ಹೊಸ ಡಿಎಲ್‌ ನವೀಕರಣಕ್ಕೆ ಆಧಾರ್‌ ಕಡ್ಡಾಯ


Team Udayavani, Mar 27, 2017, 3:45 AM IST

aaDHAR.jpg

ನವದೆಹಲಿ: ಮೊಬೈಲ್‌ ಸಿಮ್‌, ಪದವಿ ತರಗತಿ ಅಂಕಪಟ್ಟಿ ಸೇರಿದಂತೆ ಒಂದೊಂದೇ ಸೌಲಭ್ಯ ಪಡೆದುಕೊಳ್ಳಲು ಕೇಂದ್ರ ಸರ್ಕಾರ ಆಧಾರ್‌ ಅನ್ನು ಕಡ್ಡಾಯಗೊಳಿಸುತ್ತಿದೆ. ಇನ್ನು ಮುಂದೆ ಹೊಸತಾಗಿ ಡ್ರೈವಿಂಗ್‌ ಲೈಸನ್ಸ್‌ ಪಡೆಯಲು ಮತ್ತು ನವೀಕರಣಕ್ಕೆ ಆಧಾರ್‌ ಸಂಖ್ಯೆ ಬೇಕಾಗುತ್ತದೆ. ಒಬ್ಬರ ಹೆಸರಿನಲ್ಲಿಯೇ ಹಲವು ಡ್ರೈವಿಂಗ್‌ ಲೈಸನ್ಸ್‌ಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಗಳಿಗೆ ಚಾಲನಾ ಪರವಾನಗಿ ಪಡೆಯುವುದಕ್ಕೆ ಆಧಾರ್‌ ಕಡ್ಡಾಯ ಮಾಡುವ ಬಗ್ಗೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಸೂಚನೆ ರವಾನಿಸಲಿದೆ. ಈ ವರ್ಷದ ಅಕ್ಟೋಬರ್‌ನಿಂದ ಹೊಸ ನಿಯಮ ಜಾರಿಗೆ ಬರಲಿದೆ.

ಪದೇ ಪದೆ ಸಂಚಾರ ನಿಯಮಗಳನ್ನು ಉಲ್ಲಂ ಸಿದಾಗ, ಸಂಚಾರ ಅಪರಾಧಗಳು ನಡೆದಾಗ ಅಥವಾ ನಕಲಿ ಗುರುತಿನ ಪತ್ರ ಹೊಂದಿದ್ದಾಗ ಚಾಲನಾ ಪರವಾನಗಿ ರದ್ದು ಮಾಡಲಾಗುತ್ತದೆ. ಈ ವೇಳೆ ಬಹುತೇಕರು ಮತ್ತೂಮ್ಮೆ ಡಿಎಲ್‌ ಮಾಡಿಸಿಕೊಳ್ಳುತ್ತಾರೆ. ಇಂತಹ ಪ್ರಕರಣಗಳನ್ನು ಪತ್ತೆ ಮಾಡಲು ಆಧಾರ್‌ ಸಂಖ್ಯೆ ಹಾಗೂ ಬಯೋಮೆಟ್ರಿಕ್‌ ವಿವರಗಳು ನೆರವಾಗಲಿದೆ.  

ಅರ್ಜಿದಾರರ ಹೆಸರಿನಲ್ಲಿ ದೇಶದ ಯಾವುದೇ ಭಾಗದಲ್ಲಿ ಈಗಾಗಲೇ ಡಿಎಲ್‌ ವಿತರಿಸಲಾಗಿದೆಯೇ ಎಂಬುವನ್ನು ಪರಿಶೀಲಿಸಲು ಅನುಕೂಲವಾಗುವಂತೆ ದೇಶದ ಎಲ್ಲ ಆರ್‌ಟಿಒಗಳಿಗೆ ಡಿಎಲ್‌ಗ‌ಳ ಕೇಂದ್ರ ದತ್ತಾಂಶಕ್ಕೆ (ಸೆಂಟ್ರಲ್‌ ಡಾಟಾಬೇಸ್‌- ಸಾರಥಿ) ಪ್ರವೇಶಾನುಮತಿ ನೀಡಲಾಗುತ್ತದೆ.

ಹಜ್‌ ಆಯ್ಕೆಗೆ ಆಧಾರ್‌ ಜೋಡಣೆಗೆ ಯುಪಿ ಸರ್ಕಾರದ ಚಿಂತನೆ  
ಲಕ್ನೋ
: ಹಜ್‌ ಯಾತ್ರೆಗೆ ಫ‌ಲಾನುಭವಿಗಳನ್ನು ಆಯ್ಕೆ ಮಾಡುವ ಕೆಲಸದಲ್ಲಿ ಮತ್ತಷ್ಟು ಪಾರದರ್ಶಕತೆ ತರಲು ಮುಂದಾಗಿರುವ ಉತ್ತರ ಪ್ರದೇಶ ಸರ್ಕಾರ  ಹೊಸದಾಗಿ ಆಧಾರ್‌ ಜೋಡಣೆ ಮಾಡಲು ಅಲೋಚನೆ ಮಾಡುತ್ತಿದೆ. 

ಇದಕ್ಕಾಗಿ ಈಗಾಗಲೇ ಒಂದಕ್ಕಿಂತ ಹೆಚ್ಚು ಭಾರಿ ಹಜ್‌ಯಾತ್ರೆ ಯಾರು ಕೈಗೊಂಡಿದ್ದಾರೆ ಎಂಬುದನ್ನು ಪತ್ತೆ ಮಾಡುವ ಕೆಲಸಕ್ಕೆ ಅಧಿಕಾರಿಗಳು ಕೈ ಹಾಕಿದ್ದಾರೆ.

ಅರ್ಜಿಯ ಜೊತೆಯಲ್ಲೇ ಆಧಾರ್‌ ನಂಬರ್‌ ಜೋಡಿಸಲು ಅಧಿಕಾರಿಗಳು ಮುಂದಾಗಿದ್ದು ಇದರಿಂದ ಅವರು ಈ ಹಿಂದೆ ಯಾತ್ರೆ ಮಾಡಿದ್ದರೆ ಇಲ್ಲವೆ ಎಂಬುದನ್ನು ಪತ್ತೆಮಾಡಲು ಸಹಕಾರಿಯಾಗಲಿದೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಖಾತೆ ಸಚಿವ ಮೊಹ್ಸಿನ್‌ ರಾಜಾ ತಿಳಿಸಿದ್ದಾರೆ. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.