ವಿಫಲಗೊಂಡ ಆಪ್ ಪಾದಯಾತ್ರೆ
Team Udayavani, Jun 18, 2018, 12:06 PM IST
ಹೊಸದಿಲ್ಲಿ: ದಿಲ್ಲಿಯಲ್ಲಿ ಐಎಎಸ್ ಅಧಿಕಾರಿಗಳ ಮುಷ್ಕರ ತಡೆಯಲು ಪ್ರಧಾನಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ನರೇಂದ್ರ ಮೋದಿಯವರ ಅಧಿಕೃತ ನಿವಾಸದತ್ತ ಆಪ್ ನಡೆಸುತ್ತಿದ್ದ ಪಾದಯಾತ್ರೆಯನ್ನು ಸಂಸತ್ ಭವನದ ಸಮೀಪವೇ ತಡೆದು ನಿಲ್ಲಿಸಲಾಗಿದೆ.
ಹೊಸದಿಲ್ಲಿಯ ಪ್ರಮುಖ ಭಾಗಗಳಲ್ಲಿ ನಿಷೇಧಾಜ್ಞೆ ಹೇರಲಾಗಿತ್ತು. ಐದು ಮೆಟ್ರೋ ನಿಲ್ದಾಣಗಳನ್ನು ಮುಚ್ಚಲಾಗಿತ್ತು. ಹೀಗಾಗಿ ಆಪ್ ಪ್ರತಿಭಟನೆ ಪಾದಯಾತ್ರೆ, ಧರಣಿ ನಾಟಕ ವಿಫಲವಾಗಿದೆ.
ಏನೂ ಹೇಳಲಿಲ್ಲ: ಇದೇ ವೇಳೆ ದಿಲ್ಲಿ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಮುಖ್ಯಮಂತ್ರಿಗಳ ನಿಯೋಗ ಭೇಟಿ ಮಾಡಿತು. “ಪ್ರಧಾನಿ ನಮ್ಮ ಮಾತುಗಳನ್ನು ಆಲಿಸಿದರು. ಆದರೆ ಏನೂ ಹೇಳಲಿಲ್ಲ’ ಎಂದರು ಮಮತಾ. ಕರ್ನಾಟಕದ ಸಿಎಂ ಕುಮಾರಸ್ವಾಮಿ, ಕೇರಳ ಸಿಎಂ ಪಿಣರಾಯಿ ವಿಜಯನ್, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಜತೆಗಿದ್ದರು.
ಮುಷ್ಕರ ನಡೆಸುತ್ತಿಲ್ಲ: ದಿಲ್ಲಿ ರಾಜ್ಯದ ವ್ಯಾಪ್ತಿಯಲ್ಲಿ ಮುಷ್ಕರ ನಡೆಸುತ್ತಿಲ್ಲ. ಈ ಬಗ್ಗೆ ಆಮ್ ಆದ್ಮಿ ಪಕ್ಷದ ಸರಕಾರದ ಆರೋಪ ಸುಳ್ಳೆಂದು ದಿಲ್ಲಿಯ ಕಂದಾಯ ಕಾರ್ಯದರ್ಶಿ ಮನೀಷಾ ಸಕ್ಸೇನಾ ನೇತೃತ್ವದಲ್ಲಿ ಐಎಎಸ್ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿದ್ದಾರೆ. ದಿಲ್ಲಿ ಸಿಎಂಅರವಿಂದ ಕೇಜ್ರಿವಾಲ್ ನಿವಾಸದಲ್ಲಿ ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ ನಡೆದ ಬಳಿಕ ಭೀತಿಯ ವಾತಾವರಣ ಉಂಟಾಗಿದೆ ಎಂದಿದ್ದಾರೆ. ಈ ನಡುವೆ ಐಎಎಸ್ ಅಧಿಕಾರಿಗಳ ಭದ್ರತೆಗೆ ಕ್ರಮ ಕೈಗೊಳ್ಳುವುದಾಗಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಕೆಸಿಆರ್ ಮಿಸ್ಸಿಂಗ್
ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ಗೆ ನಾಲ್ವರು ಸಿಎಂಗಳು ಬೆಂಬಲ ವ್ಯಕ್ತಪಡಿಸಿದ್ದರಾದರೂ ಇವರೊಂದಿಗೆ ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್ ಭಾಗವಹಿಸಿರಲಿಲ್ಲ. ದಿಲ್ಲಿಯಲ್ಲೇ ಇದ್ದರೂ ಕೆಸಿಆರ್ ಕರ್ನಾಟಕ, ಆಂಧ್ರಪ್ರದೇಶ, ಪಶ್ಚಿಮ ಬಂಗಾಲ, ಕೇರಳ ಸಿಎಂಗಳ ಜೊತೆಗೆ ಕಾಣಿಸಿಕೊಂಡಿಲ್ಲ.
2019ರ ಚುನಾವಣೆಗೂ ಮುನ್ನ ವಿರೋಧ ಪಕ್ಷಗಳು ಒಂದಾಗಬೇಕು ಎಂಬ ಕಲ್ಪನೆ ಮೊದಲು ಬಿತ್ತಿದ್ದ ಕೆಸಿಆರ್ ಕರ್ನಾಟಕದಲ್ಲಿ ಎಚ್.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಕಾರ್ಯಕ್ರಮದಲ್ಲೂ ಭಾಗವಹಿಸಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ