5 ವರ್ಷಗಳ ರೂಪುರೇಷೆ
ಆರ್ಥಿಕ ಸುಧಾರಣೆ, ನಿರುದ್ಯೋಗ ನಿವಾರಣೆಯೇ ಗುರಿ
Team Udayavani, Jun 25, 2019, 6:00 AM IST
ಹೊಸದಿಲ್ಲಿ: ನರೇಂದ್ರ ಮೋದಿ ಸರಕಾರದ ಈ ಅವಧಿಯ ಮೊದಲ ಬಜೆಟ್ ಕೇವಲ ಒಂದು ವರ್ಷದ ಗುರಿಯನ್ನು ಹೊಂದಿರು ವುದಿಲ್ಲ. ಬದಲಿಗೆ ಮುಂದಿನ ಐದು ವರ್ಷಗಳಲ್ಲಿ ನರೇಂದ್ರ ಮೋದಿ ಸರಕಾರ ಹಮ್ಮಿಕೊಳ್ಳಲಿರುವ ಯೋಜನೆಗಳ ರೂಪರೇಖೆಯನ್ನೇ ಈ ಬಾರಿಯ ಬಜೆಟ್ನಲ್ಲಿ ಮಂಡಿಸಲಾಗುತ್ತಿದೆ. ಮೂಲಗಳ ಪ್ರಕಾರ ದೇಶದ ಆರ್ಥಿಕತೆಯನ್ನು ವೃದ್ಧಿಸು ವುದು ಮತ್ತು ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವುದೇ ಈ ಬಜೆಟ್ನಲ್ಲಿ ಪ್ರಮುಖ ಅಂಶವಾಗಿರಲಿದೆ. ಈ ಎರಡು ಸಮಸ್ಯೆಗಳನ್ನು ನಿವಾರಿಸುವುದಕ್ಕೆಂದೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ನಲ್ಲಿ ಮಹತ್ವದ ಯೋಜನೆಗಳು ಇರಲಿವೆ ಎಂದು ಹೇಳಲಾಗಿದೆ.
ಆರ್ಥಿಕತೆಗೆ ಉತ್ತೇಜನ ನೀಡಲು ಬೇಡಿಕೆ ಮತ್ತು ಉದ್ಯೋಗವನ್ನು ಹೆಚ್ಚಿಸಬೇಕು. ಇದಕ್ಕೆ ಗ್ರಾಮೀಣ ಪ್ರದೇಶಗಳ ಸಬಲೀಕರಣವೇ ಉತ್ತಮ ಮಾರ್ಗವಾಗಿದ್ದು, ಬಜೆಟ್ನಲ್ಲಿ ಗ್ರಾಮೀಣ ಆರ್ಥಿಕತೆ ಉತ್ತೇಜನಕ್ಕೆ ಹೆಚ್ಚಿನ ಮಹತ್ವ ಒದಗಿಸಲಾಗುತ್ತದೆ ಎನ್ನಲಾಗಿದೆ. ಅಲ್ಲದೆ, ಇದರೊಂದಿಗೆ ಖಾಸಗಿ ವಲಯದಲ್ಲಿ ಉದ್ಯೋಗಾವಕಾಶ ಹೆಚ್ಚಳಕ್ಕಾಗಿ ಹಲವು ಔದ್ಯಮಿಕ ಉತ್ತೇಜನ ಯೋಜನೆಗಳನ್ನೂ ಘೋಷಿಸಬಹುದಾಗಿದೆ. ಮಧ್ಯಮ ವರ್ಗದ ಸಮುದಾಯಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಆದಾಯ ತೆರಿಗೆ ಮಿತಿಯಲ್ಲೂ ಏರಿಕೆ ಮಾಡುವ ಸಾಧ್ಯತೆಯಿದ್ದು, ಇದರಿಂದ ಜನರಲ್ಲಿ ಖರೀದಿ ಸಾಮರ್ಥ್ಯ ಹೆಚ್ಚಲಿದೆ. ಇತ್ತೀಚೆಗೆ ಘೋಷಿಸಲಾದ ಪಿಂಚಣಿ ಯೋಜನೆ ಕೂಡ ಮಹತ್ವದ್ದಾಗಿದ್ದು, ಇದು ಜನರಲ್ಲಿ ಖರೀದಿ ಸಾಮರ್ಥ್ಯವನ್ನು ಹೆಚ್ಚಿಸ ಲಿದೆ. ಈ ಮೂಲಕ ದೇಶದ ಆರ್ಥಿಕತೆಯೂ ವೃದ್ಧಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು