ಡೋಂಗ್ರಿಯಲ್ಲಿ ಕುಸಿದ ಕಟ್ಟಡ ಶತಮಾನಗಳಷ್ಟು ಹಳೆಯದು

ಮುಂಬಯಿಗೆ ಇದು 6 ವರ್ಷದಲ್ಲಿ 5ನೇ ಕಟ್ಟಡ ದುರಂತ

Team Udayavani, Jul 16, 2019, 7:54 PM IST

Dongri

ಮಣಿಪಾಲ: ದಕ್ಷಿಣ ಮುಂಬಯಿ ಡೋಂಗ್ರಿಯಲ್ಲಿ ಮಂಗಳವಾರ ಬೆಳಗ್ಗೆ ಶತಮಾನದ ಬಹುಮಡಿಯ ಕಟ್ಟಡ ಕುಸಿದಿದೆ. ಈ ದುರ್ಘಟನೆಯಲ್ಲಿ ಇದುವರೆಗೆ ನಾಲ್ಕು ಜನರು ಸಾವನ್ನಪ್ಪಿದ್ದು, ಸುಮಾರು 40 ಮಂದಿ ಇನ್ನೂ ಕಟ್ಟಡದಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸಾವು ನೋವಿನ ಕುರಿತಾದ ಸ್ಪಷ್ಟ ಮಾಹಿತಿ ರಕ್ಷಣಾ ಕಾರ್ಯ ಪೂರ್ಣಗೊಂಡ ಬಳಿಕವಷ್ಟೇ ಲಭಿಸಲಿದೆ.

ಡೋಂಗ್ರಿ ಪ್ರದೇಶದಲ್ಲಿ ಕುಸಿದ ಕೇಸರ್ ಭಾಯ್ ಕಟ್ಟಡವು ಶತಮಾನಗಳ ಹಿಂದೆ ನಿರ್ಮಾಣಗೊಂಡಿದ್ದು ಎಂಬ ಮಾಹಿತಿ ಲಭ್ಯವಾಗಿದೆ. ಮಾತ್ರವಲ್ಲದೇ ಈ ಕಟ್ಟಡವನ್ನು ಆದಷ್ಟು ಶೀಘ್ರದಲ್ಲಿ ಕೆಡವಬೇಕೆಂದು ಬೃಹನ್ಮುಂಬಯಿ ಮಹಾನಗರ ಪಾಲಿಕೆ 2017ರಲ್ಲೇ ನೋಟೀಸು ನೀಡಿತ್ತು ಎಂದೂ ತಿಳಿದುಬಂದಿದೆ.

31.07.2017ರ ಆಡಿಟ್ ವರದಿಯ ಪ್ರಕಾರ ಈ ಕಟ್ಟಡವು ಸಿ1 ಪಟ್ಟಿಯಡಿಯಲ್ಲಿ ನಮೂದಾಗಿತ್ತು. ಮತ್ತು ಇದರ ಪ್ರಕಾರ ಈ ಕಟ್ಟಡವನ್ನು ಆದಷ್ಟು ಶೀಘ್ರದಲ್ಲೇ ನೆಲಸಮಗೊಳಿಸಬೇಕಾಗಿತ್ತು. ಆದರೆ ಎಲ್ಲಾ ನಿಯಮ ಸೂಚನೆಗಳನ್ನು ಗಾಳಿಗೆ ತೂರಿದ್ದರಿಂದಲೇ ಈ ದುರಂತ ಸಂಭವಿಸಿದೆ ಎಂಬ ಅಭಿಪ್ರಾಯ ಇದೀಗ ಕೇಳಿಬರಲಾರಂಭಿಸಿದೆ.

ಇತ್ತೀಚಿನ ವರ್ಷಗಳಲ್ಲಿ ನಗರಗಳಲ್ಲಿ ಕಟ್ಟಡ ಕುಸಿತದ ಪ್ರಕರಣ ಹೆಚ್ಚಾಗಿವೆ. ನಗರಗಳಲ್ಲಿ ಅನಧಿಕೃತ ಕಟ್ಟಡಗಳು ತಲೆ ಎತ್ತುತ್ತಿದ್ದು, ಸರಕಾರದ ನೀತಿ ನಿಯಮಗಳನ್ನು ಉಲ್ಲಂಘಿಸಿ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂಬ ಕೂಗು ಈ ಕಟ್ಟಡ ದುರಂತದ ಬಳಿಕ ಕೇಳಿ ಬರುತ್ತಿದೆ. ಇನ್ನು ಮುಂಬಯಿ ನಗರಕ್ಕೆ ಕಳೆದ ಆರು ವರ್ಷಗಳಲ್ಲಿ ಇದು ಐದನೇ ಕಟ್ಟಡ ದುರಂತ ಪ್ರಕರಣವಾಗಿದೆ.

ಮುಂಬಯಿನ ಈ ಹಿಂದಿನ ಘಟನೆಗಳು
ಥಾಣೆ: 2013
2013ರ ಎಪ್ರಿಲ್ 4ರಂದು ಥಾಣೆಯಲ್ಲಿ ಇಂತಹದ್ದೇ ಘಟನೆಯೊಂದು ನಡೆದಿತ್ತು. ಇದರಲ್ಲಿ 18 ಮಕ್ಕಳು ಸೇರಿದಂತೆ 74 ಜನರ ಸಾವು ಸಂಭವಿಸಿತ್ತು. 60 ಜನ ಪವಾಡ ಸದೃಶ್ಯರಾಗಿ ಬದುಕುಳಿದಿದ್ದರು.

2 ತಿಂಗಳಲ್ಲಿ ಕಟ್ಟಡ 7 ಮಹಡಿಯನ್ನು ಏರಿಸಿತ್ತು, ಬಳಿಕ 8 ನೇ ಮಹಡಿಯ ನಿರ್ಮಾಣ ಕಾರ್ಯ ನಡೆಯುವ ಸಂದರ್ಭರ್ದಲ್ಲಿ ಕಟ್ಟಡ ನೆಲಕ್ಕೆ ಉರುಳಿತ್ತು.

ದಕ್ಷಿಣ ಮುಂಬಯಿ 2017
2017 ಸೆಪ್ಟೆಂಬರ್‌ ನಲ್ಲಿ ದಕ್ಷಿಣ ಮುಂಬಯಿಯಲ್ಲಿ 5 ಮಹಡಿಯ ಕಟ್ಟಡವೊಂದು ಕುಸಿದ ಪರಿಣಾಮ 33 ಮಂದಿಯ ಸಾವನ್ನಪ್ಪಿದ್ದರೆ 20 ಜನರು ಗಾಯಗೊಂಡಿದ್ದಾರೆ. ಈ ಕಟ್ಟಡ 117 ವರ್ಷ ಹಳೆಯದಾಗಿದ್ದು, ಬಕ್ರೀದ್ ಹಬ್ಬದ ಸಂದರ್ಭ ಈ ಘಟನೆ ನಡೆದಿತ್ತು.

ಮುಂಬಯಿನ ಮಜಗಾವ್ 2017
ಸೆಪ್ಟೆಂಬರ್ 27ರಂದು ಮುಂಬಯಿನ ಮಜಗಾವ್‌ ನಲ್ಲಿ ಮರು ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದು ಕುಸಿದ ಪರಿಣಾಮ 61 ಜನರು ಸಾವನ್ನಪ್ಪಿದ್ದರು. 32 ವರ್ಷ ಹಳೆಯ ಕಟ್ಟಡವನ್ನು ಮರು ವಿನ್ಯಾಸಗೊಳಿಸಲಾಗುತ್ತಿತ್ತು. ಈ ದುರ್ಘಟನೆಯಲ್ಲಿ 30 ಜನರು ಬದುಕುಳಿದಿದ್ದರು.

ಗೋರೆಗಾಂವ್ 2018
ಮುಂಬಯಿನ ಗೋರೆಗಾಂವ್‌ ನಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು 3 ಮಂದಿ ಸಾವನ್ನಪ್ಪಿದ್ದರು. ಘಟನೆಯಲ್ಲಿ 8 ಜನರು ಗಾಯಗೊಂಡಿದ್ದರು.

ರಾಜ್ಯ ಸರಕಾರ ಮತ್ತು ಸ್ಥಳೀಯಾಡಳಿತ ಇನ್ನಾದರೂ ಅಕ್ರಮ ಕಟ್ಟಡಗಳ ಮೇಲೆ ಹಾಗೂ ಶಿಥಿಲ ಕಟ್ಟಡಗಳನ್ನು ನೆಲಸಮಗೊಳಿಸುವ ಕುರಿತು ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.