ಸಂಸತ್‌ನಲ್ಲಿ ಕಾವೇರಿ ಗದ್ದಲ


Team Udayavani, Dec 13, 2018, 6:00 AM IST

d-130.jpg

ನವದೆಹಲಿ: ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಬುಧವಾರ ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ, ಡಿಎಂಕೆ ಸಂಸದರು ಗಲಾಟೆ ಎಬ್ಬಿಸಿದ್ದಾರೆ. ಇದರ ಜತೆಗೆ ರಫೇಲ್‌ ಡೀಲ್‌, ರಾಮ ಮಂದಿರ ವಿವಾದ ವಿಚಾರಗಳೂ ಪ್ರಸ್ತಾಪವಾಗಿವೆ. ತೀವ್ರ ಗದ್ದಲದ ಹಿನ್ನೆಲೆಯಲ್ಲಿ ಲೋಕಸಭೆಯ ಕಲಾಪ ದಿನದ ಮಟ್ಟಿಗೆ ಮುಂದೂಡಲ್ಪಟ್ಟರೆ, ರಾಜ್ಯಸಭೆ ಕಲಾಪಕ್ಕೆ ಕೊಂಚ ಕಾಲ ಅಡ್ಡಿಯಾಯಿತು. 

ಲೋಕಸಭೆಯಲ್ಲಿ ಕಾಂಗ್ರೆಸ್‌, ಶಿವಸೇನೆ, ಟಿಡಿಪಿ, ಎಐಎಡಿಎಂಕೆ ಸಂಸದರು ಅವರವರ ರಾಜ್ಯಗಳ ಬೇಡಿಕೆಗಳನ್ನು ಮುಂದಿಟ್ಟು ಕೊಂಡು ಗದ್ದಲ ಎಬ್ಬಿಸಿದರು. ಬುಧವಾರ ಲೋಕಸಭೆಯಲ್ಲಿ ಕಲಾಪ ಆರಂಭಿಸುತ್ತಲೇ ಅಗಲಿದ ಗಣ್ಯರಿಗೆ ಅಂತಿಮ ನಮನ ಸಲ್ಲಿಸಲಾಯಿತು. ಪ್ರಶ್ನೋತ್ತರ ಕಲಾಪದ ವೇಳೆ ಶಿವಸೇನೆ ಸಂಸದರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ, ಎಐಎಡಿಎಂಕೆ ಸಂಸದರು ಕಾವೇರಿ ಮುಖಜ ಭೂಮಿಯ ರೈತರ ಹಿತ ಕಾಯಬೇಕು, ಕಾಂಗ್ರೆಸ್‌ ಸಂಸದರು ರಫೇಲ್‌ ಡೀಲ್‌ ವಿರುದ್ಧ ಸಂಸತ್‌ ಸಮಿತಿಯಿಂದ ತನಿಖೆ ನಡೆಸಬೇಕು, ಟಿಡಿಪಿ ಸದಸ್ಯರು ವಿಶಾಖ ಪಟ್ಟಣದಲ್ಲಿ ರೈಲ್ವೇ ವಲಯ ಸ್ಥಾಪಿಸಬೇಕೆಂದು ಒತ್ತಾಯಿಸಿ ಗದ್ದಲ ಎಬ್ಬಿಸಿದರು. ಸ್ಪೀಕರ್‌ ಸುಮಿತ್ರಾ ಮಹಾಜನ್‌ ಸದಸ್ಯರ ಮನವೊಲಿಸಲು ಪ್ರಯತ್ನಿಸಿದರೂ, ಪ್ರಯೋಜನವಾಗಲಿಲ್ಲ. ಮಧ್ಯಾಹ್ನ 12 ಗಂಟೆಯ ಬಳಿಕ ಸದನ ಸಮಾವೇಶಗೊಂಡಾಗಲೂ ಪರಿಸ್ಥಿತಿ ಯಥಾ ಸ್ಥಿತಿ ಇದ್ದ ಕಾರಣ ಲೋಕಸಭೆ ಕಲಾಪವನ್ನು ಗುರುವಾರಕ್ಕೆ ಸ್ಪೀಕರ್‌ ಮುಂದೂಡಿದರು.

ಅಣೆಕಟ್ಟೆ ಸುರಕ್ಷತೆಗೆ ಮಸೂದೆ
ದೇಶದಲ್ಲಿರುವ 5 ಸಾವಿರಕ್ಕೂ ಹೆಚ್ಚು ಅಣೆಕಟ್ಟೆಗಳಿಗೆ ರಕ್ಷಣೆ ಒದಗಿಸುವ ಸಮಗ್ರ ಕಾರ್ಯತಂತ್ರವನ್ನು ಒಳಗೊಂಡ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಬುಧವಾರ ಮಂಡಿಸಿದೆ. ಈ ಮಸೂದೆ ಅಡಿಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಂದೇ ರೀತಿಯ ಆಣೆಕಟ್ಟೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ. ವಿಪತ್ತಿನ ಸಂದರ್ಭದಲ್ಲಿ ಆಣೆಕಟ್ಟೆಗೆ ಹಾನಿ ಉಂಟಾಗುವುದನ್ನು ತಡೆಯುವ ಕ್ರಮಗಳನ್ನೂ ಇದು ಒಳಗೊಂಡಿದೆ. ಕಾಂಗ್ರೆಸ್‌, ಟಿಡಿಪಿ ಹಾಗೂ ಎಐಎಡಿಎಂಕೆ ಸೇರಿದಂತೆ ವಿವಿಧ ಪಕ್ಷಗಳು ವಿವಿಧ ವಿಚಾರಗಳಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಮಧ್ಯೆಯೇ ಮಸೂದೆಯನ್ನು ಮಂಡಿಸಲಾಯಿತು.

ಸರ್ಕಾರದ ಒಪ್ಪಿಗೆ
ಕರ್ನಾಟಕದ ಗುಲ್ಬರ್ಗಾ ರೈಲು ನಿಲ್ದಾಣದ ಹೆಸರನ್ನು ಕಲಬುರಗಿ ಎಂದು ಬದಲಾಯಿಸುವುದೂ ಸೇರಿ, 5 ರಾಜ್ಯಗಳ ಒಟ್ಟು 22 ಗ್ರಾಮಗಳು, ಪಟ್ಟಣಗಳು ಮತ್ತು ರೈಲ್ವೇ ನಿಲ್ದಾಣಗಳ ಹೆಸರುಗಳನ್ನು ಬದಲಿಸುವಂತೆ ಕೋರಿ ಸಲ್ಲಿಸಿದ್ದ ಪ್ರಸ್ತಾವನೆಗೆ ಕೇಂದ್ರ ಒಪ್ಪಿಗೆ ಸೂಚಿಸಿದೆ. ಇದರ ಜತೆಗೆ 11 ಅರ್ಜಿಗಳು ಕೇಂದ್ರ ಸರ್ಕಾರದ ಬಳಿ ಬಾಕಿ ಇವೆ ಎಂದು ಗೃಹ ಸಚಿವಾಲಯ ಲೋಕಸಭೆಗೆ ಬುಧವಾರ ತಿಳಿಸಿದೆ. ಪ್ರಸ್ತಾವನೆಗಳಲ್ಲಿರುವ 22 ಹಳ್ಳಿ ಅಥವಾ ಪಟ್ಟಣಗಳ ಹೆಸರು ಬದಲಾವಣೆಗೆ ಯಾವುದೇ ಆಕ್ಷೇಪಣೆ ಇಲ್ಲ ಎಂದು 2017ರ ಡಿಸೆಂಬರ್‌ನಲ್ಲಿಯೇ ಕೇಂದ್ರ ಸರ್ಕಾರ ಹೇಳಿತ್ತು.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.