ಆದಾಯ ತೆರಿಗೆ ವಿನಾಯ್ತಿ ಮಿತಿ 8 ಲಕ್ಷಕ್ಕೇರಿಸಿ!
ಅರ್ಜಿ ಕುರಿತು ಕೇಂದ್ರದ ಪ್ರತಿಕ್ರಿಯೆ ಕೇಳಿದ ಮದ್ರಾಸ್ ಹೈಕೋರ್ಟ್
Team Udayavani, Nov 23, 2022, 6:45 AM IST
ಚೆನ್ನೈ: ವಾರ್ಷಿಕ 8 ಲಕ್ಷ ರೂ.ಗಿಂತ ಕಡಿಮೆ ಆದಾಯ ಹೊಂದಿರುವವರಿಗೆ ಆದಾಯ ತೆರಿಗೆಯಿಂದ ವಿನಾಯ್ತಿ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿರುವ ಮದ್ರಾಸ್ ಹೈಕೋರ್ಟ್ನ ಮದುರೈ ಪೀಠ, ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೋರಿ ನೋಟಿಸ್ ಜಾರಿ ಮಾಡಿದೆ.
4 ವಾರಗಳ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ನ್ಯಾ.ಆರ್.ಮಹದೇವನ್ ಮತ್ತು ನ್ಯಾ. ಸತ್ಯ ನಾರಾಯಣ ಪ್ರಸಾದ್ ನೇತೃತ್ವದ ನ್ಯಾಯಪೀಠ ಸೂಚಿಸಿದೆ.
ಡಿಎಂಕೆಯ ಆಸ್ತಿ ಸಂರಕ್ಷಣಾ ಮಂಡಳಿಯ ಸದಸ್ಯ, 82 ವರ್ಷದ ಕುನ್ನೂರು ಸೀನಿವಾಸನ್ ಎಂಬವರೇ ಅರ್ಜಿದಾರರು.
“ಮೇಲ್ವರ್ಗದಲ್ಲಿರುವಂಥ ಆರ್ಥಿಕವಾಗಿ ದುರ್ಬಲರಿಗೆ (ಇಡಬ್ಲ್ಯುಎಸ್) ಶೇ.10ರಷ್ಟು ಮೀಸಲಾತಿ ಒದಗಿಸಲು ಸುಪ್ರೀಂ ಕೋರ್ಟ್ ಇತ್ತೀಚೆಗೆ ಒಪ್ಪಿಗೆ ನೀಡಿದೆ. ಅದರಂತೆ, ವಾರ್ಷಿಕ 8 ಲಕ್ಷ ರೂ.ಗಿಂತ ಕಡಿಮೆ ಆದಾಯ ಹೊಂದಿರುವ ಕುಟುಂಬಗಳನ್ನು ಆರ್ಥಿಕವಾಗಿ ದುರ್ಬಲ ವರ್ಗ ಎಂದು ಪರಿಗಣಿಸಲಾಗಿದೆ. 8 ಲಕ್ಷಕ್ಕಿಂತ ಕಡಿಮೆ ಆದಾಯ ಇರುವವರು ಆರ್ಥಿಕವಾಗಿ ದುರ್ಬಲರು ಎನ್ನುವುದಾದರೆ, 2.50 ಲಕ್ಷ ರೂ.ಗಿಂತ ಹೆಚ್ಚು ಆದಾಯ ಇರುವವರು ಆದಾಯ ತೆರಿಗೆ ಪಾವತಿಸಬೇಕು ಎಂದು ಹೇಳುವುದು ಸರಿಯೇ’ ಎಂಬುದು ಅರ್ಜಿದಾರರ ಪ್ರಶ್ನೆಯಾಗಿದೆ.
ನಿರ್ದಿಷ್ಟ ವರ್ಗವನ್ನು ನಿಗದಿತ ಆದಾಯದ ಆಧಾರದಲ್ಲಿ ಆರ್ಥಿಕವಾಗಿ ದುರ್ಬಲರು ಎಂದು ಪರಿಗಣಿಸುವುದಾದರೆ, ತೆರಿಗೆ ಸಂಗ್ರಹದ ವೇಳೆಯೂ ಇದೇ ಮಾನದಂಡವನ್ನು ಅನುಸರಿಸಬೇಕು ಎನ್ನುವುದು ಅವರ ವಾದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಮಾನದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ:ಬ್ಯಾಂಕಾಕ್ಗೆ ತೆರಳುತ್ತಿದ್ದ ವ್ಯಕ್ತಿ ಮೃತ್ಯು
ವಕೀಲರಾಗಿ ಆಯ್ಕೆಯಾದ ಕೇರಳದ ಮೊದಲ ತೃತೀಯಲಿಂಗಿ ಪದ್ಮಲಕ್ಷ್ಮಿ !
ಭಾರತ ನಮ್ಮ ಅನಿವಾರ್ಯ ಪಾಲುದಾರ: ದೆಹಲಿಯಲ್ಲಿ ಜಪಾನ್ ಪ್ರಧಾನಿ ಫ್ಯೂಮಿಯೊ
ಲಂಡನ್ನಲ್ಲಿ ಖಲಿಸ್ತಾನಿ ಬೆಂಬಲಿಗರ ಕುಕೃತ್ಯ: ದೆಹಲಿ ಯುಕೆ ಮಿಷನ್ ಹೊರಗೆ ಪ್ರತಿಭಟನೆ
ಅಮೃತಪಾಲ್ ಗಾಗಿ ಶೋಧ; ಐದು ಸಹಚರರರ ವಿರುದ್ಧ NSA ; ಐಎಸ್ಐ ಪಾತ್ರ?
MUST WATCH
ಹೊಸ ಸೇರ್ಪಡೆ
ವಿಮಾನದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ:ಬ್ಯಾಂಕಾಕ್ಗೆ ತೆರಳುತ್ತಿದ್ದ ವ್ಯಕ್ತಿ ಮೃತ್ಯು
ಸಿದ್ದರಾಮಯ್ಯ ಅವರಿಗೆ ಸ್ಪರ್ಧಿಸಲು ಕ್ಷೇತ್ರವೇ ಸಿಗುತ್ತಿಲ್ಲವೆಂದರೆ… ನಿರಾಣಿ ವ್ಯಂಗ್ಯ
ವಿದ್ಯಾವಂತರಿಗೆ ಸರಕಾರ ಉದ್ಯೋಗ ನೀಡದೆ ನರೇಗಾ ಕೆಲಸಕ್ಕೆ ತಳ್ಳಿದೆ : ಶಾಸಕ ಗಣೇಶ್
ಬಿದರಹಳ್ಳಿಯ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ
ಅಧಿಕಾರಕ್ಕೆ ಬರುವುದೇ ಡೌಟು… ಆದರೂ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚುತ್ತಿದೆ: ಕಟೀಲ್