ಖರೀದಿ ಹಬ್ಬದ ಕಳೆ; ವಾಹನ ಖರೀದಿಯಲ್ಲೂ ಬಹಳಷ್ಟು ಹೆಚ್ಚಳ

ಹಬ್ಬದ ಸಮಯದಲ್ಲಿ ಹೆಚ್ಚಿದ ಖರೀದಿ ; ಜಾಗತಿಕ ಹಿಂಜರಿತದ ನಡುವೆಯೂ ಚೇತರಿಕೆ

Team Udayavani, Oct 15, 2022, 7:00 AM IST

ಖರೀದಿ ಹಬ್ಬದ ಕಳೆ; ವಾಹನ ಖರೀದಿಯಲ್ಲೂ ಬಹಳಷ್ಟು ಹೆಚ್ಚಳ

ನವದೆಹಲಿ: ಕೊರೊನಾ ಕಾಲದಲ್ಲಿ ಹೆಚ್ಚು ಕಡಿಮೆ ಸ್ಥಗಿತವಾಗಿದ್ದ ಜನರ ಖರೀದಿ ಸಾಮರ್ಥ್ಯ, ಈಗ ಹಲವಾರು ಪಟ್ಟು ಏರಿಕೆಯಾಗಿದ್ದು, ಆರ್ಥಿಕ ಚೇತರಿಕೆಯ ಆಶಾಭಾವ ತೋರುತ್ತಿದೆ.

ಸೆಪ್ಟೆಂಬರ್‌ ಕಡೆಯ ವಾರದಲ್ಲಿ ಆರಂಭವಾಗಿರುವ “ಖರೀದಿ ಹಬ್ಬ’ ನವೆಂಬರ್‌ ಮೊದಲ ವಾರದ ವರೆಗೂ ಮುಂದುವರಿಯಲಿದೆ ಎಂದು ಅಖಿಲ ಭಾರತ ವ್ಯಾಪಾರಸ್ಥರ ಒಕ್ಕೂಟ(ಸಿಎಐಟಿ) ಅಭಿಪ್ರಾಯಪಟ್ಟಿದೆ. ಅಂದರೆ, ಈ ಅವಧಿಯಲ್ಲಿ ಅಂದಾಜು 27 ಬಿಲಿಯನ್‌ ಅಮೆರಿಕನ್‌ ಡಾಲರ್‌ನಷ್ಟು ವಹಿವಾಟನ್ನು ಕಾಣಬಹುದಾಗಿದೆ ಎಂದಿದೆ.

ಈ ವೇಳೆಯಲ್ಲಿ ಗ್ರಾಹಕರು ಕಾರುಗಳು, ದ್ವಿಚಕ್ರವಾಹನಗಳು, ಟೀವಿ, ಫ್ರಿಜ್‌, ಪ್ರವಾಸ, ಆಭರಣ ಖರೀದಿಯನ್ನು ಎಗ್ಗಿಲ್ಲದೇ ಮಾಡಿದ್ದಾರೆ. ಈ ಮೂಲಕ ಆರ್ಥಿಕತೆಗೆ ಜೀವ ತುಂಬಿದ್ದಾರೆ ಎಂದು ಸಿಎಐಟಿ ಹೇಳಿದೆ.

ಈ ಅವಧಿಯಲ್ಲಿ ಖರೀದಿಯನ್ನು ಕೊರೊನಾ ಪೂರ್ವಕ್ಕೆ ಹೋಲಿಕೆ ಮಾಡಿದರೆ ದುಪ್ಪಟ್ಟಾಗಿದೆ. ಹಾಗೆಯೇ, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಶೇ.25ರಷ್ಟು ಹೆಚ್ಚಾಗಿದೆ.

ಒಟ್ಟಾರೆಯಾಗಿ 15.2 ಬಿಲಿಯನ್‌ ಅಮೆರಿಕನ್‌ ಡಾಲರ್‌ನಷ್ಟು ಆಫ್ಲೈನ್‌ ಮಾರಾಟ ಮತ್ತು 11.8 ಬಿಲಿಯನ್‌ ಅಮೆರಿಕನ್‌ ಡಾಲರ್‌ನಷ್ಟು ಆನ್‌ಲೈನ್‌ ಸೇಲ್‌ ಆಗಿದೆ ಎಂದು ಮಾರುಕಟ್ಟೆ ತಿಳಿಸಿದೆ.

ಸಾಮಾನ್ಯವಾಗಿ ಪ್ರತಿವರ್ಷವೂ ಚಿಲ್ಲರೆ ವ್ಯಾಪಾರ ಈ ಸೆಪ್ಟೆಂಬರ್‌, ಅಕ್ಟೋಬರ್‌ ಮತ್ತು ನವೆಂಬರ್‌ ವೇಳೆಯಲ್ಲಿ ತುಸು ಹೆಚ್ಚಾಗಿಯೇ ಇರುತ್ತದೆ. ಇದಕ್ಕೆ ಪ್ರಮುಖ ಕಾರಣ, ಈ ತಿಂಗಳುಗಳಲ್ಲಿ ಒಂದರ ಹಿಂದೆ ಒಂದು ಹಿಂದೂ ಹಬ್ಬಗಳು ಬರುತ್ತವೆ. ಜತೆಗೆ ಮದುವೆಯ ಸೀಸನ್‌ ಕೂಡ ಇರುತ್ತದೆ. ಹಾಗೆಯೇ ಈ ಅವಧಿಯಲ್ಲಿ ಖರೀದಿ ಮಾಡುವುದು ಉತ್ತಮ ಎಂಬ ನಂಬಿಕೆಯೂ ಜನರಲ್ಲಿದೆ. ಹೀಗಾಗಿಯೇ ಈ ಸಂದರ್ಭದಲ್ಲಿ ಹೆಚ್ಚಾಗಿ ಖರೀದಿ ಮಾಡುತ್ತಾರೆ ಎಂದು ವ್ಯಾಪಾರಿಗಳ ಒಕ್ಕೂಟ ಹೇಳಿದೆ.

ಈಗ ಹೆಚ್ಚು ಏಕೆ?
ಕೊರೊನಾ ಕಾಣಿಸಿಕೊಂಡ ನಂತರದಲ್ಲಿ ಜನರಲ್ಲಿನ ಖರೀದಿ ಸಾಮರ್ಥ್ಯವೇ ಹೆಚ್ಚು ಕಡಿಮೆ ನಿಂತುಹೋಗಿತ್ತು. ಕೆಲಸ ಕಳೆದುಕೊಂಡವರು, ವೇತನ ಕಡಿತಗೊಂಡವರು ಹೆಚ್ಚಾಗಿದ್ದರಿಂದ, ಇಂಥ ವಸ್ತುಗಳ ಖರೀದಿಗೆ ಹೆಚ್ಚು ಆಸಕ್ತಿ ತೋರಿರಲಿಲ್ಲ. ಆದರೆ, ಈ ವರ್ಷದ ಈ ಹಬ್ಬದ ಋತುವಿನಲ್ಲಿ ಕೊರೊನಾದ ಭಯವೇನಿಲ್ಲ. ಹಾಗೆಯೇ, ಕಂಪನಿಗಳು ಜನರಿಗೆ ಉದ್ಯೋಗವಕಾಶ ಹೆಚ್ಚಿಸುತ್ತಿರುವುದಲ್ಲದೇ, ವೇತನ ಹೆಚ್ಚಳ, ಬಡ್ತಿ, ಬೋನಸ್‌ ಕೂಡ ನೀಡುತ್ತಿವೆ. ಹೀಗಾಗಿ, ಖರೀದಿ ಹೆಚ್ಚಾಗಿದೆ ಎಂದು ಮೂಲಗಳು ಹೇಳಿವೆ.

ಮುಖ್ಯಾಂಶಗಳು
1. ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಗಣನೀಯ ಏರಿಕೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ, ಈ ತಿಂಗಳ ಆರಂಭದಲ್ಲಿ ಶೇ.57ರಷ್ಟು ಹೆಚ್ಚಳ.
2. ಸೆಪ್ಟೆಂಬರ್‌ ತಿಂಗಳಲ್ಲಿ ಗೃಹ ಮಾರಾಟವೂ ಹಿಂದಿನ ವರ್ಷದ ಇದೇ ವೇಳೆಗೆ ಹೋಲಿಕೆ ಮಾಡಿದರೆ ಶೇ.70ರಷ್ಟು ಹೆಚ್ಚಳ. ಅದೂ ದೇಶದ ಪ್ರಮುಖ ಏಳು ನಗರಗಳಲ್ಲಿ ಖರೀದಿ ಹೆಚ್ಚಳ.
3. ನಗರ ಪ್ರದೇಶದಲ್ಲಿ ಆಭರಣ ಖರೀದಿಯೂ ಹೆಚ್ಚಳ. ಮಳೆಯ ಕಾರಣದಿಂದಾಗಿ ಗ್ರಾಮಾಂತರ ಪ್ರದೇಶದಲ್ಲಿ ಒಂದಷ್ಟು ಕಡಿಮೆ.
4. ಪೆಟ್ರೋಲ್‌ ಮತ್ತು ವಾಹನಗಳ ದರ ಏರಿಕೆ ಹೊರತಾಗಿಯೂ ಕಾರುಗಳ ಖರೀದಿಯಲ್ಲೂ ಗಣನೀಯ ಏರಿಕೆ.
5. ಚಿಲ್ಲರೆ ವ್ಯಾಪಾರದಲ್ಲೂ 2021ರ ಸೆಪ್ಟೆಂಬರ್‌ಗಿಂತ ಈ ಬಾರಿ ಶೇ.26ರಷ್ಟು ಹೆಚ್ಚಳ
6. ಗಾರ್ಮೆಂಟ್ಸ್‌, ಬಂಗಾರ, ಮನೆ ಖರೀದಿಯಲ್ಲಿ ಈ ಹಬ್ಬದ ಋತುವಿನಲ್ಲಿ ಶೇ.76 ಹೆಚ್ಚಳವಾಗುವ ಸಾಧ್ಯತೆ

ಹಣದುಬ್ಬರ ಇಳಿಕೆ
ಆರ್ಥಿಕ ಚೇತರಿಕೆಯ ಖುಷಿ ಸುದ್ದಿ ನಡುವೆಯೇ, ಸೆಪ್ಟೆಂಬರ್‌ನಲ್ಲಿ ದೇಶದ ಹಣದುಬ್ಬರ ಪ್ರಮಾಣವೂ ಶೇ.10.7ಕ್ಕೆ ಇಳಿಕೆಯಾಗಿದೆ. ಇದು ಹೋಲ್‌ಸೇಲ್‌ ಬೆಲೆ ಆಧಾರಿತ ಹಣದುಬ್ಬರವಾಗಿದ್ದು 18 ತಿಂಗಳ ಹಿಂದಿನ ಹಂತಕ್ಕೆ ತಲುಪಿದೆ. 2021ರ ಏಪ್ರಿಲ್‌ನಲ್ಲಿ ಈ ಪ್ರಮಾಣದಲ್ಲಿ ಹಣದುಬ್ಬರ ಇತ್ತು. ಆಗಸ್ಟ್‌ನಲ್ಲಿ ಶೇ.12.41ರಷ್ಟಿದ್ದ ಹಣದುಬ್ಬರ ಸೆಪ್ಟೆಂಬರ್‌ಗೆ ಕಡಿಮೆಯಾಗಿದೆ. ಹಾಗೆಯೇ, ಕಳೆದ ವರ್ಷದ ಸೆಪ್ಟೆಂಬರ್‌ನಲ್ಲೂ ಶೇ.11.80ರಷ್ಟು ಹಣದುಬ್ಬರ ಪ್ರಮಾಣವಿತ್ತು.

ಅಗತ್ಯವಸ್ತುಗಳ ದರದಲ್ಲಿ ಕೊಂಚ ಇಳಿಕೆಯಾಗುತ್ತಿರುವುದು ಮತ್ತು ಮುಂದಿನ ದಿನಗಳಲ್ಲಿ ಇನ್ನಷ್ಟು ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ಮೇರೆಗೆ ಹಣದುಬ್ಬರದಲ್ಲಿ ಇಳಿಕೆಯಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಭಾರತದ ಆರ್ಥಿಕತೆಯು ಸುಸ್ಥಿರ ಹಾದಿಯಲ್ಲಿದ್ದು, ಆರ್ಥಿಕ ಹಿಂಜರಿತವನ್ನು ಸಮರ್ಥವಾಗಿ ಎದುರಿಸುತ್ತದೆ. ಆದರೂ, ಜಾಗತಿಕ ಮಟ್ಟದಲ್ಲಿ ಆರ್ಥಿಕ ಹಿಂಜರಿತ ಕಾಣಿಸಿಕೊಂಡರೆ, ನಮ್ಮ ರಫ್ತಿಗೆ ತೊಂದರೆಯಾಗುತ್ತದೆ. ಡಾಲರ್‌ ಮುಂದೆ ರೂಪಾಯಿ ಮೌಲ್ಯ ಕಡಿಮೆಯಾಗುತ್ತದೆ. ಈ ಎಲ್ಲ ಸಂಗತಿಗಳು ಅರಿವಿದ್ದು, ನಾವು ಚೇತರಿಕೆಯ ಹಾದಿಯಲ್ಲಿದ್ದೇವೆ.
-ನಿರ್ಮಲಾ ಸೀತಾರಾಮನ್‌, ಕೇಂದ್ರ ವಿತ್ತ ಸಚಿವೆ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.