ವಿಶ್ವದಲ್ಲೇ ಅತೀ ದೊಡ್ಡ ಸೋಲಾರ್‌ ಪಾರ್ಕ್‌


Team Udayavani, Jan 29, 2020, 6:45 AM IST

solar-system

ವಿಶ್ವದ ಏಕೈಕ ಅತೀ ದೊಡ್ಡ ಸೋಲಾರ್‌ ಪಾರ್ಕ್‌ ಕರ್ನಾಟಕದಲ್ಲಿ ತಲೆ ಎತ್ತಿದ್ದು, ಇದೀಗ ಬಳಕೆಗೆ ಮುಕ್ತವಾಗಿದೆ. ಇದು ರಾಜ್ಯಕ್ಕೆ, ದೇಶಕ್ಕೆ ಹೆಮ್ಮಯ ವಿಷಯದ ಜತೆಗೆ ಬರದಿಂದ ತತ್ತರಿಸಿದ ಭೂಮಿಯಲ್ಲೇ ಇದನ್ನು ಅಳವಡಿಸಲಾಗಿದೆ. ಇದರಿಂದ ಕೃಷಿಗೆ ಬಹಳ ದೊಡ್ಡ ಹಾನಿಯಾಗಿಲ್ಲ. ಕಳೆದ ವಾರ ಟ್ವೀಟ್‌ ಮಾಡಿರುವ ಕೇಂದ್ರ ಇಂಧನ ಸಚಿವ ಪಿಯೂಶ್‌ ಗೋಯಲ್‌ ಅವರು, ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಭಾರತ ಮುಂದಿನ ಹೆಜ್ಜೆ ಇಟ್ಟಿದೆ. ತುಮಕೂರಿನ ಪಾವಗಡ ವಿಶ್ವದ ದೊಡ್ಡ ಸೌರ ವಿದ್ಯುತ್‌ ಘಟಕ ಕಾರ್ಯಾರಂಭ ಮಾಡಿದೆ ಎಂದು ಘೋಷಿಸಿದ್ದಾರೆ.

12 ಸಾವಿರ ಕೋಟಿ ರೂ.
ಸುಮಾರು 12 ಸಾವಿರ ಕೋಟಿ ರೂ. ವೆಚ್ಚದಲ್ಲಿ ಈ ಸೋಲಾರ್‌ ಪಾರ್ಕ್‌ ನಿರ್ಮಾಣವಾಗಿದೆ. ರೈತರಿಂದ ಭೂಮಿಯನ್ನು ಪಡೆದು ಈ ಶಕ್ತಿ ಕೇಂದ್ರವನ್ನು ಸ್ಥಾಪಿಸಲಾಗಿದೆ.

13 ಸಾವಿರ ಎಕರೆ
ಸೋಲಾರ್‌ ಪಾರ್ಕ್‌ ನಿರ್ಮಾಣಕ್ಕೆ ಬರದಿಂದಾಗಿ ಕೃಷಿಗೆ ಯೋಗ್ಯವಾಗಿರದ ಭೂಮಿಯನ್ನು ರೈತರಿಂದ ಗುತ್ತಿಗೆ ಪಡೆಯಲಾಗಿದೆ. ಕರ್ನಾಟಕ ಸೌರಶಕ್ತಿ ಅಭಿವೃದ್ಧಿ ನಿಗಮ ನಿಯಮಿತ ರೈತರಿಂದ ಪಡೆದ ಭೂಮಿಗೆ ಪ್ರತಿ ಎಕರೆಗೆ 21 ಸಾವಿರ ರೂ. ಗುತ್ತಿಗೆ ಹಣವನ್ನು ನೀಡುತ್ತದೆ. ಪ್ರತಿ ಎರಡು ವರ್ಷಕ್ಕೊಮ್ಮೆ ಶೇ. 5ರಷ್ಟು ಹಣವನ್ನು ಹೆಚ್ಚಳ ಮಾಡಲಾಗುತ್ತದೆ.

16,500 ಕೋಟಿ ರೂ. ವೆಚ್ಚ
ಒಟ್ಟು ಅಂದಾಜು 16,500 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದೆ. ಯೋಜನೆಯಿಂದ 3 ಸಾವಿರ ಮಂದಿ ಸ್ಥಳೀಯರಿಗೆ ಉದ್ಯೋಗ ದೊರೆಯಲಿದೆ.

ಯಾಕೆ ಈ ಭೂಮಿ
ಆಂಧ್ರಪ್ರದೇಶದ ಗಡಿಗೆ ಹೊಂದಿ ಕೊಂಡಿರುವ ಪಾವಗಡ ತಾಲೂಕಿ ನಲ್ಲಿ ಯಾವುದೇ ಶಾಶ್ವತ ನೀರಾವರಿ ಯೋಜನೆಗಳಿಲ್ಲ. ಹೀಗಾಗಿ ಪ್ಲೋರೈಡ್‌ ಸಮಸ್ಯೆಯಿಂದ ಜನರು ಬಳಲುತ್ತಿರುತ್ತಾರೆ. ಉತ್ತರ ಕರ್ನಾಟಕ ಜಿÇÉೆಗಳಲ್ಲಿರುವಂತೆ ಪಾವಗಡದಲ್ಲೂ ಗರಿಷ್ಠ ಉಷ್ಣಾಂಶ ಇರುತ್ತದೆ. ಹಳೇ ಮೈಸೂರು ಭಾಗದಲ್ಲಿ ಈ ರೀತಿ ಉಷ್ಣಾಂಶ ಇರುವ ಏಕೈಕ ಪ್ರದೇಶ ಇದಾಗಿದೆ. ಸಾಮಾನ್ಯ ದಿನಗಳಲ್ಲಿ ತಾಲೂಕಿನಲ್ಲಿ ಸರಿಸುಮಾರು ಉಷ್ಣಾಂಶ 29.5 ಡಿಗ್ರಿ ಸೆಲ್ಸಿಯಸ್‌ನಷ್ಟಿದ್ದರೆ, ಬೇಸಗೆಯಲ್ಲಿ 36.9 ಡಿಗ್ರಿ ಸೆಲ್ಸಿಯಸ್‌ಗೂ ಮಿಗಿಲಾದ ಗರಿಷ್ಠ ತಾಪಮಾನ ತಾಲೂಕಿನಲ್ಲಿರುತ್ತದೆ.

ವಿದ್ಯುತ್‌ ಉತ್ಪಾದನೆ ಹೇಗೆ?
2,000 ಮೆಗಾವ್ಯಾಟ್‌ ಸೌರ ವಿದ್ಯುತ್‌ ಉತ್ಪಾದನೆಯ ಸೋಲಾರ್‌ ಪಾರ್ಕ್‌ ಅನ್ನು ತಲಾ 250 ಮೆ.ವ್ಯಾ. ಸಾಮರ್ಥ್ಯದ 8 ಬ್ಲಾಕ್‌ಗಳಲ್ಲಿ ಅಭಿವೃದ್ಧಿ ಪಡಿಸಲಾಗಿದೆ. ಪ್ರತಿ 250 ಮೆಗಾವ್ಯಾಟ್‌ ಸೌರ ವಿದ್ಯುತ್‌ ಬ್ಲಾಕ್‌ 220 ಕೆ.ವಿ. ಸಾಮರ್ಥ್ಯದ ಒಂದು ಪೋಲಿಂಗ್‌ ಉಪಕೇಂದ್ರ ಸ್ಥಾಪಿಸಲಾಗಿದೆ. ಈ 250 ಮೆಗಾ ವ್ಯಾಟ್‌ ಸಾಮರ್ಥ್ಯದ ಬ್ಲಾಕ್‌ ಅನ್ನು ಮತ್ತೆ 50 ಮೆಗಾವ್ಯಾಟ್‌ ಸಾಮರ್ಥ್ಯದ ಉಪ ಬಾಕ್‌ಗಳಾಗಿ ವಿಭಾಗಿಸಲಾಗಿದೆ. ಹೀಗಾಗಿ 550 ಮೆಗಾವ್ಯಾಟ್‌ ಸಾಮರ್ಥ್ಯದ ಉಪ ಬ್ಲಾಕ್‌ಗಳು 33 ಕೆವಿ ಅಥವಾ 66 ಕೆವಿ ಭೂಗತ ಕೇಬಲ್‌ಗ‌ಳ ಮೂಲಕ ಪೋಲಿಂಗ್‌ ಉಪಕೇಂದ್ರಕ್ಕೆ ವಿದ್ಯುತ್‌ ಹರಿಸಲಾಗುತ್ತದೆ. ಇಲ್ಲಿಂದ ಈ ವಿದ್ಯುತ್‌ ಅನ್ನು 220 ಕೆ.ವಿ. ಪೂಲಿಂಗ್‌ ಕೇಂದ್ರಕ್ಕೆ ರವಾನಿಸಲಾಗುತ್ತದೆ.

2050 ಮೆಗಾ ವ್ಯಾಟ್‌
ಪಾವಗಡದಲ್ಲಿ ಒಟ್ಟು 2,050 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದಿಸುವ ಗುರಿಯನ್ನು ಇಟ್ಟುಕೊಳ್ಳಲಾಗಿತ್ತು. ಆರಂಭದಲ್ಲಿ 2,000 ಮೆ.ವ್ಯಾ. ಗುರಿ ಇದ್ದರೂ ಬಳಿಕ 50 ಮೆ.ವ್ಯಾ. ಹೆಚ್ಚಿಸಲಾಗಿತ್ತು. ಈಗ ಸಂಪೂರ್ಣವಾಗಿ ಸೌರಶಕ್ತಿ ಉತ್ಪಾದನೆಗೆ ಮುಕ್ತವಾಗಿದೆ.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.