Water Crisis; ಕರ್ನಾಟಕ ಸೇರಿ ದಕ್ಷಿಣ ಭಾರತದ ಜಲಾಶಯಗಳು ಖಾಲಿ.. ಖಾಲಿ!


Team Udayavani, Mar 30, 2024, 10:09 AM IST

The reservoirs of South India including Karnataka are empty

ಹೊಸದಿಲ್ಲಿ: ಕಳೆದ ವರ್ಷಕ್ಕೆ ಹೋಲಿಸಿದರೆ ಕರ್ನಾಟಕದ ಜಲಾಶಯಗಳ ನೀರು ಸಂಗ್ರಹವು ಕೊರತೆಯನ್ನು ಎದುರಿಸುತ್ತಿದೆ ಎಂದು ಕೇಂದ್ರ ಜಲ ಆಯೋಗದ ಬುಲೆಟಿನ್‌ ಹೇಳಿದೆ. ಕಳೆದ 10 ವರ್ಷಗಳ ಸರಾಸರಿಯಲ್ಲೂ ಇದು ಅತೀ ಹೆಚ್ಚು ಕೊರತೆಯಾಗಿದೆ. ಅಲ್ಲದೇ ದೇಶದ ಒಟ್ಟು 150 ಜಲಾಶಯಗಳ ಲೈವ್‌ ಸ್ಟೋರೇಜ್‌ ಶೇ.36ಕ್ಕೆ ಇಳಿಕೆಯಾಗಿದೆ ಎಂದು ಆಯೋಗ ಹೇಳಿದೆ.

ಕಳೆದ ವರ್ಷದಲ್ಲಿ ಮಳೆ ಅಭಾವ, ಹೆಚ್ಚುತ್ತಿರುವ ನಗರೀಕರಣದಿಂದಾಗಿ ಕೆರೆಗಳು ನಾಶವಾದ ಪರಿಣಾಮ ಬೆಂಗಳೂರು ನೀರು ಕೊರತೆಯಿಂದ ಭಾರೀ ಸಮಸ್ಯೆ ಎದುರಿಸುತ್ತಿದೆ.

150 ಜಲಾಶಯಗಳ ಒಟ್ಟು ಲೈವ್‌ ಸ್ಟೋರೇಜ್‌ ಸಾಮರ್ಥ್ಯವು 178 ಬಿಸಿಎಂ (ಬಿಲಿಯನ್‌ ಕ್ಯೂಬಿಕ್‌ ಮೀಟರ್ಸ್‌) ಆಗಿದ್ದು, ಇದು 257.812 ಬಿಸಿಎಂ ಲೈವ್‌ ಸ್ಟೋರೇಜ್‌ ಸಾಮರ್ಥ್ಯದ ಸುಮಾರು ಶೇ.69.35ರಷ್ಟು ಎಂದು ಗುರುವಾರ ಬಿಡುಗಡೆ ಮಾಡಲಾದ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ. ಈ ಜಲಾಶಯಗಳಲ್ಲಿ 64.606 ಬಿಸಿಎಂ ಇದ್ದು, ಅದು ಒಟ್ಟು ಲೈವ್‌ ಸ್ಟೋರೇಜ್‌ ಸಾಮರ್ಥ್ಯದ ಶೇ.36ರಷ್ಟಾಗಿದೆ. ಅಂದರೆ ಈ ಜಲಾಶಯಗಳಲ್ಲಿ ಈಗ ಶೇ.36ರಷ್ಟು ನೀರಿದೆ. ಕಳೆದ 10 ವರ್ಷಗಳಲ್ಲಿ ಈ ಲೈವ್‌ ಸ್ಟೋರೇಜ್‌ ಸರಾಸರಿ ಸಾಮರ್ಥ್ಯವು 66.644 ಬಿಸಿಎಂ ಎಂದು ತಿಳಿಸಿದೆ.

ವಾರದಿಂದ ವಾರಕ್ಕೆ ಕುಸಿತ

ಬೇಸಗೆ ಹಿನ್ನೆಲೆಯಲ್ಲಿ ಜಲಾಶಯಗಳಲ್ಲಿನ ನೀರಿನ ಸಂಗ್ರಹವು ವಾರದಿಂದ ವಾರಕ್ಕೆ ಕುಸಿಯುತ್ತಿದೆ. ಈ ಹಿಂದಿನ ವಾರ ಶೇ.38ರಷ್ಟಿತ್ತು, ಅದರ ಹಿಂದಿನ ವಾರ ಅದು ಶೇ.40ರಷ್ಟಿತ್ತು. ಉತ್ತರ ಭಾರತದ ಹಿಮಾಚಲ ಪ್ರದೇಶ, ಪಂಜಾಬ್‌, ರಾಜಸ್ಥಾನ ಸೇರಿದಂತೆ ಕೆಲವು ರಾಜ್ಯಗಳ ಲೈವ್‌ ಸ್ಟೋರೇಜ್‌ ಕುಸಿತವಾಗುತ್ತಿದೆ.

ಕರ್ನಾಟಕ, ತ.ನಾಡಿನಲ್ಲಿ ಜಲ ಸಂರಕ್ಷಣೆ ಅನಿವಾರ್ಯ!

ಹತ್ತು ವರ್ಷಗಳ ಸರಾಸರಿ ಹಾಗೂ ಕಳೆದ ವರ್ಷಕ್ಕೆ ಹೋಲಿಸಿದರೆ ದಕ್ಷಿಣ ಭಾರತದ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ಭಾರೀ ನೀರು ಸಂಗ್ರಹದಲ್ಲಿ ಕೊರತೆಯನ್ನು ಎದುರಿಸುತ್ತಿವೆ. ದಕ್ಷಿಣ ಭಾರತ ಜಲಾಶಯಗಳ ಒಟ್ಟು ಸಾಮರ್ಥ್ಯಗಳ ಪೈಕಿ ಕೇವಲ ಶೇ.22ರಷ್ಟು ಲೈವ್‌ ಸ್ಟೋರೇಜ್‌ ಇದೆ. ಜಲ ಸಂರಕ್ಷಣೆ ಮತ್ತು ಸುಸ್ಥಿರ ವ್ಯವಸ್ಥಾಪನ ಪದ್ಧತಿಗಳನ್ನು ಅಳವಡಿಕೊಳ್ಳುವ ಅಗತ್ಯವನ್ನು ಇದು ಒತ್ತಿ ಹೇಳುತ್ತಿದೆ ಎಂದು ಬಲೆಟಿನ್‌ ತಿಳಿಸಿದೆ.

ಇನ್ನು ಅಸ್ಸಾಮ್‌, ಝಾರ್ಖಂಡ್‌, ಒಡಿಶಾಗಳಲ್ಲಿ ಪರಿಸ್ಥಿತಿ ಸ್ವಲ್ಪ ಆಶಾದಾಯಕವಾಗಿದೆ. ಹಾಗೆಯೇ ಗುಜರಾತ್‌, ಮಹಾರಾಷ್ಟ್ರದಲ್ಲೂ ಕೊರತೆಯಾಗಿದ್ದು, ಕೇಂದ್ರ ಭಾರತದ ಉತ್ತರ ಪ್ರದೇಶ, ಮಧ್ಯ ಪ್ರದೇಶ ಜಲಾಶಯಗಳು ಕೂಡ ಲೈವ್‌ ಸ್ಟೋರೇಜ್‌ ಕೊರತೆಯನ್ನು ಎದುರಿಸುತ್ತಿವೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.