ತಂತ್ರಜ್ಞಾನ ಬಳಸಿ ಕಳ್ಳತನ ತಪ್ಪಿಸಿದ ಎಂಜಿನಿಯರ್!
ಕಾನ್ಪುರದ ಮನೆಯಲ್ಲಿದ್ದ ಕಳ್ಳರ ಪತ್ತೆ ಹಚ್ಚಿದ ಟೆಕ್ಕಿ
Team Udayavani, Jan 20, 2022, 6:50 AM IST
ಲಕ್ನೋ: ತಂತ್ರಜ್ಞಾನ ಸಾಕಷ್ಟು ಮುಂದುವರಿ ದಿದೆ ಎನ್ನುವುದಕ್ಕೆ ಹಲವು ಉದಾಹರಣೆಗಳು ಸಿಗುತ್ತವೆ. ಕಾನ್ಪುರದಲ್ಲಿರುವ ಪೂರ್ವಜರ ಮನೆಯಲ್ಲಿ ನಡೆಯುತ್ತಿದ್ದ ಕಳ್ಳತನವನ್ನು ಸಾಫ್ಟ್ ವೇರ್ ಎಂಜಿನಿಯರ್ ಒಬ್ಬರು ತಪ್ಪಿಸಿದ್ದಾರೆ.
ಅಮೆರಿಕದ ನ್ಯೂಜೆರ್ಸಿಯಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿರುವ ವಿಜಯ್ ಅವಸ್ತಿ ಅವರ ಮೊಬೈಲ್ಗೆ ಸೋಮವಾರ ಮಧ್ಯರಾತ್ರಿ ಅಲರ್ಟ್ ಬಂದಿದೆ. ಅವರು, ಕಾನ್ಪುರದಲ್ಲಿ ರುವ ತಮ್ಮ ಪೂರ್ವಜರ ಮನೆಯಲ್ಲಿ ಅಳವಡಿಸಿದ್ದ ಸೆನ್ಸಾರ್ ಗಳು ಹಾಗೂ ಸಿಸಿಟಿವಿ ಕೆಮರಾ ಅವರಿಗೆ ಎಚ್ಚರಿಕೆಯ ಸಂದೇಶ ಕಳುಹಿಸಿ ಕೊಟ್ಟಿದೆ.
ತತ್ಕ್ಷಣ ಎಚ್ಚೆತ್ತುಕೊಂಡ ವಿಜಯ್, ಸಿಸಿಟಿವಿ ದೃಶ್ಯ ವೀಕ್ಷಿಸಿದಾಗ ಅಲ್ಲಿ ಕಳ್ಳರು ಮನೆಯ ಬೀಗ ಒಡೆಯುತ್ತಿರುವುದು ಗೊತ್ತಾಗಿದೆ. ತತ್ಕ್ಷಣ ಅವರು ಆ ಮನೆಯ ಲ್ಲಿದ್ದ ಸ್ಪೀಕರ್ಗಳ ಮೂಲಕ ಕಳ್ಳರಿಗೆ ಎಚ್ಚರಿಕೆ ನೀಡಿದ್ದರಾದರೂ ಕಳ್ಳರು ಡೋಂಟ್ ಕೇರ್ ಎನ್ನುವಂತೆ ತಮ್ಮ ಕೆಲಸ ಮುಂದುವರಿಸಿದ್ದಾರೆ. ಕಳ್ಳರ ನಡವಳಿಕೆ ಕಂಡು, ವಿಜಯ್ ಪಕ್ಕದ ಮನೆಯವರಿಗೆ ಕರೆ ಮಾಡಿ ವಿಚಾರ ಮುಟ್ಟಿಸಿದ್ದಾನೆ. ಅವರು ಸ್ಥಳೀಯ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದು, ಐದೇ ನಿಮಿಷಗಳಲ್ಲಿ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಆಗಿನ್ನೂ ಮನೆಯೊಳಗೇ ಇದ್ದ ಕಳ್ಳರು, ಓಡಿಹೋಗಲು ಪ್ರಯತ್ನಿಸಿದ್ದು, ಓರ್ವನ ಮೇಲೆ ಗುಂಡು ಹಾರಿಸಲಾಗಿದೆ. ಇನ್ನುಳಿದವರು ತಪ್ಪಿಸಿ ಕೊಂಡಿದ್ದಾಗಿ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ