ಬಹುನಿರೀಕ್ಷಿತ ಚಂದ್ರಯಾನ-2 ಮಿಸ್ಸಾಯ್ತು!; ಮುಂದೇನು?
Team Udayavani, Sep 7, 2019, 4:25 PM IST
ಬೆಂಗಳೂರು: ಬಹುನಿರೀಕ್ಷಿತ ಚಂದ್ರಯಾನ 2 ರ ವಿಕ್ರಂ ಲ್ಯಾಂಡರ್ ಕೊನೆ ಕ್ಷಣದಲ್ಲಿ ಸಂಪರ್ಕ ಕಡಿತಗೊಂಡಿದ್ದರಿಂದ ಕೂದಲೆಳೆ ಅಂತರದಲ್ಲಿ ಸೇಫ್ ಲ್ಯಾಂಡಿಂಗ್ ತಪ್ಪಿದೆ. ಈಗ ಮುಂದೇನು ಎಂಬ ಪ್ರಶ್ನೆ ಬರುವುದು ಸಹಜ.
ಲ್ಯಾಂಡರ್ ಚಂದ್ರನಲ್ಲಿ ಸರಿಯಾಗಿ ಇಳಿದಿಲ್ಲ ಎಂದರೆ ಇಡೀ ಯೋಜನೆಯೇ ಹಾಳಾಯಿತು ಎಂದರ್ಥವಲ್ಲ. ಚಂದ್ರನ ಹೊರಗಿನ ಕಕ್ಷೆಯಲ್ಲಿ ಉಪಗ್ರಹ ಸುತ್ತುತ್ತಿದ್ದು ಇನ್ನು 1 ವರ್ಷ ಅದರ ಆಯುಷ್ಯ ಇರಲಿದೆ. ಇದೇ ವೇಳೆ ಇಸ್ರೋ ಚಂದ್ರಯಾನ 2 ರ ಮುಂದಿನ ಹೆಜ್ಜೆಯ ಬಗ್ಗೆಯೂ ತೀರ್ಮಾನಿಸಲಿದೆ.
ವಿಕ್ರಂ ಲ್ಯಾಂಡಿಂಗ್ನಲ್ಲಿ ಆದ ಸಮಸ್ಯೆಯೇನು ಎಂಬುದನ್ನು ತಿಳಿಯಲು ಅದು ದತ್ತಾಂಶ ಸಂಗ್ರಹಣೆ ಮಾಡಲಿದೆ. ಶೇ.95ರಷ್ಟು ಯೋಜನೆ ಯಶಸ್ವಿಯಾಗಿರುವುದರಿಂದ ಮುಂದಿನ ಯೋಜನೆಗೆ ನೆರವು ಸಿಗಲಿದೆ.
ಇಸ್ರೋದ ಮಾಜಿ ನಿರ್ದೇಶಕ ಡಿ ಶಶಿಕುಮಾರ್ ಅವರು ಎಎನ್ಐ ಸುದ್ದಿಸಂಸ್ಥೆಗೆ ತಿಳಿಸಿದಂತೆ ಲ್ಯಾಂಡರ್ ಮತ್ತು ಆರ್ಬಿಟರ್ (ಉಪಗ್ರಹ) ನಡುವೆ ಸಂಪರ್ಕ ಸರಿಯಾಗಿತ್ತು. ಆದರೆ ಸಂವಹನ ದತ್ತಾಂಶಗಳು ಸಿಗದಾಗಿವೆ. ಇದರಿಂದ ಕೊನೆಯ 15 ನಿಮಿಷದಲ್ಲಿ ಏನಾಯ್ತು ಎಂಬುದರ ಬಗ್ಗೆ ವಿಜ್ಞಾನಿಗಳು ಶೋಧ ನಡೆಸಲಿದ್ದಾರೆ. ಮುಂದಿನ ದಿನಗಳಲ್ಲಿ ದೂರ ಬಾಹ್ಯಾಕಾಶ ಯಾನದಲ್ಲಿ, ಲ್ಯಾಂಡಿಂಗ್ ವೇಳೆ ಹೀಗಾಗದಂತೆ ನೋಡಿಕೊಳ್ಳಲು ಇದರಿಂದ ಸಾಧ್ಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ