ಮಮತಾ ಆಕ್ಷೇಪ: ನ.22ರ ಘಟಬಂಧನ್ ಸಭೆ ಮುಂದಕ್ಕೆ
Team Udayavani, Nov 20, 2018, 9:03 AM IST
ಕೋಲ್ಕತಾ: “ಮಹಾಘಟಬಂಧನ್’ ಮೂಲಕ ಬಿಜೆಪಿ ನೇತೃತ್ವದ ಎನ್ಡಿಎ ಎದುರಿಸಲು ರಚನೆ ಮಾಡುವ ಪ್ರತಿಪಕ್ಷಗಳ ಒಕ್ಕೂಟದ ಸಭೆ ನಡೆಯುವಂತೆಯೇ ತೋರುತ್ತಿಲ್ಲ. ಈ ಹಿಂದೆ ನಿಗದಿಯಾಗಿದ್ದಂತೆ ನ.22ರ ಸಭೆ ಮುಂದೂಡಿಕೆಯಾಗಿದೆ. ಕೋಲ್ಕತಾದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದ ಬಳಿಕ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಈ ಮಾಹಿತಿ ನೀಡಿ ದ್ದಾರೆ. ಹೊಸ ದಿನಾಂಕವನ್ನು ಇನ್ನಷ್ಟೇ ಗುರುತಿಸಬೇಕಾಗಿದೆ ಎಂದಿದ್ದಾರೆ. ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ, ಆರ್ಬಿಐಗಳನ್ನು ಕೇಂದ್ರ ದುರುಪಯೋಗ ಮಾಡುತ್ತಿದೆ ಎಂದು ನಾಯ್ಡು ದೂರಿದ್ದಾರೆ. ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಆಕ್ಷೇಪದ ಹಿನ್ನೆಲೆಯಲ್ಲಿ ಈ ಬೆಳವಣಿಗೆಯಾಗಿದೆ.
ಮೂಲಗಳ ಪ್ರಕಾರ ಸಭೆ ಜನವರಿಯಲ್ಲಿ ನಡೆಯಲಿದೆ. ಈ ಬೆಳವಣಿಗೆಯಿಂದಾಗಿ 2019ರ ಲೋಕಸಭಾ ಚುನಾವಣೆಗೆ ಮಹಾಮೈತ್ರಿ ಮೂಲಕ ಬಿಜೆಪಿಯನ್ನು ಹೆಡೆಮುರಿ ಕಟ್ಟಬೇಕೆನ್ನುವ ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳ ಲೆಕ್ಕಾಚಾರ ಮತ್ತೆ ಬುಡಮೇಲಾದಂತಿದೆ. ಒಕ್ಕೂಟ ರಚಿಸುವ ನಿಟ್ಟಿನಲ್ಲಿ ನಾಯ್ಡು ಬೆಂಗಳೂರಿಗೂ ಬಂದು ಜೆಡಿಎಸ್ ನಾಯಕರಾಗಿರುವ ದೇವೇಗೌಡ, ಕುಮಾರಸ್ವಾಮಿ ಜತೆ ಚರ್ಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ