ಪವಾಡ ಅಸಾಧ್ಯ: ಸುಪ್ರೀಂಗೆ ಕೇಂದ್ರ
Team Udayavani, Aug 10, 2017, 8:40 AM IST
ಹೊಸದಿಲ್ಲಿ: “ನ್ಯಾಯಮೂರ್ತಿಗಳು ಸರಕಾರ ನಡೆಸಬಾರದು ಮತ್ತು ಪವಾಡಗಳನ್ನು ಮಾಡುವಂತೆ ಸೂಚಿಸಬಾರದು.’
ಹೀಗೆಂದು ಸುಪ್ರೀಂ ಕೋರ್ಟ್ಗೆ ಹೇಳಿದ್ದು ಬೇರಾರೂ ಅಲ್ಲ, ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್. ಬರಪೀಡಿತ ರಾಜ್ಯಗಳಲ್ಲಿ ಪರಿಹಾರ ಕ್ರಮಕ್ಕೆ ಆಗ್ರಹಿಸಿ ಸ್ವರಾಜ್ ಅಭಿಯಾನ್ ಎನ್ಜಿಒ ಸಲ್ಲಿಸಿದ್ದ ಹೊಸ ಅರ್ಜಿಯನ್ನು ವಿರೋಧಿಸುತ್ತಾ ವೇಣುಗೋಪಾಲ್ ಈ ಮಾತುಗಳನ್ನಾಡಿದ್ದಾರೆ.
ಎಲ್ಲ ರಾಜ್ಯಗಳಲ್ಲೂ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ರಾಜ್ಯ ಆಹಾರ ಆಯೋಗಗಳನ್ನು ರಚಿಸುವಂತೆ ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ನ ನ್ಯಾಯಪೀಠ ಸೂಚಿಸಿತು. ಈ ವೇಳೆ, ನ್ಯಾ| ಪ್ರಶಾಂತ್ ಭೂಷಣ್ ಅವರು ಪ್ರತಿನಿಧಿಸುತ್ತಿರುವ ಎನ್ಜಿಒ ವಿರುದ್ಧ ಹರಿಹಾಯ್ದ ವೇಣುಗೋಪಾಲ್, “ಪ್ರತಿ ಬಾರಿ ಹೊಸ ಅರ್ಜಿ ಸಲ್ಲಿಸಲಾಗುತ್ತಿದೆ. ನಾವು ಕೈಗೊಂಡ ಕ್ರಮಗಳನ್ನು ವಿವರಿಸಿ ಅಫಿದವಿತ್ ಸಲ್ಲಿಸಿದ್ದೇವೆ. ಎಲ್ಲದಕ್ಕೂ ಮಿತಿಯಿದೆ. ನ್ಯಾಯಮೂರ್ತಿಗಳೇ ಸರಕಾರ ನಡೆಸುವಂತಾಗಬಾರದು. ನಾವೇನೂ ಪವಾಡ ಮಾಡಲು ಆಗುವುದಿಲ್ಲ’ ಎಂದರು.
ಇದೇ ವೇಳೆ, ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಈಗಾಗಲೇ ಆಹಾರ ಆಯೋಗ ರಚಿಸಿರುವುದಾಗಿ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ