ಕೋಲಾಹಲಕ್ಕೆ ಬಲಿಯಾದ ಕಲಾಪ
Team Udayavani, Dec 19, 2017, 6:10 AM IST
ಹೊಸದಿಲ್ಲಿ: ಗುಜರಾತ್ ಚುನಾವಣೆಯ ಫಲಿತಾಂಶ ಹೊರಬಿದ್ದರೂ ಚುನಾವಣೆ ವೇಳೆ ನಡೆದ ವಾಗ್ಯು ದ್ಧದ ಕಾವು ಇಳಿದಿಲ್ಲ ಎನ್ನುವುದಕ್ಕೆ ಸೋಮವಾರದ ಸಂಸತ್ ಕಲಾಪವೇ ಸಾಕ್ಷಿ. ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ವಿರುದ್ಧ ನೀಡಿದ ಹೇಳಿಕೆಯನ್ನು ಪ್ರತಿಭಟಿಸಿ ವಿಪಕ್ಷಗಳು ಗದ್ದಲ ಎಬ್ಬಿಸಿದ ಕಾರಣ ಎರಡೂ ಸದನಗಳ ಕಲಾಪಗಳು ದಿನದ ಮಟ್ಟಿಗೆ ಮುಂದೂಡಲ್ಪಟ್ಟವು.
ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ, ವಿಪಕ್ಷ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಘೋಷಣೆ ಕೂಗಲಾರಂಭಿ ಸಿದರು. ಮನಮೋಹನ್ ಸಿಂಗ್ ವಿರುದ್ಧ ಮೋದಿ ಮಾಡಿರುವ ಆರೋಪಕ್ಕೆ ಸಂಬಂಧಿಸಿ ಪ್ರಧಾನಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು. ರಾಜ್ಯಸಭೆ ಯಲ್ಲಿ ಗದ್ದಲ ಜೋರಾದಾಗ ಅಸಮಾಧಾನಗೊಂಡ ಸಭಾಧ್ಯಕ್ಷ ವೆಂಕಯ್ಯ ನಾಯ್ಡು, “ಇಡೀ ದೇಶವೇ ನಿಮ್ಮನ್ನು ನೋಡುತ್ತಿದೆ,’ ಎಂದು ಹೇಳಿ, ಕಲಾಪವನ್ನು ಮಂಗಳವಾರಕ್ಕೆ ಮುಂದೂಡಿದರು.
ಇನ್ನು ಲೋಕಸಭೆಯಲ್ಲೂ ಇದೇ ಪರಿಸ್ಥಿತಿ ಕಾಣಿ ಸಿತು. ಆದರೆ ವಿಪಕ್ಷಗಳ ಗದ್ದಲದ ನಡುವೆಯೂ 5 ವಿಧೇಯಕಗಳನ್ನು ಮಂಡಿಸುವಲ್ಲಿ ಸರಕಾರ ಯಶಸ್ವಿಯಾಯಿತು. ಮಧ್ಯಾಹ್ನದವರೆಗೆ ಕಲಾಪ ಮುಂದೂಡಿದ ಸ್ಪೀಕರ್ ಸುಮಿತ್ರಾ ಮಹಾಜನ್, ಗದ್ದಲ ಕೊನೆಯಾಗದ ಕಾರಣ ದಿನದ ಮಟ್ಟಿಗೆ ಮುಂದೂಡಿದರು.
ಇದೇ ವೇಳೆ, ಹಣಕಾಸು ನಿರ್ಣಯ ಮತ್ತು ಠೇವಣಿ ವಿಮೆ ವಿಧೇಯಕವು ಬಜೆಟ್ ಅಧಿವೇಶ ನದಲ್ಲೂ ಮಂಡನೆಯಾಗುವ ಸಾಧ್ಯತೆಯಿಲ್ಲ. ಏಕೆಂದರೆ, ವಿಧೇಯಕವನ್ನು ಪರಿಶೀಲಿಸುತ್ತಿರುವ ಜಂಟಿ ಸಮಿತಿಯು, ವರದಿ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ಕೋರಿದ್ದು, ಅದಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಸ್ಪೀಕರ್ ಸುಮಿತ್ರಾ ತಿಳಿಸಿದ್ದಾರೆ.
ಬಿದಿರು “ಮರ’ವಲ್ಲ: ಮಸೂದೆ ಮಂಡನೆ
ಅರಣ್ಯೇತರ ಪ್ರದೇಶಗಳಲ್ಲಿನ ಬಿದಿರನ್ನು “ಮರ’ ಎಂಬ ವ್ಯಾಖ್ಯೆಯಿಂದ ಹೊರಗಿಡುವಂಥ ಭಾರತೀಯ ಅರಣ್ಯ (ತಿದ್ದುಪಡಿ) ಕಾಯ್ದೆ , 2017 ಅನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಅದರಂತೆ, ಈ ಪ್ರದೇಶಗಳಲ್ಲಿ ಬೆಳೆದ ಬಿದಿರು ಕತ್ತರಿಸುವ ಮತ್ತು ಸಾಗಾಟ ಮಾಡುವುದಕ್ಕೆ ಪರ ವಾನಿಗೆಯ ಅಗತ್ಯವಿರುವುದಿಲ್ಲ. ಇದೊಂದು ಪ್ರಮುಖ ಸುಧಾರಣಾ ಕ್ರಮವಾಗಿದ್ದು, ರೈತರಿಗೆ ಅನು ಕೂಲವಾಗಲಿದೆ. ರೈತರು ಬಿದಿರು ಬೆಳೆಯುವತ್ತ ಆಸಕ್ತಿ ವಹಿಸಲಿದ್ದು, ಅವರ ಆದಾಯವೂ ಹೆಚ್ಚಳವಾಗಲಿದೆ ಎಂದು ಮಸೂದೆಯನ್ನು ಮಂಡಿಸಿದ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
2 ಬಾರಿ ನೀಟ್ ಪರೀಕ್ಷೆ?
ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಲಿ ಎಂಬ ಕಾರಣಕ್ಕಾಗಿ ವರ್ಷದಲ್ಲಿ 2 ಬಾರಿ ನೀಟ್ ಮತ್ತು ಜೆಇಇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಲೋಕಸಭೆಯಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಹಾಯಕ ಸಚಿವ ಉಪೇಂದ್ರ ಕುಶ್ವಾಹಾ ತಿಳಿಸಿದ್ದಾರೆ. ಜತೆಗೆ, ಪರೀಕ್ಷೆ ನಡೆಸಲೆಂದೇ “ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ'(ಎನ್ಟಿಎ) ಎಂಬ ಸ್ವಾಯತ್ತ ಸಂಸ್ಥೆಯನ್ನು ರಚಿಸುತ್ತೇವೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ