ಅಯ್ಯಪ್ಪನಿಗೆ ಭದ್ರತೆಯ ಕೋಟೆ


Team Udayavani, Nov 5, 2018, 9:19 AM IST

shabarimale.png

ಶಬರಿಮಲೆ: ಮಹಿಳಾ ಪ್ರವೇಶ ವಿವಾದದ ನಡುವೆಯೇ, ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಸೋಮವಾರ ಸಂಜೆ 5 ಗಂಟೆಗೆ ತೆರೆಯಲಿದೆ. ಅದಕ್ಕೆ ಪೂರಕವಾಗಿ ಪಂಪಾ ನದಿ ತೀರ ಪ್ರದೇಶದಿಂದ ದೇಗುಲದ ಸನ್ನಿಧಾನದ ವರೆಗೆ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ. ಹೀಗಾಗಿ ದೇಗುಲ ಆವರಣ ಈಗ ಭದ್ರತೆಯಿಂದ ಕೂಡಿದ ಕೋಟೆಯಂತೆ ಕಂಡುಬರುತ್ತಿದೆ.

ಇತ್ತೀಚೆಗೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಈ ಬಾರಿ ಕೇರಳ ಸರಕಾರ ಕಟ್ಟುನಿಟ್ಟಿನ ಬಂದೋಬಸ್ತ್ ಕ್ರಮಗಳನ್ನು ಕೈಗೊಂಡಿದೆ. 20 ಮಂದಿ ಕಮಾಂಡೋ ತಂಡ ಸೇರಿದಂತೆ 2,300ಕ್ಕೂ ಅಧಿಕ ಮಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಅಲ್ಲದೆ, 50 ವರ್ಷ ವಯಸ್ಸು ದಾಟಿದ 100 ಮಂದಿ ಮಹಿಳಾ ಪೊಲೀಸರನ್ನೂ ನಿಯೋಜಿಸಲಾಗಿದೆ. ದೇಗುಲದ ಸನ್ನಿಧಾನಕ್ಕೆ ಪಂಪಾದಿಂದ ನೀಲಿಮಲ- ಅಪ್ಪಚ್ಚಿಮೇಡು- ಶರಮುಕ್ತಿ ಮೂಲಕ ಭಕ್ತರಿಗೆ ತೆರಳಲು ಸೂಚಿಸಲಾಗಿದೆ.

ಪತ್ರಕರ್ತೆಯರು ಬೇಡ:  ಶಬರಿಮಲೆ ಕರ್ಮಸಮಿತಿ ಎಲ್ಲಾ ಮಾಧ್ಯಮ ಸಂಸ್ಥೆಗಳ ಮುಖ್ಯಸ್ಥರಿಗೆ ಮನವಿಯನ್ನು ಕಳುಹಿಸಿ, ದೇಗುಲ ಆವರಣಕ್ಕೆ ಮಹಿಳಾ ಪತ್ರಕರ್ತರನ್ನು  ವರದಿ ಮಾಡಲು ಕಳುಹಿಸುವುದು ಬೇಡ ಎಂದು ಒತ್ತಾಯಿಸಿದೆ. ಅದಕ್ಕೆ ಪೂರಕವಾಗಿ ಕೇರಳ ಡಿಜಿಪಿ ಲೋಕನಾಥ್‌ ಬೆಹಾರ ಸ್ಪಷ್ಟನೆ ನೀಡಿ ಮಾಧ್ಯಮದವ ರಿಗೆ ದೇಗುಲ ಪ್ರವೇಶಿಸದಂತೆ ನಿಷೇಧ ಹೇರಲಾಗಿಲ್ಲ ಎಂದಿದ್ದಾರೆ. 

5 ಗಂಟೆಗೆ:  ಸೋಮವಾರ ಸಂಜೆ 5 ಗಂಟೆಗೆ ತಂತ್ರಿ ಕಂದರಾರು ರಾಜೀವರಾರು ಮತ್ತು ಮುಖ್ಯ ಅರ್ಚಕ ಉಣ್ಣಿಕೃಷ್ಣನ್‌ ನಂಬೂದಿರಿ ಜಂಟಿಯಾಗಿ ಗರ್ಭಗುಡಿಯ ಬಾಗಿಲು ತೆರೆಯಲಿದ್ದಾರೆ. ಶ್ರೀ ಚೈತ್ರ ಅತ್ತ ತಿರುನಾಳ್‌ ಪ್ರಯುಕ್ತ ವಿಶೇಷ ಪೂಜೆ ಮಂಗಳವಾರ ನಡೆಯಲಿದೆ. ಒಟ್ಟು 30 ಗಂಟೆಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಅದಕ್ಕಾಗಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಸೆ.28ರಂದು ದೇಗುಲಕ್ಕೆ ಎಲ್ಲಾ ವಯೋ ಮಿತಿಯ ಮಹಿಳೆಯರು ಪ್ರವೇಶಿಸಬಹುದು ಎಂದು ತೀರ್ಪು ನೀಡಿದ ಬಳಿಕ 2ನೇ ಬಾರಿಗೆ ದೇಗುಲದ ಬಾಗಿಲು ತೆರೆಯಲಾಗು ತ್ತಿದೆ. ತಿರುವಾಂಕೂರು ರಾಜಮನೆತನದ ಕೊನೆಯ ದೊರೆ ತಿರುವಾಂಕೂರು ಚಿತಿರ ತಿರುನಾಳ್‌ ಬಲರಾಮ ವರ್ಮ ಜನ್ಮದಿನ ಪ್ರಯುಕ್ತ ಪೂಜೆ ನಡೆಯಲಿದೆ. ಮಂಗಳವಾರ ರಾತ್ರಿ 10 ಗಂಟೆಗೆ ದೇಗುಲದ ಬಾಗಿಲು ಮುಚ್ಚಲಿದೆ. ನಂತರ ನ.17ರಿಂದ ಮೂರು ತಿಂಗಳ ಕಾಲ ದೀರ್ಘಾವಧಿಗೆ ಅದನ್ನು ತೆರೆಯಲಾಗುತ್ತದೆ.

ಹೋರಾಟ ಬಿರುಸು: ಕೇರಳದ ಬಿಜೆಪಿ ಘಟಕ ಮತ್ತು ಹಿಂದೂ ಪರ ಸಂಘಟನೆಗಳು ಅಯ್ಯಪ್ಪ ದೇಗುಲಕ್ಕೆ ಮಹಿಳೆಯರು ಪ್ರವೇಶಿಸ ಬಾರದು ಎಂಬ ವಿಚಾರ ಪ್ರಧಾನವಾಗಿಟ್ಟುಕೊಂಡು ಹೋರಾಟ ತೀವ್ರಗೊಳಿಸಲು ನಿರ್ಧರಿಸಿವೆ. ಪಂದಳಂ ರಾಜಮನೆತನದ ಸದಸ್ಯರು ದೇಗುಲದ ಸುತ್ತಮುತ್ತ ಹೆಚ್ಚಿನ ಪ್ರಮಾಣದಲ್ಲಿ ಭದ್ರತಾ ಸಿಬಂದಿ ಪ್ರವೇಶಿಸಿದ್ದು ನೋವಿನ ವಿಚಾರ ಎಂದು ಹೇಳಿದ್ದಾರೆ. 

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.