ಜಮ್ಮು ಕಾಶ್ಮೀರದಲ್ಲಿ ಹಿಂಸೆಗೆ ಪಾಕಿಸ್ಥಾನದ ಪ್ರಚೋದನೆ, ಬೆಂಬಲ: ರಾಹುಲ್ ಗಾಂಧಿ


Team Udayavani, Aug 28, 2019, 9:37 AM IST

Rahul-Gandhi-1-726

ನವದೆಹಲಿ: ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷಾಧಿಕಾರ ರದ್ಧತಿ ಬಳಿಕ ಕಣಿವೆ ರಾಜ್ಯದ ಜನಸಾಮಾನ್ಯರ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ ಮತ್ತು ಅಲ್ಲಿ ಕಾನೂನಿನ ಬಲಪ್ರಯೋಗ ನಡೆಯುತ್ತಿದೆ ಎಂದು ಕೆಲವು ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ ಅವರು ಇಂದು ಕಾಶ್ಮೀರ ಹಿಂಸೆಯ ವಿಚಾರದಲ್ಲಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಬುಧವಾರ ಈ ಕುರಿತಾಗಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ‘ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸೆ ತಲೆದೋರಿದೆ. ಈ ಹಿಂಸೆಗೆ ಪಾಕಿಸ್ಥಾನದ ಪ್ರಚೋದನೆ ಮತ್ತು ನೇರ ಬೆಂಬಲವೇ ಕಾರಣ. ಪಾಕಿಸ್ಥಾನ ಭಯೋತ್ಪಾದನೆಯ ಮೂಲ ಪೋಷಕ ರಾಷ್ಟ್ರ ಎಂದು ಜಗತ್ತಿಗೇ ತಿಳಿದಿದೆ’ ಎಂದು ರಾಗಾ ತಮ್ಮ ಟ್ವೀಟ್ ನಲ್ಲಿ ಹೆಳಿಕೊಂಡಿದ್ದಾರೆ.


‘ನಾನು, ಕೇಂದ್ರ ಸರಕಾರದ ಹಲವು ನಿಲುವುಗಳನ್ನು ಒಪ್ಪುವುದಿಲ್ಲ ಆದರೆ ಕಾಶ್ಮೀರ ವಿಚಾರಕ್ಕೆ ಬಂದಾಗ, ಇದು ಸಂಪೂರ್ಣವಾಗಿ ಭಾರತದ ಆಂತರಿಕ ವಿಚಾರ ಮತ್ತು ಇದರಲ್ಲಿ ತಲೆ ಹಾಕಲು ಪಾಕಿಸ್ಥಾನಕ್ಕಾಗಲೀ ಅಥವಾ ವಿಶ್ವದ ಇನ್ಯಾವುದೇ ರಾಷ್ಟ್ರಕ್ಕಾಗಲಿ ಅವಕಾಶವೇ ಇಲ್ಲ ಎಂಬುದನ್ನು ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ’ ಎಂದು ರಾಹುಲ್ ಗಾಂಧಿ ಅವರು ಇನ್ನೊಂದು ಟ್ವೀಟ್ ನಲ್ಲಿ ಹೇಳಿಕೊಂಡಿದ್ದಾರೆ.


ಜಮ್ಮು ಕಾಶ್ಮೀರದಲ್ಲಿ ಭಾರೀ ಸೇನಾ ಪಡೆಗಳ ಜಮಾವಣೆ ಅಲ್ಲಿನ ನಾಗರಿಕರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಮತ್ತು 370ನೇ ವಿಧಿ ರದ್ಧತಿಯ ಬಳಿಕ ಕಣಿವೆ ರಾಜ್ಯದಲ್ಲಿ ಕಾನೂನ್ ರಾಜ್ ನಡೆಯುತ್ತಿದೆ ಎಂದು ರಾಹುಲ್ ಗಾಂಧಿ ಅವರು ಕೇಂದ್ರ ಸರಕಾರದ ಮೇಲೆ ಹರಿಹಾಯ್ದಿದ್ದರು. ಮತ್ತು ಅವರ ನೇತೃತ್ವದಲ್ಲಿ ಕಾಶ್ಮೀರ ಪರಿಸ್ಥಿತಿಯನ್ನು ಅವಲೋಕಿಸಲು ತೆರಳಿದ್ದ ವಿಪಕ್ಷ ನಾಯಕರ ನಿಯೋಗವನ್ನು ಇತ್ತೀಚೆಗಷ್ಟೇ ಶ್ರೀನಗರ ವಿಮಾನ ನಿಲ್ದಾಣದಲ್ಲೇ ತಡೆಹಿಡಿಯಲಾಗಿತ್ತು.

ಟಾಪ್ ನ್ಯೂಸ್

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.