‘ದ ಕಾಶ್ಮೀರ್ ಫೈಲ್ಸ್’ ಚಿತ್ರಕ್ಕೆ ಅಣಕ : ಕೇಜ್ರಿವಾಲ್ ವಿರುದ್ಧ ಸಾವಂತ್ ಕಿಡಿ
Team Udayavani, Mar 25, 2022, 6:45 PM IST
ಪಣಜಿ: ”ದ ಕಾಶ್ಮೀರ್ ಫೈಲ್ಸ್” ಚಲನಚಿತ್ರದ ಕುರಿತು ದೆಹಲಿ ವಿಧಾನಸಭೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ನೀಡಿರುವ ಹೇಳಿಕೆಯನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಖಂಡಿಸಿದ್ದಾರೆ.
ಪಣಜಿಯಲ್ಲಿ ಪ್ರತಿಕ್ರಿಯೆ ನೀಡಿದ ಪ್ರಮೋದ ಸಾವಂತ್, ಈ ಹಿಂದೆ ಕೇಜ್ರಿವಾಲ್ ಸರ್ಕಾರವು ಹಲವು ಬಾಲಿವುಡ್ ಚಿತ್ರಗಳ ತೆರಿಗೆ ಮನ್ನಾ ಮಾಡಿತ್ತು. ಆದರೆ ”ದ ಕಾಶ್ಮೀರ್ ಫೈಲ್ಸ್” ಚಲನಚಿತ್ರ ತೆರಿಗೆ ಮನ್ನಾ ಮಾಡಲು ನಿರಾಕರಿಸಿದ್ದಾರೆ.. ಈ ಮೂಲಕ ಕಾಶ್ಮಿರಿ ಹಿಂದೂಗಳ ನೋವನ್ನು ಬೆಳಕಿಗೆ ತರುವ ಚಿತ್ರವನ್ನು ಅಣಕಿಸಿ ನಗುತ್ತಿದ್ದಾರೆ ಎಂದು ಕಿಡಿ ಕಾರಿದರು.
ಕೇಜ್ರಿವಾಲ್ ಹೇಳಿಕೆಯು ಅಮಾನವೀಯವಾಗಿದೆ. ಕಾಶ್ಮೀರ ಭಯೋತ್ಪಾದಕರರಿಂದ ದೌರ್ಜನ್ಯ ಎದುರಿಸಿದವರಿಗೆ ಮಾಡಿದ ಅವಮಾನ ಇದಾಗಿದೆ ಎಂದರು.
ಗೋವಾದಲ್ಲಿ ‘ದ ಕಾಶ್ಮೀರ್ ಫೈಲ್ಸ್’ ಚಲನಚಿತ್ರದ ತೆರಿಗೆಯನ್ನು ರದ್ಧುಗೊಳಿಸುವುದಾಗಿ ಪ್ರಮೋದ್ ಸಾವಂತ್ ಘೋಷಿಸಿದ್ದರು.
ರಾಜ್ಯ ಸರ್ಕಾರಗಳನ್ನು ತೆರಿಗೆ ಮುಕ್ತ ಮಾಡುವಂತೆ ಕೇಳಿಕೊಳ್ಳುವುದಕ್ಕಿಂತ ದ ಕಾಶ್ಮೀರ್ ಫೈಲ್ಸ್ ಚಲನಚಿತ್ರವನ್ನು ಯು ಟ್ಯೂಬ್ ನಲ್ಲಿ ಅಪ್ಲೋಡ್ ಮಾಡುವಂತೆ ಚಿತ್ರ ನಿರ್ಮಾಪಕ ವಿವೇಕ್ ಅಗ್ಮಿಹೋತ್ರಿ ರವರಿಗೆ ಕೇಳಿ ಎಂದು ಕೇಜ್ರಿವಾಲ್ ಹೇಳಿಕೆ ನೀಡಿದ್ದರು. ಈ ವೇಳೆ ಆಪ್ ಸಚಿವರು ಮತ್ತು ಶಾಸಕರು ನಗೆಯಾಡಿರುವ ಬಗ್ಗೆ ಹಲವರು ಆಕ್ರೋಶ ಹೋರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?