2020ರ ಮಾರ್ಚ್‌ನಿಂದ ಪುನಾರಂಭವಾಗಲಿದೆ ಸುವರ್ಣ ರಥ

ಪ್ರವಾಸೋದ್ಯಮ ಉತ್ತೇಜನವೇ ಮೂಲ ಉದ್ದೇಶ

Team Udayavani, Nov 20, 2019, 5:31 PM IST

golden

ಹೊಸದಿಲ್ಲಿ: ಪ್ರವಾಸೋದ್ಯಮವನ್ನು ಉತ್ತೇಜಿಸುವ ದೃಷ್ಟಿಯಿಂದ ಸುವರ್ಣ ರಥ (ಗೋಲ್ಟನ್‌ ಚಾರಿಯಟ್‌) ಐಷಾರಾಮಿ ಪ್ರವಾಸಿ ರೈಲುನ್ನು ಪುನರಾಂಭಿಸಲು ರೈಲ್ವೆ ಇಲಾಖೆ ಮತ್ತು ರಾಜ್ಯ ಪ್ರವಾಸೋದ್ಯಮ ನಿರ್ಧರಿಸಿದ್ದು, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮುಂದಿನ ಮಾರ್ಚ್‌ನಿಂದ ಚಾಲನೆಗೊಳ್ಳಲಿದೆ ಎಂದು ಭಾರತೀಯ ರೈಲ್ವೆ ಮಂಗಳವಾರ ತಿಳಿಸಿದೆ.

ಸುವರ್ಣ ರಥ ರೈಲನ್ನು ಮಾರುಕಟ್ಟೆಗೆ ತರಲು ಮತ್ತು ಕಾರ್ಯ ನಿರ್ವಹಿಸಲು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, (ಕೆಎಸ್‌ಟಿಡಿಸಿ) ಭಾರತೀಯ ರೈಲ್ವೆ ಕ್ಯಾಟರಿಂಗ್‌ ಮತ್ತು ಪ್ರವಾಸೋದ್ಯಮ ನಿಗಮ (ಐಆರ್‌ಸಿಟಿಸಿ) ಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ದಾಖಲೆ ಪತ್ರಗಳಿಗೆ ಸಹಿ ಹಾಕಿದ ನಂತರ ಈ ಘೋಷಣೆ ಮಾಡಲಾಗಿದೆ.

ಎಲ್ಲಾ ವರ್ಗದ ಜನರು ಪ್ರಯಾಣಿಸಲು ಅನುಕೂಲವಾಗುವಂತೆ ಸುವರ್ಣ ರಥ ರೈಲಿನ ನಿಯಮಗಳನ್ನು ರೂಪಿಸುವಂತೆ ಚಿಂತನೆ ನಡೆಸಲಾಗಿದ್ದು, ಸೂಕ್ತ ದಿನಾಂಕಗಳನ್ನು ನಿಗದಿ ಮಾಡುವುದರಿಂದ ಹಿಡಿದು ಇತರೆ ಎಲ್ಲಾ ಹೊಣೆಗಾರಿಕೆಯನ್ನು ಐಆರ್‌ಸಿಟಿಸಿ ಮತ್ತು ಕೆಎಸ್‌ಟಿಡಿಸಿ ನೋಡಿಕೊಳ್ಳಲಿದೆ.

15 ಪ್ರವಾಸೋದ್ಯಮ ತಾಣಗಳ ಸಂಪರ್ಕ
ಈ ಕುರಿತು ರೈಲ್ವೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಮಾತನಾಡಿದ್ದು, ದೇಶದ 15 ಪ್ರವಾಸೋದ್ಯಮ ತಾಣಗಳನ್ನು ಸಂಪರ್ಕಿಸುವ ಉದ್ದೇಶವನ್ನು ಈ ರೈಲು ಹೊಂದಿದೆ. ಈ ಯೋಜನೆಯಿಂದ ಕರ್ನಾಟಕ ಮತ್ತು ದಕ್ಷಿಣ ಭಾರತದ ಇತರ ರಾಜ್ಯಗಳ ಪ್ರವಾಸೋದ್ಯಮದ ಆದಾಯ ಹೆಚ್ಚಿಲಿದೆ ಎಂದಿದ್ದಾರೆ.

ದರ ಕಡಿತದ ಕುರಿತು ಯೋಚನೆ
ದಕ್ಷಿಣ ಭಾರತದ ಏಕೈಕ ಐಷಾರಾಮಿ ರೈಲು ಇದಾಗಿದ್ದು, ಭಾರಿ ನಷ್ಟ ಅನುಭವಿಸಿದ ನಂತರ ಕರ್ನಾಟಕ ಸರಕಾರ ತಾತ್ಕಾಲಿಕವಾಗಿ ಇದರ ಸೇವೆಗಳನ್ನು ಸ್ಥಗಿತಗೊಳಿಸಿತು.ದರ ಏರಿಕೆಯಂತಹ ನಿಯಮಗಳು ಸ್ಥಗಿತಕ್ಕೆ ಪ್ರಮುಖ ಕಾರಣವಾಗಿದ್ದು, ದರ ಕಡಿತದ ಕುರಿತು ಯೋಚನೆ ನಡೆಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ವಿಶೇಷಗಳೇನು ?
2008ರಲ್ಲಿ ರಾಜ್ಯ ಸರಕಾರ ಮತ್ತು ಭಾರತೀಯ ರೈಲ್ವೆ ಜಂಟಿ ನೇತೃತ್ವದಲ್ಲಿ ಸುವರ್ಣ ರಥ ಪ್ರಾರಂಭವಾಗಿದ್ದು, ಇದು 44 ಅತಿಥಿ ಕೋಣೆಗಳೊಂದಿಗೆ 18 ಕೋಚ್‌ಗಳಿವೆ. ಕನಿಷ್ಠವೆಂದರೆ ಸುಮಾರು 84 ಪ್ರಯಾಣಿಕರು ಒಂದೇ ಸಮಯದಲ್ಲಿ ಈ ರೈಲಿನಲ್ಲಿ ಪ್ರಯಾಣಿಸಬಹುದಾಗಿದೆ.

ಎಲ್ಲೆಲ್ಲಿ ಓಡಲಿದೆ ಗೋಲ್ಡನ್‌ ರಥ
ಕರ್ನಾಟಕ, ಕೇರಳ, ಪುದುಚೇರಿ ಮತ್ತು ದಕ್ಷಿಣ ಭಾರತದ ಇತರ ರಾಜ್ಯಗಳ ಪ್ರವಾಸಿ ತಾಣಗಳನ್ನು ಸೇರಿದಂತೆ, ರಾಜ್ಯದ ಬಂಡೀಪುರ, ಮೈಸೂರು, ಹಳೇಬಿಡು, ಚಿಕ್ಕಮಗಳೂರು, ಹಂಪಿ, ಬಿಜಾಪುರ ಮತ್ತು ಗೋವಾವನ್ನು ವಿನೂತನವಾಗಿ ಸೇರಿಸಲು ಪ್ರಸ್ತಾವಣೆ ಸಲ್ಲಿಸಲಾಗಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.