ಜಲ ರಕ್ಷಣೆಗಿರಲಿ ಜನಬಲ: ದೇಶವಾಸಿಗಳಿಗೆ ಪ್ರಧಾನಿ ಮೋದಿ ಮನವಿ

25 ಸಾವಿರ ಸರೋವರಗಳ ನಿರ್ಮಾಣ

Team Udayavani, Jan 6, 2023, 12:39 AM IST

MODIಜಲ ರಕ್ಷಣೆಗಿರಲಿ ಜನಬಲ: ದೇಶವಾಸಿಗಳಿಗೆ ಪ್ರಧಾನಿ ಮೋದಿ ಮನವಿಜಲ ರಕ್ಷಣೆಗಿರಲಿ ಜನಬಲ: ದೇಶವಾಸಿಗಳಿಗೆ ಪ್ರಧಾನಿ ಮೋದಿ ಮನವಿ

ಹೊಸದಿಲ್ಲಿ: ನೀರಿನ ಸಂರಕ್ಷಣೆಯಲ್ಲಿ ಸರ್ಕಾರದ ಕ್ರಮವೊಂದೇ ಸಾಕಾಗುವುದಿಲ್ಲ, ನಾಗರಿಕರು ಸಕ್ರಿಯ ವಾಗಿ ಪಾಲ್ಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಅಭಿಪ್ರಾಯಪಟ್ಟಿದ್ದಾರೆ.

ಭೋಪಾಲದಲ್ಲಿ ಆಯೋಜನೆಯಾಗಿದ್ದ ರಾಜ್ಯಗಳ ಜಲಸಂಪನ್ಮೂಲ ಸಚಿವರ ಮೊದಲ ಸಭೆಯಲ್ಲಿ ಆನ್‌ಲೈನ್‌ ಮೂಲಕ ಉದ್ಘಾಟಿಸಿ ಮಾತನಾಡಿದರು. ಸಾರ್ವಜನಿಕರು ಕೂಡ ನೀರಿನ ಸಂರಕ್ಷಣೆಯ ಬಗ್ಗೆ ಹೊಣೆಯನ್ನು ಅರಿತುಕೊಂಡು ಭಾಗಿಯಾದಾಗ, ಯೋಜನೆಗಳು ಯಶಸ್ವಿಯಾಗಲು ಸಾಧ್ಯ ಎಂದರು.

“ನೀರು ಎನ್ನುವುದು ರಾಜ್ಯಗಳ ನಡುವೆ ಸಹಕಾರ (ಕೋ-ಆಪರೇಷನ್‌), ಸಹಯೋಗ (ಕೊಲಾಬೊ ರೇಷನ್‌), ಮತ್ತು ಸಮನ್ವಯ (ಕೊಆರ್ಡಿನೇಷನ್‌) ತತ್ವದ ಅಡಿ ಸಾಕಾರವಾಗಲು ಆದ್ಯತೆಯಾಗಬೇಕು. ಅತ್ಯಂತ ವೇಗವಾಗಿ ನಗರಗಳು ಬೆಳೆಯುತ್ತಿರುವುದ ರಿಂದ ದೂರದೃಷ್ಟಿಯಿಟ್ಟುಕೊಂಡು ಯೋಜನೆಗಳನ್ನು ರೂಪಿಸಬೇಕು. ನೀರಿನ ಸಂರಕ್ಷಣೆ ಸಾಂವಿಧಾನಿಕವಾಗಿ ರಾಜ್ಯಗಳ ಅಧೀನದಲ್ಲಿ ಬರುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದರು.

ದೇಶದ ಹಲವು ರಾಜ್ಯಗಳ ನಡುವೆ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಸುಪ್ರೀಂಕೋರ್ಟ್‌ ಮತ್ತು ನ್ಯಾಯಮಂಡಳಿಗಳಲ್ಲಿ ವ್ಯಾಜ್ಯಗಳ ವಿಚಾರಣೆ ವಿವಿಧ ಹಂತಗಳಲ್ಲಿ ಇರುವ ಸಂದರ್ಭದಲ್ಲಿಯೇ ನರೇಂದ್ರ ಮೋದಿಯವರ ಮಾತುಗಳು ಮಹತ್ವ ಪಡೆದಿವೆ.

75 ಅಮೃತ ಸರೋವರ: ನೀರಿನ ಸಂರಕ್ಷಣೆ ವಿಚಾರದಲ್ಲಿ ದೇಶವಾಸಿಗಳಿಗೆ ಮತ್ತಷ್ಟು ಅರಿವು ಮೂಡಿಸಬೇಕಾಗಿದೆ ಎಂದು ಪ್ರತಿಪಾದಿಸಿದ ಪ್ರಧಾನಿ, ಸ್ಥಳೀಯ ಮಟ್ಟದಲ್ಲಿ ನಡೆಯುವ ಜಾತ್ರೆ, ಉತ್ಸವಗಳ ಸಂದರ್ಭದಲ್ಲಿ ವಿಶೇಷ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಲು ಅವಕಾಶ ಉಂಟು ಎಂದರು. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಪೂರ್ಣ ಗೊಂಡ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿ “75 ಅಮೃತ ಸರೋವರ ನಿರ್ಮಾಣ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ 25 ಸಾವಿರ ಸರೋವರಗಳನ್ನು ನಿರ್ಮಿಸ ಲಾಗಿದೆ ಎಂದರು ಪ್ರಧಾನಿ. ಪ್ರತಿ ಜಿಲ್ಲೆಯಲ್ಲಿ ಇರುವ 75 ನೀರಿನ ಮೂಲಗಳನ್ನು ಅಭಿವೃದ್ಧಿಗಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ಕ್ಯಾಚ್‌ ದ ರೈನ್‌: ಮಳೆ ನೀರು ಹಿಡಿದಿಟ್ಟುಕೊಳ್ಳುವ ನಿಟ್ಟಿನಲ್ಲಿ ಶುರು ಮಾಡಲಾಗಿರುವ “ಕ್ಯಾಚ್‌ ದ ರೈನ್‌’ ಅಭಿಯಾನ ರಾಜ್ಯಗಳ ಅಗತ್ಯ ಯೋಜನೆಗಳ ಭಾಗವಾಗಿ ಇರಬೇಕು ಎಂದರು. ನಮ್ಮ ನದಿಗಳು, ನೀರಿನ ಮೂಲಗಳು ಜೀವನ ಭಾಗವೇ ಆಗಿದೆ ಎಂದರು ಪ್ರಧಾನಿ. ದೇಶದ ಪ್ರತಿ ನಿವಾಸಿಗಳ ಮನೆಗೆ ನಲ್ಲಿಯ ಮೂಲಕ ಶುದ್ಧ ಕುಡಿವ ನೀರು ಒದಗಿಸುವ “ಜಲ ಜೀವನ್‌ ಮಿಷನ್‌’ ಅತ್ಯಂತ ಯಶಸ್ವಿ ಯೋಜನೆಗಳಲ್ಲಿ ಒಂದಾಗಿದೆ ಎಂದರು ಮೋದಿ. ಈ ನಿಟ್ಟಿನಲ್ಲಿ ಪ್ರತಿ ಗ್ರಾ.ಪಂ. ಆನ್‌ಲೈನ್‌ ಮೂಲಕ ಸಾಧನೆಯ ವಿವರಗಳನ್ನು ಸಲ್ಲಿಸಬೇಕು ಎಂದರು.

ಮಹತ್ವದ್ದು: “2047ರ ಜಲನೋಟ’ ಬಹಳ ಮಹತ್ವದ್ದು. ಮುಂದಿನ 25 ವರ್ಷಗಳ ಅವಧಿಗೆ ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು. ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ನೀರಿಗೆ ಸಂಬಂಧಿಸಿದಂತೆ ಗರಿಷ್ಠ ಕೆಲಸಗಳನ್ನು ಮಾಡಬೇಕು. ಜನರೂ ಈ ಯೋಜನೆಗಳ ಬಗ್ಗೆ ಆಸ್ಥೆ ವಹಿಸಬೇಕು. ಜನರ ಹೊಣೆ ಜಾಸ್ತಿಯಾಗಿದೆ ಎಂದರೆ ಸರ್ಕಾರದ ಹೊಣೆ ಕಡಿಮೆಯಾಗುತ್ತದೆ ಎಂದಲ್ಲ ಎಂದೂ ಮೋದಿ ಹೇಳಿದ್ದಾರೆ.

“ನಮಾಮಿ ಗಂಗೆ’ ಮಾದರಿ ಯೋಜನೆ
ಗಂಗಾ ನದಿಯನ್ನು ಶುದ್ಧೀಕರಿಸುವ ಯೋಜನೆ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಅದನ್ನು ಆಧಾರವಾಗಿ ಇರಿಸಿಕೊಂಡು ವಿವಿಧ ರಾಜ್ಯಗಳಲ್ಲಿ ಕಲುಷಿತಗೊಂಡಿರುವ ನದಿಗಳನ್ನು ಶುದ್ಧೀಕರಿಸಿ, ಅವುಗಳನ್ನು ಸಂರಕ್ಷಿಸುವ ಬಗ್ಗೆ ಕ್ರಮ ಕೈಗೊಳ್ಳಲು ಅವಕಾಶ ಇದೆ ಎಂದರು. ಅದು ಪ್ರತಿ ರಾಜ್ಯದ ಹೊಣೆಯೂ ಹೌದು ಎಂದು ಪ್ರತಿಪಾದಿಸಿದರು.

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.