ಭವ್ಯ ಶ್ರೀರಾಮ ದೇಗುಲ; ಸೋಮನಾಥ ದೇಗುಲ ಶಿಲ್ಪಿಗಳಿಗೆ ಮಂದಿರ ವಿನ್ಯಾಸ ಹೊಣೆ

ರಾಮಮಂದಿರ ಚಳವಳಿ ಕಾಲದ ವಿನ್ಯಾಸಕ್ಕೆ ಅಲ್ಪಸ್ವಲ್ಪ ಬದಲಾವಣೆ

Team Udayavani, Jul 27, 2020, 8:15 AM IST

ಭವ್ಯ ಶ್ರೀರಾಮ ದೇಗುಲ; ಸೋಮನಾಥ ದೇಗುಲ ಶಿಲ್ಪಿಗಳಿಗೆ ಮಂದಿರ ವಿನ್ಯಾಸ ಹೊಣೆ

ಹೊಸದಿಲ್ಲಿ: ಜಗತ್ಪ್ರಸಿದ್ಧ ಸೋಮನಾಥ ದೇಗುಲದ ವಿನ್ಯಾಸವನ್ನು ಅಜ್ಜ ರೂಪಿಸಿಕೊಟ್ಟಿದ್ದರೆ, ಅಯೋಧ್ಯೆ ರಾಮಮಂದಿರ ವಿನ್ಯಾಸದ ಜವಾಬ್ದಾರಿ ಈಗ ಮೊಮ್ಮಗನ ಹೆಗಲೇರಿದೆ! ಜಗತ್ಪ್ರಸಿದ್ಧ ಸೋಮನಾಥ ದೇಗುಲದ ವಿನ್ಯಾಸವನ್ನು ಪ್ರಭುಶಂಕರ್‌ ಸೋಮಪುರ ಮಾಡಿದ್ದರು. ಈಗ ಇವರ ಮೊಮ್ಮಗ ಚಂದ್ರಕಾಂತ್‌ ಸೋಮಪುರ ಅಯೋಧ್ಯೆಯ ಭವ್ಯ ರಾಮ ಮಂದಿರ ವಿನ್ಯಾಸದ ಜವಾಬ್ದಾರಿ ಪಡೆದಿದ್ದಾರೆ. ಇವರ ಕುಟುಂಬ 200ಕ್ಕೂ ಹೆಚ್ಚು ದೇಗುಲಗಳ ವಿನ್ಯಾಸ ಮಾಡಿಕೊಟ್ಟಿದೆ.  ರಾಮಮಂದಿರ ಚಳವಳಿ ಚುರುಕಾಗಿದ್ದಾಗಲೇ ಇವರ ಸೋಮ ಪುರಾಸ್‌ ಕಂಪೆನಿ ದೇಗುಲದ ರೂಪು ರೇಷೆ ವಿನ್ಯಾಸಗೊಳಿ ಸಿತ್ತು. ಈಗ ಆ ವಿನ್ಯಾಸವನ್ನು ಕೊಂಚ ಬದಲಿಸಲಾಗಿದೆ.

ಏನು ಬದಲಾವಣೆ?
ಹೊಸ ನೀಲನಕ್ಷೆಗೆ ಶ್ರೀರಾಮ ತೀರ್ಥಕ್ಷೇತ್ರ ಟ್ರಸ್ಟ್‌ ನಿಂದ ಜು. 18ರಂದು ಒಪ್ಪಿಗೆ ಸಿಕ್ಕಿದೆ. ಇದರಲ್ಲಿ ದೇಗುಲಕ್ಕೆ 3 ಹೊಸ ಗುಮ್ಮಟಗಳನ್ನು ಸೇರಿಸಲಾಗಿದೆ. ಆಧಾರಸ್ತಂಭಗಳ ಎತ್ತರವನ್ನು 160 ಅಡಿಗಳಿಂದ 366 ಅಡಿಗಳ ವರೆಗೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಮೆಟ್ಟಿಲುಗಳ ಅಳತೆಯನ್ನು 6 ಅಡಿಗಳಿಂದ 16 ಅಡಿಗಳಿಗೆ ಹೆಚ್ಚಿಸಲಾಗಿದೆ. ದೇಗುಲದ ಎತ್ತರವನ್ನೂ 141 ಅಡಿಗಳಿಂದ 161 ಅಡಿಗಳಿಗೆ ಏರಿಸಲಾಗಿದೆ.

ಮತ್ತಷ್ಟು ದೇಗುಲ ಸೇರ್ಪಡೆ
ಮಂದಿರ ಸಮುಚ್ಚಯದಲ್ಲಿ ಶ್ರೀರಾಮ ದೇಗುಲ ಮಾತ್ರವಲ್ಲದೆ, ಸೀತಾಮಾತೆ, ಲಕ್ಷ್ಮಣ, ಗಣೇಶ ಮತ್ತು ಹನುಮಾನ್‌ ದೇವಸ್ಥಾನ ಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ಜತೆಗೆ ಇನ್ನಿತರ ಆಯ್ದ ದೇವರುಗಳ ಸಣ್ಣ ಗುಡಿಗಳು ಇರುತ್ತವೆ. ಶ್ರೀರಾಮ ದೇಗುಲದ ಗರ್ಭಗುಡಿಯ ಮೇಲ್ಛಾವಣಿಯು ಶಾಸ್ತ್ರಸಮ್ಮತವಾಗಿ ಅಷ್ಟಭುಜಾ ಕೃತಿ ಯಲ್ಲಿರಲಿದೆ.

ಮೂರೂವರೆ ವರ್ಷಗಳಲ್ಲಿ ನಿರ್ಮಾಣ
ಮುಂದಿನ ಮೂರೂವರೆ ವರ್ಷಗಳಲ್ಲಿ ದೇಗುಲ ನಿರ್ಮಾಣ ಪೂರ್ಣಗೊಳ್ಳಲಿದೆ ಎನ್ನಲಾಗಿದ್ದರೂ ಲಾಕ್‌ಡೌನ್‌, ನಿರ್ಬಂಧಗಳಿಂದ ಅವಧಿ ಇನ್ನೂ ಆರೇಳು ತಿಂಗಳು ವಿಸ್ತರಿಸಬಹುದು ಎನ್ನಲಾಗಿದೆ. ಮಂದಿರ ನಿರ್ಮಾಣವನ್ನು ಹಿಂದೆ 3 ಕಂಪೆನಿಗಳಿಗೆ ವಹಿಸಲಾಗಿತ್ತಾದರೂ ಈಗ ಪೂರ್ಣ ಜವಾಬ್ದಾರಿಯನ್ನು ಲಾರ್ಸನ್‌ ಆ್ಯಂಡ್‌ ಬ್ರೊ (ಎಲ್‌ಆ್ಯಂಡ್‌ಟಿ)ಗೆ ನೀಡಲಾಗಿದೆ.

ಯಾರಿದು ಸೋಮಪುರಾಸ್‌?
“ಸೋಮಪುರಾಸ್‌’ ದೇಗುಲ ವಾಸ್ತುಶಿಲ್ಪ ದಲ್ಲಿ ದೇಶದಲ್ಲೇ ಪ್ರಖ್ಯಾತ. ಇದೊಂದು ಕೌಟುಂಬಿಕ ಸಂಸ್ಥೆ. ದೇಗುಲ ವಾಸ್ತುಶಿಲ್ಪ ಈ ಕುಟುಂಬಕ್ಕೆ ವಂಶಪಾರಂಪರ್ಯ. ಈ ವರೆಗೆ 200ಕ್ಕೂ ಹೆಚ್ಚು ದೇಗುಲಗಳ ವಿನ್ಯಾಸ ಮಾಡಿ ಕೊಟ್ಟ ಹೆಗ್ಗಳಿಕೆ ಇವರದ್ದು. ರಾಮಮಂದಿರ ನಿರ್ಮಾಣ ಪರಿಕಲ್ಪನೆ ಮೊಳೆತಾಗಲೇ ವಿಹಿಂಪವು ಸೋಮಪುರಾಸ್‌ಗೆ ನೀಲನಕ್ಷೆಯ ಜವಾಬ್ದಾರಿ ನೀಡಿತ್ತು. ಕುಟುಂಬದ ಮುಖ್ಯಸ್ಥ ಚಂದ್ರ ಕಾಂತ್‌ ಸೋಮಪುರ ತಮ್ಮ ಹಿರಿಯ ರಿಂದ ವಾಸ್ತುಶಿಲ್ಪ ಜ್ಞಾನವನ್ನು ಪಡೆದವರು. ಅವರ ಪುತ್ರರೂ ಇದರಲ್ಲಿ ಸಿದ್ಧಹಸ್ತರು. ಗುಜರಾತ್‌ನ ಸೋಮನಾಥಪುರ ದೇಗುಲದ ವಾಸ್ತು ವಿನ್ಯಾಸವನ್ನು ಚಂದ್ರಕಾಂತ್‌ ಸೋಮಪುರ ಅವರ ತಾತ ಪ್ರಭಾಶಂಕರ್‌ ಸೋಮಪುರ ರೂಪಿಸಿದ್ದರು. ಈಗ ರಾಮಮಂದಿರಕ್ಕೆ ಚಂದ್ರಕಾಂತ್‌ ಮತ್ತು ಮಕ್ಕಳಾದ ನಿಖೀಲ್‌, ಆಶಿಶ್‌ ವಿನ್ಯಾಸ ರೂಪಿಸಿದ್ದಾರೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.