ಹೊಸ ರಾಜ್ಯ ರಚನೆ ಇಲ್ಲ


Team Udayavani, Aug 4, 2021, 7:20 AM IST

ಹೊಸ ರಾಜ್ಯ ರಚನೆ ಇಲ್ಲ

ಹೊಸದಿಲ್ಲಿ: ದೇಶದಲ್ಲಿ ಹೊಸ ರಾಜ್ಯ ರಚಿಸುವ ಪ್ರಸ್ತಾವ ಸರಕಾರದ ಮುಂದೆ ಇಲ್ಲ ಎಂದು ಲೋಕಸಭೆಗೆ ಮಂಗಳವಾರ ಮಾಹಿತಿ ನೀಡಲಾಗಿದೆ. ಪ್ರಶ್ನೋತ್ತರ ವೇಳೆಯಲ್ಲಿ ಕೇಂದ್ರ ಗೃಹ ಖಾತೆ ಸಹಾಯಕ ಸಚಿವ  ನಿತ್ಯಾನಂದ ರಾಯ್‌ ಅವರು ಈ ಮಾಹಿತಿ ನೀಡಿದ್ದಾರೆ.

ಇತ್ತೀಚೆಗಷ್ಟೇ ತಮಿಳುನಾಡಿನಲ್ಲಿ ಕೊಂಗು ಪ್ರದೇಶವನ್ನು ಪ್ರತ್ಯೇಕವಾಗಿ ರಾಜ್ಯ ಮಾಡಬೇಕು ಎಂಬ ಬಗ್ಗೆ ಚರ್ಚೆಗಳು ಎದ್ದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದ ಉತ್ತರ ಮಹತ್ವ ಪಡೆದಿದೆ. “ದೇಶದ ವಿವಿಧ ಭಾಗಗಳಿಂದ ಹೊಸ ರಾಜ್ಯ ರಚನೆ ಮಾಡಬೇಕು ಎಂಬ ಬಗ್ಗೆ ವಿವಿಧ ಸಂಘಟನೆ ಗಳಿಂದ ಮತ್ತು ಪ್ರಮುಖರಿಂದ ಕೇಂದ್ರ ಸರಕಾರಕ್ಕೆ ಮನವಿಗಳು ಸಲ್ಲಿಕೆಯಾಗುತ್ತಿವೆ. ಹೊಸ ರಾಜ್ಯ ರಚನೆ ಮಾಡಿದರೆ ಅದರಿಂದ ದೂರಗಾಮಿ ಪರಿಣಾಮ ಎದುರಿಸಬೇಕಾಗುತ್ತದೆ. ಜತೆಗೆ ಹೆಚ್ಚು ರಾಜ್ಯಗಳಿಂದಾಗಿ ಒಕ್ಕೂಟ ವ್ಯವಸ್ಥೆಗೇ ಮುಂದಿನ ದಿನಗಳಲ್ಲಿ ಸಮಸ್ಯೆಯಾಗಿ ಕಾಡಬಹುದು’ ಎಂದು ತಮಿಳುನಾಡಿನ ಸಂಸದರಾಗಿರುವ ಟಿ.ಆರ್‌. ಪಾರಿವೇಂದರ್‌ ಮತ್ತು ಎಸ್‌.ರಾಮಲಿಂಗಂ ಕೇಳಿದ ಪ್ರಶ್ನೆಗೆ ರಾಯ್‌ ಉತ್ತರಿಸಿದ್ದಾರೆ. ಆಂಧ್ರಪ್ರದೇಶವನ್ನು ವಿಭಜಿಸಿ 2014ರಲ್ಲಿ ಆ ಸಂದರ್ಭದ ಕೇಂದ್ರ ಸರಕಾರ ತೆಲಂಗಾಣ ಎಂಬ ಹೊಸ ರಾಜ್ಯ ರಚನೆ ಮಾಡಿತ್ತು. ಅನಂತರ ಯಾವುದೇ ಹೊಸ ರಾಜ್ಯಗಳು ರಚನೆಯಾಗಿಲ್ಲ. ಆ ಸಂದರ್ಭದಲ್ಲಿಯೇ ಹಲವಾರು ಹೊಸ ರಾಜ್ಯಗಳ ಬೇಡಿಕೆಗೆ ಅರ್ಜಿ ಸಲ್ಲಿಕೆಯಾಗಿತ್ತು.

ನಾಯ್ಡು ಚರ್ಚೆ:

ಸಂಸತ್‌ನಲ್ಲಿ ಕಲಾಪ ನಡೆಯದೇ ಇರುವ ಬಗ್ಗೆ ರಾಜ್ಯಸಭೆ ಸಭಾಪತಿ ಎಂ.ವೆಂಕಯ್ಯ ನಾಯ್ಡು ಆತಂಕ ವ್ಯಕ್ತಪಡಿಸಿದ್ದಾರೆ. ಬಿಕ್ಕಟ್ಟು ಪರಿಹಾರಕ್ಕಾಗಿ ಮೇಲ್ಮನೆಯಲ್ಲಿನ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವರಾಗಿರುವ ಅಮಿತ್‌ ಶಾ, ರಾಜನಾಥ್‌ ಸಿಂಗ್‌, ಪ್ರಹ್ಲಾದ್‌ ಜೋಶಿ, ಸದನ ನಾಯಕ ಪಿಯೂಷ್‌ ಗೋಯಲ್‌ ಜತೆಗೆ ಉಪರಾಷ್ಟ್ರಪತಿ ಸಭೆಯನ್ನೂ ನಡೆಸಿದ್ದಾರೆ.

ಎರಡು ಮಸೂದೆಗಳಿಗೆ ಅಂಗೀಕಾರ :

ಪೆಗಾಸಸ್‌, ಕೃಷಿ ಕಾಯ್ದೆ ವಿಚಾರಕ್ಕಾಗಿ ಲೋಕ ಸಭೆಯಲ್ಲಿ ಮಂಗಳವಾರವೂ ಕಲಾಪ ನಡೆಸಲು ಅಡ್ಡಿಯಾಯಿತು. ವಿಪಕ್ಷಗಳ ಕೋಲಾಹಲ, ಗಲಾಟೆ ನಡುವೆಯೇ ನ್ಯಾಯಮಂಡಳಿಗಳ ಸುಧಾರಣೆ ಮಸೂದೆ ಮತ್ತು ಅಗತ್ಯ ರಕ್ಷಣ ಸೇವೆಗಳ ಮಸೂದೆ 2021ಕ್ಕೆ ಕೇಂದ್ರ ಸರಕಾರ ಸದನದ ಅನು ಮೋದನೆ ಪಡೆದುಕೊಂಡಿದೆ. 12 ಗಂಟೆಗೆ ಪ್ರಶ್ನೋತ್ತರ ವೇಳೆ ಮುಕ್ತಾಯವಾಗು ತ್ತಿದ್ದಂತೆಯೇ ಸ್ಪೀಕರ್‌ ಓಂ ಬಿರ್ಲಾ ಕೃಷಿಕರ ಸಮಸ್ಯೆ ಬಗ್ಗೆ ಚರ್ಚೆ ನಡೆಸಲಾ ಗುತ್ತದೆ. ವಿಪಕ್ಷಗಳ ಸಂಸದರು ತಮ್ಮ ಆಸನಕ್ಕೆ ವಾಪಸಾಗಬೇಕು ಎಂದು ಮನವಿ ಮಾಡಿದರೂ, ವ್ಯರ್ಥವಾಯಿತು. ಸಂಜೆ 4 ಗಂಟೆಗೆ ಕಲಾಪವನ್ನು ಬುಧವಾರಕ್ಕೆ ಮುಂದೂಡ ಲಾಯಿತು.

ರಾಜ್ಯಸಭೆ ಯಲ್ಲಿ ಕೂಡ ಕೋಲಾಹಲದ ನಡುವೆಯೇ ದಿವಾಳಿ ಸಂಹಿತೆ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸ ಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ “ವಿಪಕ್ಷಗಳ ಅನುಚಿತ ವರ್ತನೆ ಹೊಸ ರೀತಿಯ ಸಂಪ್ರದಾಯಕ್ಕೆ ನಾಂದಿ ಹಾಡಲಿದೆ’ ಎಂದು ಟೀಕಿಸಿದರು.

ಸಂಸತ್‌ ಅಧಿವೇಶನ ಸುಗಮವಾಗಿ ನಡೆಯುವುದರ ಬಗ್ಗೆ ಸರಕಾರ ಮತ್ತು ವಿಪಕ್ಷಗಳು ಒಟ್ಟಾಗಿ ಕುಳಿತು ಸಮಾಲೋಚನೆ ನಡೆಸಬೇಕು. ಅಲ್ಲಿ ಬಿಕ್ಕಟ್ಟು ಪರಿಹಾರ ಮಾಡಿ, ಕಲಾಪ ನಡೆಯುವಂತೆ ಮಾಡಬೇಕು.-ಎಂ.ವೆಂಕಯ್ಯ ನಾಯ್ಡು, ರಾಜ್ಯಸಭೆ ಸಭಾಪತಿ

 

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.