ಹಸಿರು ದೀಪಾವಳಿಯತ್ತ ದೇಶದ ಚಿತ್ತ


Team Udayavani, Oct 23, 2019, 8:00 PM IST

green-crackers

ಹೊಸದಿಲ್ಲಿ: ದೀಪಗಳ ಹಬ್ಬ ದೀಪಾವಳಿಯನ್ನು ವಾಯು ಮಾಲಿನ್ಯ ರಹಿತವಾಗಿ ಆಚರಿಸಲು ಹಸಿರು ಪಟಾಕಿಯನ್ನು ಪರಿಚಯಿಸಲಾಗಿದೆ. ಕಳೆದ ವರ್ಷವೇ ಇದನ್ನು ಪರಿಚಯಿಸಲಾಗಿದ್ದರೂ, ಪೂರ್ವ ಸಿದ್ಧತೆಯ ಕೊರತೆಯಿಂದ ಮಾರುಕಟ್ಟೆಗೆ ಬಂದಿಲ್ಲ. ವಾಯುಮಾಲಿನ್ಯವನ್ನು ಕಡಿಮೆ ಮಾಡುವ ಉದ್ದೇಶ‌ದಿಂದ ಸಿಎಸ್‌ಐಆರ್‌ (ಕೌನ್ಸಿಲ್‌ ಆಫ್ ಸೈಂಟಿಫಿಕ್‌ ಆ್ಯಂಡ್‌ ಇಂಡಸ್ಟ್ರಿಯಲ್‌ ರಿಸರ್ಚ್‌) ಇದನ್ನು ಪರಿಚಯಿಸಿದೆ. ಕಳೆದ ವರ್ಷವೇ ದೇಶದಲ್ಲಿ ಹಸಿರು ಪಟಾಕಿ ಪರಿಚಯಿಸಲಾಗಿದ್ದರೂ ಮಾರುಕಟ್ಟೆಗೆ ಪೂರ್ಣ ಇನ್ನೂ ಬಂದಿಲ್ಲ.

ಏನಿದು ಹಸಿರು ಪಟಾಕಿ ?

ಕಡಿಮೆ ಶಬ್ದ ಮತ್ತು ಕಡಿಮೆ ಹೊಗೆ ಹೊಂದಿರುವ ಈ ಪಟಾಕಿಗಳನ್ನು ಹಸಿರು ಪಟಾಕಿ ಎಂದು ಕರೆಯಲಾಗುತ್ತದೆ. ಸಾಮಾನ್ಯ ಪಟಾಕಿಗೆ ಹೋಲಿಸಿದರೆ ಇದು ಶೇ.30 ರಷ್ಟು ಕಡಿಮೆ ಮಾಲಿನ್ಯ ಉಂಟುಮಾಡುತ್ತದೆ. ನೆಲಚಕ್ರ, ಹೂ ಬುಟ್ಟಿ, ನಕ್ಷತ್ರ ಕಡ್ಡಿ ಮೊದಲಾದ ಹಸಿರು ಪಟಾಕಿಗಳನ್ನು ಸಿಎಸ್‌ಐಆರ್‌ ಬಿಡುಗಡೆ ಮಾಡಿದೆ. ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯದ ಪ್ರಮಾಣ ಪ್ರತಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಹಸಿರು ಪಟಾಕಿಗಳ ಖರೀದಿಯನ್ನು ಪ್ರೋತ್ಸಾಹಿಸಲಾಗುತ್ತಿದೆ.

ಇನ್ನೂ ಬಂದಿಲ್ಲ

ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ, ಕಳೆದ ವರ್ಷವೇ ಹಸಿರು ಪಟಾಕಿಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಬೇಕಿತ್ತು. ಆದರೆ ಇದರ ಮೇಲೆ ಅಧ್ಯಯನಗಳು ನಡೆಯುತ್ತಿದ್ದ ಕಾರಣ ಬಿಡುಗಡೆ ಸಾಧ್ಯವಾಗಿರಲಿಲ್ಲ. ಈ ದೀಪಾವಳಿಗೆ ಕಡಿಮೆ ವಾಯುಮಾಲಿನ್ಯ ಉಂಟು ಮಾಡುವ ಪಟಾಕಿಗಳನ್ನು ಬಿಡುಗಡೆಗೊಳಿಸಲಾಗಿದೆ. ದೀಪಾವಳಿಗೆ ಕೆಲವೇ ದಿನವಿದ್ದರೂ ಈ ಬಗೆಯ ಪಟಾಕಿಗಳು ಮಾರುಕಟ್ಟೆಯಲ್ಲಿ ಕಂಡು ಬರುತ್ತಿಲ್ಲ. ಹೊಸ ದಿಲ್ಲಿಯಲ್ಲಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ ಪಟಾಕಿ ಬಿಡುಗಡೆ ಮಾಡಿದ್ದರೂ ಮಾರುಕಟ್ಟೆಗೆ ಬಂದಿಲ್ಲ.

ಈ ಬಾರಿ ಹಳೆ ಪಟಾಕಿಯೇ ಗತಿ

ದೀಪಾವಳಿಗೆ ಎರಡು ದಿನಗಳ ಮುನ್ನ ಸರ್ವೋಚ್ಚ ನ್ಯಾಯಾಲಯದಲ್ಲಿ ಹಸಿರು ಪಟಾಕಿಗೆ ಸಂಬಂಧಿಸಿ ಅರ್ಜಿಯೊಂದು ವಿಚಾರಣೆಯಾಗಲಿದೆ. ಅಲ್ಲಿ ದೊರೆಯುವ ನಿರ್ದೇಶನಗಳು ಈ ಬಾರಿಯ ದೀಪಾವಳಿಯ ಗಮ್ಮತ್ತನ್ನು ನಿರ್ಧರಿಸಲಿದೆ.

ಗೊಂದಲದಲ್ಲಿ ಅಂಗಡಿ ಮಾಲಕರು

ಹಸಿರು ಪಟಾಕಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟರೆ ಸಾಮಾನ್ಯ ಪಟಾಕಿಗಳ ಬೇಡಿಕೆ ಕಡಿಮೆಯಾಗಳಿದೆ. ಹಬ್ಬಕ್ಕೆ ಕೆಲವೇ ದಿನಗಳು ಇರುವ ಕಾರಣ ಈ ಹಿಂದೆ ಇದ್ದ ಪಟಾಕಿಗಳನ್ನು ಮತ್ತೆ ಕಾರ್ಖಾನೆಗಳಿಂದ ಕೊಂಡುಕೊಂಡು ಮಾರಲು ಸಮಯವಿಲ್ಲ.

ಎಲ್ಲಿಂದ ಹಸಿರು ಪಟಾಕಿ

ತಮಿಳುನಾಡಿನ ಶಿವಕಾಶಿ ಕಾರ್ಖಾನೆಗಳಿಂದಲೇ ಹಸಿರು ಪಟಾಕಿ ಉತ್ಪಾದನೆಯಾಗಲಿದೆ. ಪೊಟಾಶಿಯಂ, ನೈಟ್ರೇಟ್‌ ಮತ್ತು ಝಿಯೋಲೇಟ್‌ ಅನ್ನು ಬಳಸಿ ಈ ಪಟಾಕಿ ತಯಾರಿಸಲಾಗುತ್ತಿದೆ. ಇಲ್ಲಿ ಅಪಾಯಕಾರಿ ಬೇರಿಯಂ ನೈಟ್ರೇಟ್‌ ಬಳಸಲಾಗುತ್ತಿಲ್ಲ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.