ಸರ್ದಾರ್ ಪಟೇಲರ ಬಗ್ಗೆ ಕೈ ಆಕ್ಷೇಪಾರ್ಹ ಮಾತು
Vallabhbhai Patel,
Team Udayavani, Oct 19, 2021, 5:50 AM IST
ಹೊಸದಿಲ್ಲಿ: ಇತ್ತೀಚೆಗೆ ನಡೆದಿದ್ದ ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ, ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ನಾಯಕ ತಾರೀಕ್ ಹಮೀದ್ ಕರ್ರಾ, ದೇಶದ ಪ್ರಪ್ರಥಮ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲರ ವಿರುದ್ಧ ಆಕ್ಷೇ ಪಾರ್ಹವಾಗಿ ಮಾತನಾಡಿದ್ದಾರೆ ಎಂದು ಕೆಲವು ಮಾಧ್ಯ ಮಗಳಲ್ಲಿ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ಧಾಳಿ ನಡೆಸಿದೆ.
ದಿಲ್ಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ, “ಪಟೇಲರಿಗೆ ಜಮ್ಮು ಕಾಶ್ಮೀರವನ್ನು ಪಾಕಿಸ್ಥಾನಕ್ಕೆ ಬಿಟ್ಟುಕೊಡುವ ಇರಾದೆಯಿತ್ತು. ಆದರೆ ಆಗಿನ ಪ್ರಧಾನಿ ನೆಹರೂ ಅವರಿಗೆ ಜಮ್ಮು ಕಾಶ್ಮೀರವನ್ನು ಉಳಿಸಿ ಕೊಳ್ಳುವ ಮನಸ್ಸಿತ್ತು. ಆದರೂ ಹಠ ಬಿಡದ ಪಟೇಲರು, ಪಾಕಿಸ್ಥಾನ ಸಂಸ್ಥಾಪಕ ಮೊಹಮ್ಮದ್ ಅಲಿ ಜಿನ್ನಾರಲ್ಲಿ ಜಮ್ಮು ಕಾಶ್ಮೀರವನ್ನು ನೀವೇ ಪಡೆಯಬೇಕೆಂದು ತಾಕೀತು ಮಾಡಿ ದ್ದರು ಎಂದು ಕರ್ರಾ ಅವರು ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ಹೇಳಿದ್ದಾ ರೆಂದು ಕೆಲವು ಪತ್ರಿಕೆಗಳು ವರದಿ ಮಾಡಿವೆ. ಸಭೆಯ ಅಧ್ಯಕ್ಷತೆ ವಹಿಸಿದ್ದ ಸೋನಿಯಾ ಗಾಂಧಿ ಈ ಬಗ್ಗೆ ಏನು ಹೇಳುತ್ತಾರೆ?’ ಎಂದು ಪ್ರಶ್ನಿಸಿದ ಅವರು, “”ಕರ್ರಾ ಅವರ ಹೇಳಿಕೆ ಗಾಂಧಿ ಪರಿವಾರದ ಬಗ್ಗೆ ಕಾಂಗ್ರೆಸ್ನ ನಾಯಕರು ಹೊಂದಿರುವ ಭಟ್ಟಂಗಿತನ ವನ್ನು ತೋರಿಸುತ್ತದೆ” ಎಂದಿದ್ದಾರೆ.
ಇದನ್ನೂ ಓದಿ:ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ
ಕಾಂಗ್ರೆಸ್ ಪ್ರತಿಕ್ರಿಯೆ: ಸಂಬಿತ್ ಪಾತ್ರಾರ ಆರೋಪಗಳನ್ನು ತಿರಸ್ಕರಿಸಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ, “”ಕಾಂಗ್ರೆಸ್ ವಿರುದ್ಧ ಇಂಥ ಆರೋಪಗಳನ್ನು ಮಾಡುವ ಮೂಲಕ ಬಿಜೆಪಿ, ಪ್ರಧಾನಿ ಮೋದಿ ಯವರು ಪುಂಖಾನುಪುಂಖ ವಾಗಿ ನೀಡುವ ಸುಳ್ಳು ಹೇಳಿಕೆಗಳನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದೆ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ