ಅಧಿಕಾರಿಗಳಿಂದ ಸುಪ್ರೀಂಗೆ ರಾಜೀನಾಮೆ ಮುಚ್ಚಳಿಕೆ
Team Udayavani, Aug 18, 2017, 8:35 AM IST
ಅಹ್ಮದಾಬಾದ್: ಸೊಹ್ರಾಬುದ್ದೀನ್ ಶೇಖ್ ಮತ್ತು ಇಶ್ರತ್ ಜಹಾನ್ ನಕಲಿ ಎನ್ಕೌಂಟರ್ ಪ್ರಕರಣದ ಆರೋಪಿಗಳಾಗಿರುವ ಗುಜರಾತ್ನ ಹಿರಿಯ ಪೊಲೀಸ್ ಅಧಿಕಾರಿಗಳಾದ ಎನ್.ಕೆ. ಅಮಿನ್ ಹಾಗೂ ತರುಣ್ ಬರೋಟ್ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡುವುದಾಗಿ ಸುಪ್ರೀಂ ಕೋರ್ಟ್ಗೆ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ.
ನಕಲಿ ಎನ್ಕೌಂಟರ್ ಆರೋಪದ ಹಿನ್ನೆಲೆಯಲ್ಲಿ ಈ ಇಬ್ಬರು ಅಧಿಕಾರಿಗಳು 2007ರಲ್ಲಿ ಜೈಲು ಶಿಕ್ಷೆಗೆ ಗುರಿಯಾ ಗಿದ್ದರು. ಅನಂತರ 2015ರಲ್ಲಿ ಬೇಲ್ ಪಡೆದು ಹೊರಬಂದ ಅಧಿಕಾರಿಗಳನ್ನು ಗುಜರಾತ್ ಸರಕಾರ ಮತ್ತೆ ಪೊಲೀಸ್ ಇಲಾಖೆಗೆ ನೇಮಕ ಮಾಡಿಕೊಂಡಿತ್ತು. ಅಮಿನ್, ತಾಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡರೆ, ಎರಡು ವರ್ಷಗಳ ಹಿಂದೆಯೇ ನಿವೃತ್ತರಾಗಿದ್ದ ಬರೋಟ್ ಪಶ್ಚಿಮ ರೈಲ್ವೇ ಡಿಎಸ್ಪಿಯಾಗಿ ಸೇವೆಗೆ ಸೇರಿದ್ದರು. ಜೈಲು ಶಿಕ್ಷೆ ಅನುಭವಿಸಿರುವ ಜತೆಗೆ ನಿವೃತ್ತಿ ಹೊಂದಿದ ಅಧಿಕಾರಿಗಳನ್ನು ಮತ್ತೆ ನೇಮಿಸಿದ ಕ್ರಮ ಪ್ರಶ್ನಿಸಿ ಐಪಿಎಸ್ ಅಧಿಕಾರಿಯೊಬ್ಬರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠ, “ಕೂಡಲೆ ಹುದ್ದೆ ತ್ಯಜಿಸಬೇಕು’ ಎಂದು ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು