ತಾಯಿ ಹೃದಯದ ಸುಷ್ಮಾರ ಬದ್ಧತೆ ನಮಗೆ ಸ್ಫೂರ್ತಿ
Team Udayavani, Aug 7, 2019, 5:55 AM IST
ಎಬಿವಿಪಿಯ ಅಚ್ಚುಕಟ್ಟಾದ ಕಾರ್ಯ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಬೆನ್ನು ತಟ್ಟಿ ಪ್ರೋತ್ಸಾಹಿಸುತ್ತಿದ್ದ ತಾಯಿ ಹೃದಯದ ಸುಷ್ಮಾ ಸ್ವರಾಜ್ ಅವರು ನಮ್ಮೊಂದಿಗಿಲ್ಲ ಎಂಬುದನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಾಗುತ್ತಿಲ್ಲ.
ಅದು 1999ರ ಲೋಕಸಭಾ ಚುನಾವಣೆ ಸಂದರ್ಭ. ಬಳ್ಳಾರಿ ಕ್ಷೇತ್ರದಿಂದ ಸುಷ್ಮಾ ಸ್ವರಾಜ್ ಅವರು ಸ್ಪರ್ಧಿಸಿದ್ದಾಗ ನಾನು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಉಸ್ತುವಾರಿಯಾಗಿದ್ದೆ. ಆಗ ಕೆಲವು ದಿನ ಅವರೊಂದಿಗೆ ಕಾರ್ಯ ನಿರ್ವಹಿಸುವ ಅವಕಾಶ ಸಿಕ್ಕಿತ್ತು. ಅದ್ಭುತ ವಾಗ್ಮಿ, ಭಾಷಣಕಾರರಾಗಿದ್ದ ಅವರು ಕನ್ನಡದಲ್ಲಿ ಭಾಷಣ ಮಾಡುವಷ್ಟರ ಮಟ್ಟಿಗೆ ಕನ್ನಡ ಪ್ರೇಮ ತೋರಿದ್ದರು.
ನಾವು ನಿಗದಿಪಡಿಸುವ ಕಾರ್ಯಕ್ರಮಕ್ಕೆ ಸಕಾಲಕ್ಕೆ ಬರುತ್ತಿದ್ದರು. ರಾತ್ರಿ ಹೊತ್ತು ಪ್ರಚಾರ ಎಷ್ಟೇ ತಡವಾದರೂ ಮರುದಿನ ಸಕಾಲಕ್ಕೆ ಪ್ರಚಾರ ಸಭೆಗೆ ಆಗಮಿಸುತ್ತಿದ್ದ ಅವರ ಸಮಯ ಪಾಲನೆ, ಬದ್ಧತೆ ನಮಗೆ ಸ್ಫೂರ್ತಿಯಾಗಿತ್ತು.
ಎಬಿವಿಪಿಯ ಅಚ್ಚುಕಟ್ಟಾದ ವ್ಯವಸ್ಥೆ, ಯೋಜಿತ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವಾಗ ಬಹಳ ಸಂಭ್ರಮಪಟ್ಟಿದ್ದೆವು. ನಮ್ಮ ಭುಜ ತಟ್ಟಿ ಪ್ರೋತ್ಸಾಹಿಸಿದ ಪರಿ ಸದಾ ಸ್ಮರಣೀಯ. ಒಮ್ಮೆ ಮಾಜಿ ಸಚಿವ ಎಂ.ಪಿ.ಪ್ರಕಾಶ್ ಅವರ ಮನೆಗೆ ಸುಷ್ಮಾ ಸ್ವರಾಜ್ ಅವರು ಭೇಟಿ ನೀಡಿದ್ದರು. ಆಗ ಅವರೊಂದಿಗೆ ಒಟ್ಟಿಗೆ ಊಟ ಮಾಡಿದ್ದ ನೆನಪು ಸದಾ ಸ್ಮರಣೀಯ.
ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡರೂ ಬಳ್ಳಾರಿಯೊಂದಿಗಿನ ಒಡನಾಟವನ್ನು ಅವರು ಬಿಟ್ಟಿರಲಿಲ್ಲ. ನಿರಂತರವಾಗಿ ಬಳ್ಳಾರಿ ಸಂಪರ್ಕವಿಟ್ಟುಕೊಳ್ಳುವ ಮೂಲಕ ನಂಟು ಉಳಿಸಿಕೊಂಡಿದ್ದರು. ವಿದೇಶಾಂಗ ಸಚಿವರಾಗಿದ್ದಾಗ ವಿದೇಶಗಳಲ್ಲಿ ಭಾರತೀಯರು ಯಾವುದೇ ರೀತಿ ತೊಂದರೆ, ಸಂಕಷ್ಟ, ಅನಾಹುತಗಳಲ್ಲಿ ಸಿಲುಕಿದರೆ ತ್ವರಿತವಾಗಿ ಸ್ಪಂದಿಸುತ್ತಿದ್ದರು. ಬಿಜೆಪಿ ರಾಷ್ಟ್ರೀಯ ಹಿರಿಯ ನಾಯಕರಲ್ಲಿ ಪ್ರಮುಖರಾಗಿದ್ದ ಸುಷ್ಮಾ ಸ್ವರಾಜ್ ಅವರು ವಿಧಿವಶರಾಗಿರುವುದು ತೀವ್ರ ನೋವು ತಂದಿದೆ.
● ಎನ್. ರವಿಕುಮಾರ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’