿಸಿದ ನೀರಿನ ಪರೀಕ್ಷೆಗೆ ಅನುಮತಿ ಕಲ್ಪಿಸಿದೆ.
ಲಾಭವೇ ಹೆಚ್ಚು
ಸ್ವತಃ ರೋಗಿಗಳೇ ಈ ದ್ರವ ಸಂಗ್ರ ಹಿಸಿ, ಪರೀಕ್ಷೆಗೆ ನೀಡಬಹುದು.
ಮಾದರಿ ಸಂಗ್ರಹಕ್ಕೆ ಹಣ ಖರ್ಚಿರುವುದಿಲ್ಲ
ಸಮಯವೂ ಉಳಿತಾಯ
62,282 ಮಂದಿ ಗುಣಮುಖ
ಕೊರೊನಾ ಸೋಂಕಿತರ ಗುಣಮುಖ ಪ್ರಮಾಣ ಸಕಾರಾತ್ಮಕವಾಗಿ ಸಾಗಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 62,282 ಮಂದಿ ಗುಣ ಮುಖರಾಗಿ ಮನೆಗೆ ಮರಳಿದ್ದಾರೆ. ಈ ಮೂಲಕ ಗುಣಮುಖ ಪ್ರಮಾಣ ಶೇ.74 ದಾಟಿದ್ದು, 21.58 ಲಕ್ಷಕ್ಕೂ ಹೆಚ್ಚು ಮಂದಿ ಈವರೆಗೆ ವಾಸಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇದೇ ವೇಳೆ, ಗುರುವಾರ ಬೆಳಗ್ಗೆ 8ರಿಂದ ಶುಕ್ರವಾರ ಬೆಳಗ್ಗೆ 8ರವರೆಗೆ 68,898 ಮಂದಿಗೆ ಸೋಂಕು ದೃಢಪಟ್ಟಿದ್ದು, 983 ಮಂದಿ ಸಾವಿಗೀಡಾಗಿದ್ದಾರೆ. ದೇಶದ ಮರಣ ಪ್ರಮಾಣ ಶೇ.1.89ಕ್ಕಿಳಿದಿದೆ ಎಂದೂ ಸಚಿವಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ