ಚುನಾವಣಾ ವೇಳಾಪಟ್ಟಿ ಸೋರಿಕೆಯಾಗಿರಲಿಲ್ಲ
Team Udayavani, Apr 14, 2018, 11:36 AM IST
ನವದೆಹಲಿ: ಕರ್ನಾಟಕ ಚುನಾವಣಾ ವೇಳಾಪಟ್ಟಿಯ ಮಾಹಿತಿ ಸೋರಿಕೆಯಾಗಿ ರಲಿಲ್ಲ. ಇದು ಸಂಪೂರ್ಣ ಊಹೆಯಾಗಿತ್ತು ಎಂದು ಕೇಂದ್ರ ಚುನಾವಣಾ ಆಯೋಗ ರಚಿಸಿದ್ದ ಆಂತರಿಕ ಸಮಿತಿ ವರದಿ ನೀಡಿದೆ. ಈ ಮೂಲಕ ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥರ ಮಾಹಿತಿ ಸೋರಿಕೆ ಪ್ರಕರಣಕ್ಕೆ ಅಂತ್ಯ ಹಾಡಿದೆ.
ಮಾ.27 ರಂದು ಚುನಾವಣಾ ಆಯೋಗ ವೇಳಾಪಟ್ಟಿ ಘೋಷಣೆ ಮಾಡುವ ಕೆಲ ನಿಮಿಷಗಳ ಮುನ್ನವೇ ಬಿಜೆಪಿಯ ಐಟಿ ವಿಭಾಗದ ಮುಖ್ಯಸ್ಥರು ಚುನಾವಣಾ ದಿನಾಂಕ ಮತ್ತು ಫಲಿತಾಂಶದ ದಿನಾಂಕದ ಬಗ್ಗೆ ಟ್ವೀಟ್ ಮಾಡಿದ್ದರು. ಆದರೆ ಮತದಾನದ ದಿನಾಂಕ ನಿಜವಾಗಿ ಫಲಿತಾಂಶದ ದಿನ ಸುಳ್ಳಾಗಿತ್ತು.
ಆದರೆ ಈ ಟ್ವೀಟ್ ತೀವ್ರ ವಿವಾದ ಎಬ್ಬಿಸಿತ್ತಲ್ಲದೇ, ಆಯೋಗದ ಮಾಹಿತಿ ಬಿಜೆಪಿಗೆ ತಲುಪಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಚುನಾ ವಣಾ ಆಯೋಗ ತನಿಖೆಗಾಗಿ ಆಂತರಿಕ ಸಮಿತಿ ರಚಿಸಿತ್ತು. ಈ ಸಮಿತಿ ಕೂಲಂಕಶವಾಗಿ ತನಿಖೆ ನಡೆಸಿ ವರದಿ ನೀಡಿದ್ದು, ಆಯೋಗದ ಮಾಹಿತಿ ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದೆ.
ಆದರೆ, ಟಿವಿ ಚಾನಲ್ ನೋಡಿ ಕೊಂಡು ಊಹೆ ಮಾಡಿಕೊಂಡು ಟ್ವೀಟ್ ಮಾಡಿದ್ದಾರೆ ಎಂದು ಹೇಳಿದೆ. ಅಲ್ಲದೆ ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥರೂ ಇದೇ ಉತ್ತರವನ್ನೂ ನೀಡಿದ್ದರು. ಟಿವಿ ಚಾನೆಲ್ ಅನ್ನೂ ಆಯೋಗ ವಿಚಾರಣೆ ನಡೆಸಿದ್ದು, ಅದು ನಂಬಿಕಸ್ಥ ಮೂಲವನ್ನು ಇರಿಸಿಕೊಂಡು ವೇಳಾಪಟ್ಟಿಯ ಸುದ್ದಿ ಪ್ರಕಟಿಸಿದ್ದಾಗಿ ಹೇಳಿದೆ. ಆದರೆ ಇದರಲ್ಲಿ ಫಲಿತಾಂಶದ ದಿನ ತಪ್ಪಾಗಿತ್ತು ಎಂಬುದನ್ನೂ ಉಲ್ಲೇಖೀಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM ವಿಚಾರ; ಮಸ್ಕ್ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ : ಬಿಜೆಪಿ ಆಕ್ರೋಶ
Bihar:ಗಂಗಾ ನದಿಯಲ್ಲಿ ಮುಳುಗಿದ 17 ಭಕ್ತರಿದ್ದ ದೋಣಿ,6 ಮಂದಿ ನಾಪತ್ತೆ
EVM ಸರಿಯಲ್ಲ ಎಂದ ಎಲಾನ್ ಮಸ್ಕ್ ಗೆ ರಾಜೀವ್ ಚಂದ್ರಶೇಖರ್ ತಿರುಗೇಟು
Security Review; ಜಮ್ಮು ಕಾಶ್ಮೀರದ ಭದ್ರತೆಯ ಬಗ್ಗೆ ಅಮಿತ್ ಶಾ ಉನ್ನತ ಮಟ್ಟದ ಸಭೆ
Jaipur: ಎಸಿ ಸ್ಪೋಟದಿಂದ ಬೆಂಕಿ; ಉಸಿರುಗಟ್ಟಿ ದಂಪತಿ ಮೃತ್ಯು
MUST WATCH
ಹೊಸ ಸೇರ್ಪಡೆ
ST ಗೆ ಕೋಳಿ ಬೆಸ್ತ ಸಮಾಜ ಸೇರಿಸಲು ಸಂಸತ್ತಿನಲ್ಲಿ ಧ್ವನಿ ಎತ್ತುತ್ತೇನೆ: ಸಂಸದೆ ಪ್ರಿಯಂಕಾ
Road Mishap; ಕೆಎಸ್ಆರ್ಟಿಸಿ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು
ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್
ಸಂಬಂಧದ ಸುತ್ತ ರಾಖಾ; ಮಳವಳ್ಳಿ ಸಾಯಿಕೃಷ್ಣ ನಿರ್ದೇಶನ
Siruguppa: ಸಾರ್ವಜನಿಕ ಗ್ರಂಥಾಲಯದಲ್ಲಿ ಶೌಚಕ್ಕಾಗಿ ಸಾಲುಗಟ್ಟಿ ನಿಂತಿರುವ ವಿದ್ಯಾರ್ಥಿನಿಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.