ಆರ್ಬಿಐನಿಂದ ಸರಕಾರಕ್ಕೆ 28,000 ಕೋಟಿ ರೂ.ಲಾಭಾಂಶ
Team Udayavani, Feb 19, 2019, 12:30 AM IST
ಹೊಸದಿಲ್ಲಿ: ಮಧ್ಯಂತರ ಡಿವಿಡೆಂಡ್ ರೂಪದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ 28 ಸಾವಿರ ಕೋಟಿ ರೂ.ಗಳನ್ನು ಕೇಂದ್ರ ಸರಕಾರಕ್ಕೆ ನೀಡಲಿದೆ. ಆರ್ಬಿಐ ಕೇಂದ್ರೀಯ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಆಡಿಟ್ ಮರುಪರಿಶೀಲನೆ ಮತ್ತು ವಿತ್ತ ಬಂಡವಾಳ ರೂಪುರೇಷೆಯನ್ನು ಅನ್ವಯಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರ್ಬಿಐ ಪ್ರಕಟಣೆ ತಿಳಿಸಿದೆ. ಎರಡನೇ ವರ್ಷವೂ ಮಧ್ಯಂತರ ಹೆಚ್ಚುವರಿ ಮೊತ್ತವನ್ನು ಸರಕಾರಕ್ಕೆ ಆರ್ಬಿಐ ವರ್ಗಾವಣೆ ಮಾಡುತ್ತಿದೆ. ಆರ್ಬಿಐ ಈ ನಿರ್ಧಾರ ಪ್ರಕಟಿಸುವುದಕ್ಕೂ ಮುನ್ನ ಕೇಂದ್ರೀಯ ಮಂಡಳಿ ಸಭೆಯನ್ನು ವಿತ್ತ ಸಚಿವ ಅರುಣ್ ಜೇಟ್ಲಿ ನಡೆಸಿದ್ದರು. ಈ ವೇಳೆ ಸರಕಾರದ ವಿವಿಧ ಸುಧಾರಣೆಗಳು ಮತ್ತು ನೀತಿ ನಿರೂಪಣೆಗಳ ವಿವರಗಳನ್ನು ಚರ್ಚಿಸಿದ್ದರು. ಆರ್ಬಿಐನಿಂದ ಹೆಚ್ಚುವರಿ ಮೀಸಲು ನಿಧಿಯನ್ನು ಪಡೆಯುವ ಬಗ್ಗೆ ಈ ಹಿಂದೆ ವ್ಯಾಪಕ ಚರ್ಚೆ ನಡೆದಿತ್ತು.
21ರಂದು ಬ್ಯಾಂಕ್ ಮುಖ್ಯಸ್ಥರ ಸಭೆ: ಬಡ್ಡಿ ದರ ಕಡಿತಗೊಳಿಸುವ ನಿಟ್ಟಿನಲ್ಲಿ ಸರ್ಕಾರಿ ಸ್ವಾಮ್ಯದ ಮತ್ತು ಖಾಸಗಿ ಕ್ಷೇತ್ರದ ಮುಖ್ಯಸ್ಥರ ಜತೆಗೆ 21ರಂದು ಮಾತುಕತೆ ನಡೆಸುವುದಾಗಿ ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ
Arvind Kejriwal ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು
NEET; ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ
Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ
Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್ ಕಡ್ಡಾಯ
MUST WATCH
ಹೊಸ ಸೇರ್ಪಡೆ
Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ
Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…
Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ
ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ
LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ