ಮತ್ಸ್ಯಗಂಧ ಎಕ್ಸಪ್ರೆಸ್ ನಲ್ಲಿ ಕಳ್ಳತನ
Team Udayavani, Nov 5, 2021, 5:33 PM IST
ಪಣಜಿ: ಮತ್ಸ್ಯಗಂಧ ಎಕ್ಸಪ್ರೆಸ್ ರೈಲಿನಲ್ಲಿ ಪನವೇಲ್ನಿಂದ ಉಡುಪಿಗೆ ಪ್ರಯಾಣ ಬೆಳೆಸುತ್ತಿದ್ದ ಮಹಿಳೆಯೋರ್ವಳ ಬಳಿಯಿದ್ದ 6 ಲಕ್ಷ ರೂ ಮೌಲ್ಯದ ಬಂಗಾರ ಮತ್ತು 50,000 ರೂ ಹಣ ಕಳ್ಳತನ ನಡೆದಿರುವುದಾಗಿ ಕೊಂಕಣ ರೈಲ್ವೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರಿತಂತೆ ಜೋ ಅಲ್ವಿನ್ ಮಾರ್ಟೀನ್ ರವರು ಕೊಂಕಣ ರೈಲ್ವೆ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ತಮ್ಮ ಕುಟುಂಬದೊಂದಿಗೆ ಮಾರ್ಟಿನ್ ರವರು ಮತ್ಸ್ಯಗಂಧ ಎಕ್ಸಪ್ರೆಸ್ ರೈಲಿನಲ್ಲಿ ಪನವೇಲ್ನಿಂದ ಉಡುಪಿಗೆ ಪ್ರಯಾಣ ಬೆಳೆಸಿದ್ದರು.
ಇದನ್ನೂ ಓದಿ:- ಬಾಂಬ್ ರೀತಿ ಸ್ಪೋಟಗೊಂಡ ಪಟಾಕಿ : ತಂದೆ, ಮಗ ಛಿದ್ರ ಛಿದ್ರ
ಈ ಸಂದರ್ಭದಲ್ಲಿ ಮಾರ್ಟಿನ್ ರವರ ತಾಯಿಯ ಕೈಯ್ಯಲ್ಲಿದ್ದ ಬ್ಯಾಗ್ನ್ನು ಅಪರಿಚಿತ ವ್ಯಕ್ತಿಯೊಬ್ಬ ಕದ್ದು ಪರಾರಿಯಾದ. ಈ ಬ್ಯಾಗ್ನಲ್ಲಿ ಸುಮಾರು 6 ಲಕ್ಷ ರೂ ಮೌಲ್ಯದ ಬಂಗಾರ ಮತ್ತು 50,000 ರೂ ಹಣವಿತ್ತು ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಂಕಣ ರೈಲ್ವೆಯ ಪೋಲಿಸ್ ನಿರೀಕ್ಷಕ ಹೀರೂ ಕವಳೇಕರ್ ಹೆಚ್ಚಿನ ತನಿಖಾ ಕಾರ್ಯ ಕೈಗೆತ್ತಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್