1000 ಕೋಟಿ ವೆಚ್ಚದಲ್ಲಿ ಬರಲಿದೆ ಮಹಾಭಾರತ ಸಿನಿಮಾ!


Team Udayavani, Apr 18, 2017, 3:45 AM IST

mahabarata.jpg

ಕೊಚ್ಚಿ: ಭಾರತ ಚಲನಚಿತ್ರ ಇತಿಹಾಸದಲ್ಲೇ ಇದೇ ಮೊಟ್ಟ ಮೊದಲ ಬಾರಿಗೆ ಸಾವಿರ ಕೋಟಿ ವೆಚ್ಚದಲ್ಲಿ ಅದ್ಧೂರಿ, ಬಹುಭಾಷಾ “ದಿ ಮಹಾಭಾರತ’ ಸಿನಿಮಾ ತೆರೆಗೆ ಬರಲಿದೆ.

ಚಿತ್ರಕ್ಕೆ ಕನ್ನಡಿಗ, ದುಬೈನ ಪ್ರಸಿದ್ಧ ಉದ್ಯಮಿ, ಯುಎಇ ಎಕ್ಸ್‌ಚೇಂಜ್‌ ಮತ್ತು ಎನ್‌ಎಂಸಿ ಹೆಲ್ತ್‌ಕೇರ್‌ನ ಸ್ಥಾಪಕ ಮತ್ತು ಅಧ್ಯಕ್ಷ ಬಿ.ಆರ್‌. ಶೆಟ್ಟಿ ಅವರು ಹಣ ಹಾಕಲಿದ್ದು, ಮಲೆಯಾಳಂನ ಶ್ರೇಷ್ಟ ನಿರ್ದೇಶಕ ವಿ.ಎ. ಶ್ರೀಕುಮಾರನ್‌ ಮೆನನ್‌ ನಿರ್ದೇಶಿಸಲಿದ್ದಾರೆ. ಈ ಚಿತ್ರಕ್ಕೆ ಮಲೆಯಾಳಂನ ಜ್ಞಾನಪೀಠ ಪುರಸ್ಕೃತ ಸಾಹಿತಿ ಎಂ.ಟಿ. ವಾಸುದೇವನ್‌ ನಾಯರ್‌ ಅವರ ಕಥೆಯನ್ನು ಆಧಾರವಾಗಿಟ್ಟುಕೊಳ್ಳಲಾಗಿದೆ.

ವಿಶೇಷವೆಂದರೆ ಇದು ಕನ್ನಡವೂ ಸೇರಿದಂತೆ ಇಂಗ್ಲಿಷ್‌, ಹಿಂದಿ, ಮಲೆಯಾಳಂ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗಲಿದೆ. ಇದನ್ನು ಜಗತ್ತಿನ 100 ಭಾಷೆಗಳಿಗೆ ಪಸರಿಸುವ ಆಶಯ ಬಿ.ಆರ್‌. ಶೆಟ್ಟಿ ಅವರದ್ದು. 2018ರ ಸೆಪ್ಟೆಂಬರ್‌ನಲ್ಲಿ ಚಿತ್ರದ ಚಿತ್ರೀಕರಣ ಶುರುವಾಗಲಿದ್ದು, 2020ರ ಆರಂಭದಲ್ಲೇ ಬಿಡುಗಡೆಯಾಗಲಿದೆ. ಚಿತ್ರ ಎರಡು ಭಾಗದಲ್ಲಿ ಇರಲಿದ್ದು, ಮೊದಲ ಭಾಗ ರಿಲೀಸ್‌ ಆದ ಮೂರು ತಿಂಗಳಲ್ಲೇ 2ನೇ ಭಾಗವೂ ಬಿಡುಗಡೆ ಕಾಣಲಿದೆ ಎಂಬುದು ವಿಶೇಷ.

ಆರಂಭದಲ್ಲಿ ಆರು ಭಾಷೆಗಳಲ್ಲಿ ಚಿತ್ರ ನಿರ್ಮಾಣ ಮಾಡುತ್ತೇವೆ, ಬಳಿಕ ದೇಶದ ಉಳಿದ ಭಾಷೆಗಳು ಮತ್ತು ವಿದೇಶಿ ಭಾಷೆಗಳಿಗೆ ಡಬ್‌ ಮಾಡಿ ಬಿಡುಗಡೆ ಮಾಡುತ್ತೇವೆ ಎಂದು ಉದ್ಯಮಿ ಬಿ.ಆರ್‌. ಶೆಟ್ಟಿ ಹೇಳಿದ್ದಾರೆ. ಈ ಚಿತ್ರದಲ್ಲಿ ಹಾಲಿವುಡ್‌ ಮತ್ತು ಭಾರತೀಯ ಸಿನಿಮಾವೂ ಸೇರಿದಂತೆ ಪ್ರಸಿದ್ಧ ನಟರು, ತಂತ್ರಜ್ಞರು ಕೆಲಸ ಮಾಡಲಿದ್ದಾರೆ. ಅಂದರೆ ಆಸ್ಕರ್‌ ಸೇರಿದಂತೆ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿ ಪಡೆದಿರುವಂಥ ತಂತ್ರಜ್ಞರು, ನಟರು ಭಾಗಿಯಾಗಲಿದ್ದಾರೆ ಎಂದು ಶೆಟ್ಟಿ ವಿವರಿಸಿದ್ದಾರೆ. ಅಂತಾರಾಷ್ಟ್ರೀಯ ಗರಿಮೆಯುಳ್ಳ ನಿರ್ದೇಶಕ ವಿ.ಎ. ಶ್ರೀಕುಮಾರನ್‌ ಮೆನನ್‌ ಇದನ್ನು ನಿರ್ದೇಶಿಸುತ್ತಿದ್ದು, ಅವರೇ ನಟರನ್ನೂ ಆರಿಸಲಿದ್ದಾರೆ ಎಂದಿದ್ದಾರೆ. ಜತೆಗೆ ಶ್ರೀಕುಮಾರ್‌ ಅವರು ಹಲವಾರು ವರ್ಷಗಳಿಂದ ಈ ಚಿತ್ರಕ್ಕಾಗಿ ಕೆಲಸ ಮಾಡುತ್ತಿದ್ದು, ಸಂಪೂರ್ಣ ಸಿದ್ಧತೆಯಲ್ಲಿದ್ದಾರೆ.

ಈ ಚಿತ್ರ ಸಂಪೂರ್ಣವಾಗಿ ಮೇಕ್‌ ಇನ್‌ ಇಂಡಿಯಾ ಭಾಗವಾಗಲಿದ್ದು, ಜಗತ್ತಿನ ಎಲ್ಲ ಕಡೆಗಳಲ್ಲಿ ತನ್ನದೇ ಛಾಯೆ ಮೂಡಿಸಲಿದೆ. ಸರಿಸುಮಾರು ಮೂರು ಶತಕೋಟಿ ಜನರಿಗೆ ಈ ಚಿತ್ರ ತಲುಪುವಂತೆ ಮಾಡಲಾಗುವುದು ಎಂದು ಬಿ.ಆರ್‌. ಶೆಟ್ಟಿ ಹೇಳಿದ್ದಾರೆ.

ಎಂ.ಟಿ. ವಾಸುದೇವನ್‌ ನಾಯರ್‌ ಅವರ ಭೀಮನನ್ನು ಪ್ರಮುಖವಾಗಿ ಚಿತ್ರಿಸಿರುವಂಥ “ರಂಡಮೋಳಮ್‌'(ದಿ ಸೆಕೆಂಡ್‌ ಟರ್ನ್)ಕಾದಂಬರಿಯನ್ನು ಆಧರಿಸಿ ಈ ಚಿತ್ರ ತಯಾರಿಸಲಾಗುತ್ತಿದೆ. ಇಷ್ಟೇ ಅಲ್ಲದೇ, ಇವರೇ ಚಿತ್ರಕ್ಕೆ ಚಿತ್ರಕಥೆಯನ್ನೂ ಬರೆಯಲಿದ್ದಾರೆ. ವಿಶೇಷವೆಂದರೆ, ಚಿತ್ರಕಥೆ ವಿಚಾರದಲ್ಲಿ ಭಾರತದ ಸಿನಿಮಾ ಇತಿಹಾಸದಲ್ಲೇ ಇವರಿಗೇ ಅತಿ ಹೆಚ್ಚು ರಾಷ್ಟ್ರೀಯ ಪ್ರಶಸ್ತಿಗಳು ಬಂದಿವೆ.

ಹಿಂದೆಯೂ ಹಲವಾರು ಭಾರಿ ಮಹಾಭಾರತವನ್ನು ಬೆಳ್ಳಿತೆರೆಗೆ ತರಲು ಬಹಳಷ್ಟು ಮಂದಿ ಪ್ರಯತ್ನಿಸಿದ್ದಾರೆ. ಆದರೆ ಇದರಲ್ಲಿ ಯಶಸ್ಸು ಸಿಕ್ಕಿರುವುದು ವಿರಳ. ಇದಕ್ಕೆ ಕಾರಣ, ಇದೊಂದು ಸುದೀರ್ಘ‌ ಕಥೆಯಾಗಿರುವುದು. ಆದರೆ ಆಧುನಿಕ ಕಾಲಘಟ್ಟದಲ್ಲಿ ಭಾರಿ ಪ್ರಮಾಣದ ಹಣ ಹಾಕಿ, ಚಿತ್ರ ನಿರ್ಮಿಸಲು ಹೊರಟಿರುವುದು ಇದೇ ಮೊದಲ ಬಾರಿ ಎಂದು ಹೇಳಬಹುದು.

ಬಿ.ಆರ್‌. ಶೆಟ್ಟಿ ಅವರು, ಜಾಗತಿಕ ಮಟ್ಟದ ಪ್ರೇಕ್ಷಕರಿಗಾಗಿ ರಂಡಮೋಳಮ್‌ ಕಾದಂಬರಿಯ ಹೂರಣವನ್ನು ಗುರುತಿಸಿ ಚಿತ್ರ ಮಾಡುತ್ತಿರುವ ವಿಚಾರ ನನಗೆ ಖುಷಿ ತಂದಿದೆ.
– ಎಂ.ಟಿ. ವಾಸುದೇವನ್‌ ನಾಯರ್‌, ಜ್ಞಾನಪೀಠ ಪುರಸ್ಕೃತ ಸಾಹಿತಿ

ಅತ್ಯಂತ ಉತ್ಕೃಷ್ಟ ನಿರ್ಮಾಣ ಮತ್ತು ದೃಶ್ಯದ ಶ್ರೀಮಂತಿಕೆಯ ಜತೆಗೆ ನಿರೂಪಣೆಯಲ್ಲೂ ಮಾಂತ್ರಿಕತೆ ಸೃಷ್ಟಿಸಿ ಚಿತ್ರವನ್ನು ನಿರ್ಮಾಣ ಮಾಡುತ್ತೇವೆ.
– ಶ್ರೀಕುಮಾರ್‌ ಮೆನನ್‌, ನಿರ್ದೇಶಕ

– ಕನ್ನಡ, ಮಲೆಯಾಳಂ, ಇಂಗ್ಲಿಷ್‌, ಹಿಂದಿ, ತಮಿಳು, ತೆಲಗು ಭಾಷೆಯಲ್ಲಿ ನಿರ್ಮಾಣ
– ಚಿತ್ರಕ್ಕೆ ಕನ್ನಡಿಗ ಬಿ.ಆರ್‌. ಶೆಟ್ಟಿ ಅವರಿಂದ ಹಣ ಹೂಡಿಕೆ
– ಮಲಯಾಳಂನ ಜ್ಞಾನಪೀಠ ಪುರಸ್ಕೃತ ಸಾಹಿತಿ ಎಂ.ಟಿ. ವಾಸುದೇವನ್‌ ಕಥೆ ಆಧರಿತ
– ವಿ.ಎ. ಶ್ರೀಕುಮಾರನ್‌ ನಿರ್ದೇಶನದಲ್ಲಿ ಮೂಡಿಬರಲಿದೆ ಸಿನಿಮಾ
– 2018ರ ಸೆಪ್ಟೆಂಬರ್‌ನಿಂದ ನಿರ್ಮಾಣ ಶುರು, 2020ಕ್ಕೆ ರಿಲೀಸ್‌
– ಎರಡು ಭಾಗಗಳಲ್ಲಿ ಬರಲಿದೆ ಅದ್ಧೂರಿ ಸಿನಿಮಾ
– ಮೊದಲನೇ ಭಾಗ ರಿಲೀಸ್‌ ಆದ 90 ದಿನಗಳಲ್ಲೇ 2ನೇ ಭಾಗವೂ ಬಿಡುಗಡೆ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.