ಕೊಲೆಯಾಗಿ ಪತ್ತೆಯಾಗಿದ್ದು ಬಿಜೆಪಿ ನಾಯಕನಲ್ಲ, ಅವರ ಕೆಲಸದಾಳು!
Team Udayavani, Jan 29, 2019, 12:30 AM IST
ರತ್ಲಾಮ್: ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ನಡೆದಿದ್ದ ಹಿಮ್ಮತ್ ಪಾಟಿದಾರ್ ಎಂಬ ಆರೆಸ್ಸೆಸ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಗುರುತು ಸಿಗಲಾರದ ಆತನ ಮೃತದೇಹದ ಡಿಎನ್ಎ ಪರೀಕ್ಷಾ ವರದಿ ಲಭ್ಯವಾಗಿದ್ದು, ಮೃತಪಟ್ಟಾತ ಹಿಮ್ಮತ್ ಪಾಟಿದಾರ್ ಅಲ್ಲ, ಬದಲಿಗೆ ಹಿಮ್ಮತ್ ಅವರ ಕೆಲಸದಾಳು ಮದನ್ ಮಾಳವೀ ಯನದ್ದು ಎಂದು ಪೊಲೀಸರು ತಿಳಿಸಿದ್ದಾರೆ. ಜತೆಗೆ, ಹಿಮ್ಮತ್ ಇನ್ನೂ ಜೀವಂತವಾಗಿದ್ದಾರೆ ಎಂಬ ಸ್ಫೋಟಕ ಮಾಹಿತಿಯನ್ನೂ ನೀಡಿದ್ದಾರೆ. ತೀವ್ರ ಸಾಲದಲ್ಲಿ ಮುಳುಗಿದ್ದ ಪಾಟಿದಾರ್, ತನ್ನ ಹೆಸರಿನಲ್ಲಿರುವ ವಿಮೆ ಯೊಂದರ ಪರಿಹಾರ ಪಡೆಯಲು ತಾನು ಸತ್ತಿರುವಂತೆ ಬಿಂಬಿಸಲು ಯತ್ನಿಸಿದ್ದಾರೆ. ಇದಕ್ಕಾಗಿ, ತನ್ನ ಕೆಲಸದಾಳುವನ್ನು ಕೊಂದಿದ್ದಾರೆ ಎಂದು ಪೊಲೀಸರು ಅನುಮಾನಿಸಿದ್ದಾರೆ.
ಜ. 23ರಂದು ಹಿಮ್ಮತ್ ಅವರ ತಂದೆ ತಮ್ಮ ಮಗ ತಮ್ಮ ಗದ್ದೆಯಲ್ಲಿ ಸಾವಿಗೀ ಡಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ತನಿಖೆ ಕೈಗೊಂಡಿದ್ದ ಪೊಲೀ ಸರಿಗೆ ಪ್ರಕರಣದ ಹಿಂದಿನ ದಿನ ಹಿಮ್ಮತ್ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಮಾಳವೀಯ ಕಾಣೆಯಾಗಿದ್ದು ತಿಳಿದು ಬಂದಿದ್ದರಿಂದ ಅನುಮಾನಗೊಂಡ ಪೊಲೀಸರು ಶವದ ಸ್ಯಾಂಪಲ್ಗಳನ್ನು ಡಿಎನ್ಎ ಪರೀಕ್ಷೆಗೆ ಕಳುಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ