ವಿಭಿನ್ನ ಹೋರಾಟಗಾರ ಮಾಜಿ ಸಂಸದ ಇನ್ನಿಲ್ಲ
Team Udayavani, Sep 22, 2019, 5:45 AM IST
ಅಮರಾವತಿ: ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ತೆಲುಗು ದೇಶಂ ಪಕ್ಷ(ಟಿಡಿಪಿ)ದ ನಾಯಕ ನರಮಲ್ಲಿ ಶಿವಪ್ರಸಾದ್(68) ಅವರು ಚೆನ್ನೈನಲ್ಲಿ ಶನಿವಾರ ನಿಧನರಾಗಿದ್ದಾರೆ. ದೇಶಕ್ಕೆ ಸಂಬಂಧಿಸಿದ ಅನೇಕ ವಿಚಾರಗಳ ಕುರಿತು ಸರ್ಕಾರದ ಗಮನ ಸೆಳೆಯಲೆಂದು ಸಂಸತ್ ಅಧಿವೇಶನಕ್ಕೆ ವಿಭಿನ್ನ ವೇಷಗಳನ್ನು ಧರಿಸಿ ಆಗಮಿಸುತ್ತಿದ್ದ ಶಿವಪ್ರಸಾದ್ ಅವರು, ತಮ್ಮ ವಿನೂತನ ಶೈಲಿಯ ಪ್ರತಿಭಟನೆಗಳಿಂದಲೇ ಮನೆ ಮಾತಾಗಿದ್ದರು. ಚಿತ್ತೂರು ಕ್ಷೇತ್ರದಿಂದ 2 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಅವರು, ಅವಿಭಜಿತ ಆಂಧ್ರದಲ್ಲಿ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಕಿಡ್ನಿ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಶನಿವಾರ ಬೆಳಗ್ಗೆ ಚೆನ್ನೈನ ಆಸ್ಪತ್ರೆಯಲ್ಲಿ ಕೊನೆಯುಸಿರೆ ಳೆದಿದ್ದಾರೆ. ಶ್ರೀಕೃಷ್ಣ, ಶ್ರೀರಾಮ, ಅಡಾಲ್ಫ್ ಹಿಟ್ಲರ್, ಛತ್ರಪತಿ ಶಿವಾಜಿ ಮಹರಾಜ್, ಎಂ.ಜಿ.ರಾಮಚಂದ್ರನ್, ರೈತ, ಮುಸ್ಲಿಂ ಧರ್ಮಗುರು ಹೀಗೆ ನಾನಾ ವೇಷಗಳಲ್ಲಿ ಅವರು ಸಂಸತ್ನಲ್ಲಿ ಪ್ರತ್ಯಕ್ಷರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
MUST WATCH
ಹೊಸ ಸೇರ್ಪಡೆ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?