ದೇಶದ ರಕ್ಷಣಾ ಸನ್ನದ್ಧತೆಗೆ 7 ಹೊಸ ಉತ್ಪಾದನಾ ಕಂಪನಿಗಳ ಸಾಥ್


Team Udayavani, Oct 15, 2021, 6:41 PM IST

The Defence Ministe

ನವದೆಹಲಿ:ದೇಶದ ರಕ್ಷಣಾ ಸನ್ನದ್ಧತೆಗಾಗಿ ಖಾಸಗಿ ಮತ್ತು ಸಾರ್ವಜನಿಕ ವಲಯಗಳು ನಿಕಟವಾಗಿ ಕೆಲಸ ಮಾಡುತ್ತಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ  ಹೇಳಿದ್ದಾರೆ.

ಏಳು ಹೊಸ ರಕ್ಷಣಾ ಕಂಪನಿಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿ ಸಭೆಯನ್ನುದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವರು ಈ ಹೇಳಿಕೆ ನೀಡಿದ್ದಾರೆ.

“ಉದಾರೀಕರಣ ಮತ್ತು ಮಾರುಕಟ್ಟೆ ಸುಧಾರಣೆಗಳ ನಂತರ, ಖಾಸಗಿ ವಲಯವು ದೇಶದ ರಕ್ಷಣಾ ಸನ್ನದ್ಧತೆಗಾಗಿ ಸಾರ್ವಜನಿಕ ವಲಯದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ. ಇಂದು ರಕ್ಷಣಾ ಉಪಕರಣಗಳ ಉತ್ಪಾದನೆಯನ್ನು ಖಾಸಗಿ ಮತ್ತು ಸಾರ್ವಜನಿಕ ವಲಯಗಳ ಸಮನ್ವಯದ ಭಾಗವಾಗಿ ನೋಡಲಾಗುತ್ತಿದೆ” ಎಂದು ರಾಜನಾಥ್ ಸಿಂಗ್ ಹೇಳಿದರು.

ಒರ್ಡ್ ನೆನ್ಸ್ ಫ್ಯಾಕ್ಟರಿ ಬೋರ್ಡ್ (OFB) ನ ಕಾರ್ಯವೈಖರಿಯನ್ನು ಕಳೆದ ಎರಡು ದಶಕಗಳಲ್ಲಿ ವಿವಿಧ ಉನ್ನತ ಮಟ್ಟದ ಸಮಿತಿಗಳು ಅಧ್ಯಯನ ಮಾಡಿವೆ. ಇದರ ಉದ್ದೇಶವು ಸಶಸ್ತ್ರ ರಕ್ಷಣಾ ಪಡೆಗಳ ಕಾರ್ಯವೈಖರಿಗಳನ್ನು ಸುಧಾರಿಸುವುದು ಮತ್ತು ಸ್ವಾವಲಂಬನೆಯನ್ನು ಉತ್ತೇಜಿಸುವುದು ಎಂದು ತಿಳಿಸಿದರು. ಇತ್ತೀಚಿನ ವರ್ಷಗಳಲ್ಲಿ, ರಕ್ಷಣಾ ಉದ್ಯಮವು ಸ್ವಾವಲಂಬನೆಯತ್ತ ಸಾಗಿದ್ದಲ್ಲದೆ, ಈ ವರೆಗೆ ಸಾಧಿಸಲಾಗದ ಮಟ್ಟದಲ್ಲಿ ರಕ್ಷಣಾ ಸಾಮಗ್ರಿಗಳ ರಫ್ತುನ್ನು ಮಾಡುವ ಮೂಲಕ ಇನ್ನಷ್ಟು ಎತ್ತರಕ್ಕೆ ಏರಿದೆ ಎಂದು ರಕ್ಷಣಾ ಸಚಿವರು ತಿಳಿಸಿದರು.

ಇದನ್ನೂ ಓದಿ:- ಮಾನಸಿಕ ರೋಗ ವಾಸಿಯಾಗದ ಕಾಯಿಲೆ ಅಲ್ಲ

“ಇಂದು ನಮ್ಮ ದೇಶವು ತನ್ನ ಸಂಪೂರ್ಣ ಶಕ್ತಿ ಮತ್ತು ಸಾಮರ್ಥ್ಯದೊಂದಿಗೆ ವಿಶ್ವದ ರಕ್ಷಣಾ ಉತ್ಪಾದನಾ ಕೇಂದ್ರವಾಗಿ ಹೊರ ಹೊಮ್ಮಲಿದೆ” ಎಂದು ರಕ್ಷಣಾ ಸಚಿವರು ತಿಳಿಸಿದರು. 2014ರಿಂದಲೂ, ಸ್ಥಳೀಯ ಉತ್ಪನ್ನಗಳಿಗೆ ಬೇಡಿಕೆಯನ್ನು ಉತ್ತೇಜಿಸಲು ರಫ್ತು ಮತ್ತು ವಿದೇಶಿ ನೇರ ಹೂಡಿಕೆಗೆ ಅನುಕೂಲಕರ ವ್ಯವಸ್ಥೆಯನ್ನು ಸೃಷ್ಟಿಸಲು ಕೇಂದ್ರ ಸರಕಾರವು ರಕ್ಷಣಾ ಕ್ಷೇತ್ರದಲ್ಲಿ ಹಲವಾರು ಸುಧಾರಣೆಗಳನ್ನು ತಂದಿದೆ ಎಂದು ತಿಳಿಸಿದರು.

ಒರ್ಡ್ ನೆನ್ಸ್ ಫ್ಯಾಕ್ಟರಿ ಬೋರ್ಡ್ ನ ಪುನರ್‌ ರಚನೆ ಮಾಡಿ ಏಳು ಕಾರ್ಪೊರೇಟ್ ಸಂಸ್ಥೆಗಳಾಗಿ ಪರಿವರ್ತಿಸುವುದರಿಂದ ಆ ಕಂಪನಿಗಳಿಗೆ ಸ್ವಾಯತ್ತತೆ ನೀಡುವುದರ ಜೊತೆಗೆ, ಹೊಸ ಕಂಪನಿಗಳ ಅಡಿಯಲ್ಲಿ 41 ಕಾರ್ಖಾನೆಗಳ ಕಾರ್ಯನಿರ್ವಹಣೆಯಲ್ಲಿ ಜವಾಬ್ದಾರಿ ಮತ್ತು ದಕ್ಷತೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ಶಸ್ತ್ರಾಸ್ತ್ರ ಕಾರ್ಖಾನೆಗಳ ವಾಣಿಜ್ಯೀಕರಣದ ಭಾಗವಾಗಿ, ಕೇಂದ್ರ ಸರಕಾರವು ಏಳು ಹೊಸ ಕಂಪನಿಗಳನ್ನು ಆರಂಭಿಸಿತ್ತು. ಸರಕಾರವು ಒರ್ಡ್ ನೆನ್ಸ್ ಫ್ಯಾಕ್ಟರಿ ಬೋರ್ಡನ್ನು ಕಾರ್ಪೊರೇಟ್ ಸಂಸ್ಥೆಗಳನ್ನಾಗಿ ಪರಿವರ್ತಿಸುತ್ತಿದೆ. ಈ ಏಳು ಹೊಸ ರಕ್ಷಣಾ ಕಂಪನಿಗಳು ವಾಯುಸೇನೆ, ಭೂ ಸೇನೆ,ನೌಕಾ ಪಡೆಗಳು ಮತ್ತು ಅರೆಸೇನಾ ಪಡೆಗಳಿಂದ 65,000 ಕೋಟಿ ಮೌಲ್ಯದ 66 ಸಾಂಸ್ಥಿಕ ಒಪ್ಪಂದಗಳನ್ನು ಮಾಡಿಕೊಂಡಿವೆ.

ಅಡ್ವಾನ್ಸ್ಡ್ ವೆಪನ್ಸ್ ಅಂಡ್ ಇಕ್ವಿಪ್ಮೆಂಟ್ ಇಂಡಿಯಾ ಲಿಮಿಟೆಡ್, ಟ್ರೂಪ್ ಕಂಫರ್ಟ್ಸ್ ಲಿಮಿಟೆಡ್, ಅವನಿ ಆರ್ಮರ್ಡ್ ವೆಹಿಕಲ್ಸ್, ಮುನಿಷನ್ಸ್ ಇಂಡಿಯಾ ಲಿಮಿಟೆಡ್, ಇಂಡಿಯಾ ಆಪ್ಟೆಲ್ ಲಿಮಿಟೆಡ್, ಗ್ಲೈಡರ್ಸ್ ಇಂಡಿಯಾ ಲಿಮಿಟೆಡ್, ಯಂತ್ರ ಇಂಡಿಯಾ ಲಿಮಿಟೆಡ್ ಇವು ಉದ್ಘಾಟಣೆಗೊಂಡ ಏಳು ಹೊಸ ಕಂಪನಿಗಳಾಗಿವೆ.

ಟಾಪ್ ನ್ಯೂಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.