ಕಣಿವೆ ರಾಜ್ಯ ಮತ್ತೆ ಪ್ರಕ್ಷುಬ್ಧ
Team Udayavani, Jun 3, 2018, 6:00 AM IST
ಹೊಸದಿಲ್ಲಿ /ಶ್ರೀನಗರ: ಕದನ ವಿರಾಮ ಘೋಷಣೆಯಿಂದ ಕಣಿವೆ ರಾಜ್ಯದಲ್ಲಿ ಶಾಂತಿ ಮೂಡಬಹುದು ಎಂಬ ನಿರೀಕ್ಷೆ ಸುಳ್ಳಾಗಿದೆ. ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಮುಂದಿನ ವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿರುವಂತೆಯೇ ಶ್ರೀನಗರದ ಹೊರವಲಯದ ಪರಿಸ್ಥಿತಿ ಬಿಗಡಾಯಿಸಿದೆ. ಶುಕ್ರವಾರ ಸಿಆರ್ಪಿಎಫ್ ಸಿಬಂದಿಯಿದ್ದ ವಾಹನದ ಮೇಲೆ ಪ್ರತಿಭಟನಕಾರರು ಕಲ್ಲು ತೂರಾಟ ನಡೆಸಿದ್ದು, ಕಲ್ಲೆಸೆತದಿಂದ ಪಾರಾಗಲು ಸಿಬಂದಿ ತಮ್ಮ ವಾಹನವನ್ನು ವೇಗವಾಗಿ ಓಡಿಸಿದ್ದರಿಂದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದ.
ಸಿಆರ್ಪಿಎಫ್ ವಾಹನ ಢಿಕ್ಕಿ ಹೊಡೆದಿದ್ದ ಯುವಕ ಶನಿವಾರ ಅಸುನೀಗಿದ್ದು, ಕಣಿವೆ ರಾಜ್ಯದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ, ಪೊಲೀಸರು ಸಿಆರ್ಪಿಎಫ್ ವಾಹನ ಚಾಲಕನ ವಿರುದ್ಧ ನಿರ್ಲಕ್ಷ್ಯದ ಚಾಲನೆ ಕೇಸು ದಾಖಲಿಸಿದ್ದರೆ, ಅನಾಮಧೇಯ ವ್ಯಕ್ತಿಗಳ ವಿರುದ್ಧ ಕಲ್ಲು
ತೂರಾಟದ ಕೇಸು ದಾಖಲಿಸಿದ್ದಾರೆ.
ಪ್ರಮುಖ ಸ್ಥಳಗಳಲ್ಲಿ ನಿಷೇಧಾಜ್ಞೆ: ಶುಕ್ರವಾರದ ಘಟನೆಯಲ್ಲಿ ಮೃತಪಟ್ಟ ಯುವಕನ ಮೃತದೇಹದ ಮೆರವಣಿಗೆ ಶನಿವಾರ ನಡೆದಿದ್ದು, ಈ ವೇಳೆಯೂ ಕಲ್ಲು ತೂರಾಟ, ಘರ್ಷಣೆಗಳು ನಡೆದಿವೆ. ಜತೆಗೆ ಘಟನೆ ಖಂಡಿಸಿ ಪ್ರತ್ಯೇಕತಾವಾದಿಗಳು ಬಂದ್ಗೆ ಕರೆ ಕೊಟ್ಟಿದ್ದಾರೆ. ಹೀಗಾಗಿ ಶ್ರೀನಗರದ ಪ್ರಮುಖ ಸ್ಥಳಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶ್ರೀನಗರ ಅಲ್ಲದೆ ಇನ್ನೂ ಹಲವು ಸ್ಥಳಗಳಲ್ಲಿ ವಾಣಿಜ್ಯ ಮಳಿಗೆಗಳು, ಶಿಕ್ಷಣ ಸಂಸ್ಥೆಗಳು ಬಂದ್ ಆಗಿವೆ.
ಇದೇ ವೇಳೆ ಸಿಆರ್ಪಿಎಫ್ ವಾಹನ ವ್ಯಕ್ತಿ ಮೇಲೆ ಹರಿದು ಹೋಗಿರುವ ಘಟನೆಯನ್ನು ಮಾಜಿ ಸಿಎಂ ಒಮರ್ ಅಬ್ದುಲ್ಲಾ ಟೀಕಿಸಿದ್ದಾರೆ. ಜತೆಗೆ ರಾಜ್ಯ ಪೊಲೀಸರು ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿಲ್ಲ. ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲವೆಂದು ಟೀಕಿಸಿ ಟ್ವೀಟ್ ಮಾಡಿದ್ದಾರೆ.
ಯಾಸಿನ್ ವಶಕ್ಕೆ: ಜೆಕೆಎಲ್ಎಫ್ ಮುಖ್ಯಸ್ಥ ಮೊಹಮ್ಮದ್ ಯಾಸಿನ್ ಮಲಿಕ್ನನ್ನು ಶನಿವಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಹುರಿಯತ್ ಕಾನ್ಫರೆನ್ಸ್ ಮುಖ್ಯಸ್ಥ ಮಿರ್ವೇಜ್ ಉಮರ್ ಫಾರೂಕ್ಗೆ ಗೃಹಬಂಧನ ವಿಧಿಸ ಲಾಗಿದೆ. ಯುವಕನ ಸಾವು ಖಂಡಿಸಿ ಪ್ರತಿಭಟನೆಗೆ ಇಳಿಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ