ದೇಶದಲ್ಲಿ ಹೆಚ್ಚುತ್ತಿದೆ ಬಿಸಿಲ ತಾಪ
Team Udayavani, Feb 27, 2017, 10:02 AM IST
ಪುಣೆ/ಬೆಂಗಳೂರು: ಈ ಬಾರಿಯ ಬೇಸಿಗೆ ಈ ಹಿಂದಿನ ಎಲ್ಲಾ ಬೇಸಿಗೆಗಳಿಗಿಂಥ ಹೆಚ್ಚು ಸುಡಲಿದೆ! ಅಧ್ಯಯನದ ವರದಿಯೊಂದು ಈ ಎಚ್ಚರಿಕೆ ನೀಡಿದೆ.
ಇತ್ತೀಚೆಗಷ್ಟೇ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮತ್ತು ಭಾರತೀಯ ಉಷ್ಣವಲಯ ಮಾಪನ ಸಂಸ್ಥೆ (ಐಐಟಿಎಂ) ಜಂಟಿಯಾಗಿ ನಡೆಸಿರುವ ಅಧ್ಯಯನ ವರದಿಯಲ್ಲಿ ಇದು ದಾಖಲಾಗಿದೆ. ಪ್ರತಿ ದಶಕಕ್ಕೆ ಬೇಸಿಗೆಯ ಉಷ್ಣಾಂಶ ಶೇ.0.56 ಡಿಗ್ರಿ ಸೆ.ನಷ್ಟು, ಮಳೆಗಾಲದಲ್ಲಿನ ಉಷ್ಣಾಂಶ ಶೇ. 0.32 ಡಿಗ್ರಿ ಸೆ.ನಷ್ಟು ಗಮನಾರ್ಹ ಹೆಚ್ಚಳ ಕಂಡಿದೆ ಎನ್ನುವುದನ್ನು ಅಧ್ಯಯನ ತಂಡ ವರದಿಯಲ್ಲಿ ದಾಖಲಿಸಿದೆ. ಬೇಸಿಗೆಗೂ ಮುನ್ನವೇ ಸುಡು ಬಿಸಿಲ ಪರಿಣಾಮ ವಿದ್ಯುತ್ ಉತ್ಪಾದನೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿರುವಂತೆಯೇ ಇಂಥದ್ದೊಂದು ಮಾಹಿತಿ ವರದಿಯಾಗಿದೆ. ಮುಂಬರುವ ದಿನಗಳಲ್ಲಿ ಎದುರಾಗುವ ರಣಬಿಸಿಲ ತಾಪ ಮನುಷ್ಯ ಸೇರಿದಂತೆ ಜೀವಿಗಳನ್ನು ಕಾಡುವ ಆತಂಕ ವ್ಯಕ್ತವಾಗಿದೆ.
ಮುಂಬೈ, ಪುಣೆ, ಕೋಲ್ಕತ, ಅಹಮದಾಬಾದ್, ವಿಶಾಖಪಟ್ಟಣ, ಕೊಯಮತ್ತೂರು, ನಾಗ್ಪುರ ಸೇರಿ ದೇಶಾದ್ಯಂತ 17 ನಗರಗಳನ್ನು ಈ ಅಧ್ಯಯನಕ್ಕಾಗಿ ಆಯ್ಕೆ ಮಾಡಿಕೊಳ್ಳಲಾಗಿತ್ತು. ಈ ಎಲ್ಲಾ ನಗರಗಳಲ್ಲಿಯೂ ಬೇಸಿಗೆಯ ತಾಪಮಾನದಲ್ಲಿನ ಉಷ್ಣಾಂಶ ಸೂಚ್ಯಂಕದಲ್ಲಿ ಹೆಚ್ಚಳ ಕಂಡುಬಂದಿದೆ. ಮುಂಬೈ ಮತ್ತು ಪುಣೆಯಲ್ಲಿ ಮಳೆಗಾಲದ ಉಷ್ಣಾಂಶ ಗಣನೀಯವಾಗಿ ಹೆಚ್ಚುತ್ತಿದೆ. ದೆಹಲಿ ಮತ್ತು ಅಮೃತಸರ ಸೇರಿ ಉತ್ತರ ಭಾರತದ ಬಹುತೇಕ ನಗರಗಳಲ್ಲಿ ಬೇಸಿಗೆ ಉಷ್ಣಾಂಶ ಪ್ರತಿ ವರ್ಷ ಹೆಚ್ಚುತ್ತಲೇ ಇದೆ ಎಂದು ಅಧ್ಯಯನ ವರದಿಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ