Politics: ಗರಿಗೆದರಿದ ರಾಜಕೀಯ ವರ್ಷಾಂತ್ಯ: ಪಂಚ ರಾಜ್ಯಗಳಲ್ಲಿ ರಂಗೇರಿದ ಕಣ


Team Udayavani, Aug 19, 2023, 11:56 PM IST

election

ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ಪಂಚರಾಜ್ಯಗಳಲ್ಲಿ ರಾಜಕೀಯ ಚಟುವಟಿಕೆಗಳು ರಂಗೇರತೊಡಗಿವೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರದೇಶ, ರಾಜಸ್ಥಾನಕ್ಕೆ ಭೇಟಿ ನೀಡಿ ಹಲವು ಯೋಜನೆಗಳನ್ನು ಉದ್ಘಾಟಿಸುವ ಮೂಲಕ ಚುನಾವಣಾ ಕಹಳೆ ಮೊಳಗಿಸಿದ್ದಾರೆ. ಇನ್ನೊಂದೆಡೆ, ಕಾಂಗ್ರೆಸ್‌ ಸೇರಿದಂತೆ ಇತರೆ ಪಕ್ಷಗಳು ಕೂಡ ಬೇರೆ ಬೇರೆ ರೀತಿಯ ಕಾರ್ಯತಂತ್ರಗಳ ಮೂಲಕ ಮತದಾರರ ಸೆಳೆಯಲು ಮುಂದಾಗಿವೆ. ಎಲ್ಲ 5 ರಾಜ್ಯಗಳಲ್ಲೂ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಮಧ್ಯಪ್ರದೇಶಕ್ಕೆ ಬಿಜೆಪಿ ಶಾಸಕರ ಲಗ್ಗೆ
ಮಧ್ಯಪ್ರದೇಶ ಚುನಾವಣೆಯ ಹಿನ್ನೆಲೆಯಲ್ಲಿ ಗುಜರಾತ್‌, ಉತ್ತರಪ್ರದೇಶ, ಬಿಹಾರ ಮತ್ತು ಮಹಾರಾಷ್ಟ್ರದ ಬಿಜೆಪಿ ಶಾಸಕರು ಶನಿವಾರ ಭೋಪಾಲ್‌ಗೆ ಆಗಮಿಸಿದ್ದಾರೆ. ಪ್ರತಿ ಶಾಸಕರಿಗೂ ತಲಾ ಒಂದು ಅಸೆಂಬ್ಲಿ ಕ್ಷೇತ್ರದ ಜವಾಬ್ದಾರಿಯನ್ನು ನೀಡಲಾಗುತ್ತದೆ. ಅವರು ಆ ಕ್ಷೇತ್ರಕ್ಕೆ ತೆರಳಿ ಅಲ್ಲಿನ ನೈಜ ಪರಿಸ್ಥಿತಿ ಅರಿಯುವ, ಜನಾಭಿಪ್ರಾಯವನ್ನು ಸಂಗ್ರಹಿಸುವ ಕೆಲಸ ಮಾಡಲಿದ್ದಾರೆ. ಶನಿವಾರದಿಂದ ಈ ಶಾಸಕರಿಗೆ ತರಬೇತಿ ಕಾರ್ಯಕ್ರಮವನ್ನೂ ಆಯೋಜಿಸಲಾಗಿದ್ದು, ಕೇಂದ್ರ ಸಚಿವ ಭೂಪೇಂದ್ರ ಯಾದವ್‌ ಈ ಕಾರ್ಯಕ್ರಮ ಉದ್ಘಾಟಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಒಟ್ಟು 230 ಅಸೆಂಬ್ಲಿ ಕ್ಷೇತ್ರಗಳಿವೆ.

ಕಾಂಗ್ರೆಸ್‌-ಆಪ್‌ ವಾಕ್ಸಮರ
ಶನಿವಾರ ಛತ್ತೀಸ್‌ಗಡಕ್ಕೆ ಭೇಟಿ ನೀಡಿರುವ ಆಪ್‌ ನಾಯಕ ಅರವಿಂದ ಕೇಜ್ರಿವಾಲ್‌, ಐಎನ್‌ಡಿಐಎ ಮೈತ್ರಿಕೂಟದ ಪಾಲುದಾರ ಪಕ್ಷವಾದ ಕಾಂಗ್ರೆಸ್‌ ವಿರುದ್ಧವೇ ಹರಿಹಾಯ್ದಿದ್ದಾರೆ. ರಾಜ್ಯದ ಸರ್ಕಾರಿ ಶಾಲೆಗಳ ಗುಣಮಟ್ಟವು ತೀರಾ ಕಳಪೆ ಮಟ್ಟದಲ್ಲಿದೆ. ಕೆಲವು ಶಾಲೆಗಳನ್ನು ಮುಚ್ಚಲಾಗಿದೆ. ಶಿಕ್ಷಕರಿಗೆ ಸರಿಯಾಗಿ ವೇತನವೂ ಸಿಗುತ್ತಿಲ್ಲ ಎಂದು ಕೇಜ್ರಿವಾಲ್‌ ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ನಾಯಕ ಪವನ್‌ ಖೇರಾ, “ಛತ್ತೀಸ್‌ಗಡ ಸರ್ಕಾರದ ಸಾಧನೆಯನ್ನು ಹಿಂದಿನ ರಮಣ್‌ಸಿಂಗ್‌ ಸರ್ಕಾರದ ಸಾಧನೆಯೊಂದಿಗೆ ಹೋಲಿಕೆ ಮಾಡಬೇಕೇ ಹೊರತು ದೆಹಲಿ ಜತೆಗಲ್ಲ’ ಎಂದಿದ್ದಾರೆ. ಆಪ್‌ ಮತ್ತು ಕಾಂಗ್ರೆಸ್‌ ನಡುವಿನ ಈ ವಾಗ್ಯುದ್ಧವು ಪ್ರತಿಪಕ್ಷಗಳ ಮೈತ್ರಿಕೂಟದಲ್ಲಿನ ಒಗ್ಗಟ್ಟಿನ ಬಗ್ಗೆಯೇ ಪ್ರಶ್ನೆ ಏಳುವಂತೆ ಮಾಡಿದೆ.

ಕಾಂಗ್ರೆಸ್‌ಗೆ ಮರಳಿದ ಸಿಂಧಿಯಾ ಆಪ್ತ
ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಆಪ್ತ ಸಮಂದರ್‌ ಪಟೇಲ್‌ ಬಿಜೆಪಿ ತೊರೆದು ಶನಿವಾರ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಮಧ್ಯಪ್ರದೇಶದ ಜವಾದ್‌ ಕ್ಷೇತ್ರದ ಶಾಸಕರಾಗಿರುವ ಅವರು ಮಧ್ಯಪ್ರದೇಶ ಕಾಂಗ್ರೆಸ್‌ ಮುಖ್ಯಸ್ಥ ಕಮಲ್‌ನಾಥ್‌ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದರು. ಇದಕ್ಕೂ ಮುನ್ನ ಅವರು ಜವಾದ್‌ನಿಂದ ರಾಜಧಾನಿ ಭೋಪಾಲ್‌ವರೆಗೆ 1,200 ಕಾರುಗಳಲ್ಲಿ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ಶಕ್ತಿ ಪ್ರದರ್ಶನ ಮಾಡಿದರು. 2020ರಲ್ಲಿ ಬಿಜೆಪಿ ಸೇರಿದ ನಂತರ ಕಾಂಗ್ರೆಸ್‌ಗೆ ಮರಳುತ್ತಿರುವ ಸಿಂಧಿಯಾ ಆಪ್ತರ ಪೈಕಿ ಪಟೇಲ್‌ ಮೂರನೆಯವರು. ಸಮಂದರ್‌ ಅವರನ್ನು ಸಿಂಧಿಯಾ ಅವರ “ರೈಟ್‌ ಹ್ಯಾಂಡ್‌’ ಎಂದೇ ಗುರುತಿಸಲಾಗಿದೆ. “ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣ ಇತ್ತು’ ಎಂದು ಸಮಂದರ್‌ ಹೇಳಿದ್ದಾರೆ.

10 ಗ್ಯಾರಂಟಿ ಘೋಷಣೆ
ಕಾಂಗ್ರೆಸ್‌ ಆಡಳಿತದ ಛತ್ತೀಸ್‌ಗಡದಲ್ಲಿ ಹೆಜ್ಜೆಯೂರಲು ಪ್ರಯತ್ನಿಸುತ್ತಿರುವ ಆಮ್‌ ಆದ್ಮಿ ಪಕ್ಷ, “ಗ್ಯಾರಂಟಿ’ಗಳ ಮೂಲಕವೇ ಕಾಂಗ್ರೆಸ್‌ಗೆ ಠಕ್ಕರ್‌ ನೀಡಲು ಮುಂದಾಗಿದೆ. ಶನಿವಾರ ರಾಯು³ರದಲ್ಲಿ ಬೃಹತ್‌ ಸಮಾವೇಶ ಉದ್ದೇಶಿಸಿ ಮಾತನಾಡಿದ ಆಪ್‌ ನಾಯಕ ಕೇಜ್ರಿವಾಲ್‌, ಮುಂಬರುವ ವಿಧಾನಸಭೆ ಚುನಾವಣೆಗೆ 10 ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. “ನಾವು ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ 300 ಯುನಿಟ್‌ವರೆಗೆ ಉಚಿತ ವಿದ್ಯುತ್‌, 2023ರ ನವೆಂಬರ್‌ವರೆಗಿನ ಬಾಕಿ ವಿದ್ಯುತ್‌ ಬಿಲ್‌ ಮನ್ನಾ, 18 ವರ್ಷ ವಯಸ್ಸು ದಾಟಿದ ಮಹಿಳೆಯರಿಗೆ ಮಾಸಿಕ 1 ಸಾವಿರ ರೂ. ಗೌರವಧನ, ಶಾಲಾ ಮಕ್ಕಳಿಗೆ ಉಚಿತ ಗುಣಮಟ್ಟದ ಶಿಕ್ಷಣ, ನಿರುದ್ಯೋಗಿಗಳಿಗೆ ಮಾಸಿಕ 3 ಸಾವಿರ ರೂ. ಭತ್ಯೆ ಸೇರಿದಂತೆ 10 ಗ್ಯಾರಂಟಿಗಳನ್ನು ನೀಡುತ್ತೇವೆ’ ಎಂದು ಕೇಜ್ರಿವಾಲ್‌ ಹೇಳಿದ್ದಾರೆ.

ಅಧಿಕಾರ ಉಳಿಸಿಕೊಳ್ಳುತ್ತೇವೆ
ಮಿಜೋರಾಂನಲ್ಲಿ ಈ ವರ್ಷಾಂತ್ಯ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಎಂಎನ್‌ಎಫ್ ಜಯ ಗಳಿಸುವುದು ಖಚಿತ ಎಂದು ಮುಖ್ಯಮಂತ್ರಿ ಝೊರಾಮ್‌ಥಂಗಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 40ರ ಪೈಕಿ ನಮ್ಮ ಕೈಯ್ಯಲ್ಲಿ “10 ಸುರಕ್ಷಿತ ಸೀಟು’ಗಳಿದ್ದು, ಈ ಕ್ಷೇತ್ರಗಳಲ್ಲಿ ಪ್ರತಿಪಕ್ಷಗಳ ಪ್ರಭಾವ ನಗಣ್ಯವಾಗಿದೆ ಎಂದಿದಾರೆ. ಪ್ರಸ್ತುತ ವಿಧಾನಸಭೆಯಲ್ಲಿ ಆಡಳಿತಾರೂಢ ಎಂಎನ್‌ಎಫ್ 27 ಸ್ಥಾನಗಳನ್ನು ಹೊಂದಿದ್ದರೆ, ಪ್ರಮುಖ ಪ್ರತಿಪಕ್ಷ ಝೆಡ್‌ಪಿಎಂ 7, ಕಾಂಗ್ರೆಸ್‌ 5 ಮತ್ತು ಬಿಜೆಪಿ 1 ಸ್ಥಾನಗಳನ್ನು ಹೊಂದಿವೆ.

ಯಾವುದೇ ಜಾತಿ, ಧರ್ಮದ ತಾರತಮ್ಯ ಮಾತನಾಡದೇ ತೆಲಂಗಾಣದ ಪ್ರತಿಯೊಂದು ವರ್ಗದ ಅಭಿವೃದ್ಧಿಗೂ ಕಾರಣರಾಗಿರುವ ಕೆ.ಚಂದ್ರಶೇಖರ್‌ ರಾವ್‌ ಅವರು “ಹ್ಯಾಟ್ರಿಕ್‌ ಸಿಎಂ’ ಆಗಿ ಹೊರಹೊಮ್ಮಬೇಕು. ಹೈದರಾಬಾದ್‌ ಇಡೀ ದೇಶಕ್ಕೇ ಮಾದರಿಯಾಗಬೇಕು.
ಕೆ.ಟಿ.ರಾಮರಾವ್‌, ತೆಲಂಗಾಣ ಸಚಿವ

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.